ಮಧ್ಯರಾತ್ರಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಂಗಳೂರು ಪೊಲೀಸರು
Team Udayavani, Apr 26, 2021, 1:01 PM IST
ಮಂಗಳೂರು: ಮಧ್ಯರಾತ್ರಿ ವೇಲೆ ಗರ್ಭಿಣಿಯನ್ನು ಕರೆದುಕೊಂಡು ಬರುತ್ತಿದ್ದ ಕಾರು ಕೆಟ್ಟುಹೋದ ಸಂದರ್ಭ. ಗಸ್ತು ಪೊಲೀಸರು ತಮ್ಮ ವಾಹನದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಳೆದ ಶುಕ್ರವಾರ ರಾತ್ರಿ 1.15ರ ಸುಮಾರಿಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಹರೀಶ್ ಮತ್ತು ಸಿಪಿಸಿ ವಿಜಯ್ ಕುಮಾರ್ ಅವರು ಅರ್ಕುಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದರು. ಗುರುವಾಯನಕೆರೆಯ ಸಿದ್ದಿಕ್ ಎಂಬವರ ತುಂಬು ಗರ್ಭಿಣಿ ಪತ್ನಿ ಶಾಹೀದಾ ಬಾನು ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಲು ಈ ಮಾರ್ಗವಾಗಿ ಬರುತ್ತಿದ್ದರು.
ಇದನ್ನೂ ಓದಿ:ಶಾಸಕಿ ಹೆಬ್ಬಾಳಕರ್ ಆಸ್ಪತ್ರೆಯಿಂದ ಬಿಡುಗಡೆ; ಮೇ 5ರ ವರೆಗೆ ಹೋಮ್ ಕ್ವಾರಂಟೈನ್
ಅರ್ಕುಳ ಬಳಿ ಅವರ ಕಾರು ಕೆಟ್ಟು ಹೋಗಿದ್ದು, ಅದೇ ಪ್ರದೇಶದಲ್ಲಿ ಬರುತ್ತಿದ್ದ ಪೊಲೀಸರು ಅವರನ್ನು ಕಂಡು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪೊಲೀಸರ ಕಾರ್ಯವನ್ನು ಮೆಚ್ಚಿ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಇಬ್ಬರು ಸಿಬ್ಬಂದಿಯನ್ನು ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ