ಮಂಗಳೂರು ದಕ್ಷಿಣ: ಜೆ.ಆರ್‌. ಲೋಬೋ ನಾಮಪತ್ರ ಸಲ್ಲಿಕೆ


Team Udayavani, Apr 24, 2018, 12:48 PM IST

poonja.jpg

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಜೆ.ಆರ್‌.ಲೋಬೊ ಅವರು ಮರು ಆಯ್ಕೆ ಬಯಸಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಸೋಮವಾರ ಅಪಾರ ಸಂಖ್ಯೆ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

35 ವರ್ಷಗಳ ಕಾಲ ಸರಕಾರಿ ಅಧಿಕಾರಿಯಾಗಿ ವಿವಿಧ ಇಲಾಖೆಗಳಲ್ಲಿ  ಸೇವೆ ಸಲ್ಲಿಸಿ ಅಪಾರ ಆಡಳಿತಾನುಭವ ಹೊಂದಿರುವ ಲೋಬೊ ಅವರು 2013ರ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು.

ಮಂಗಳೂರು ನಗರದ ಹೃದಯ ಭಾಗ ಮತ್ತು ಹೊರ ವಲಯದ ಕೆಲವು ಪ್ರದೇಶಗಳ ವ್ಯಾಪ್ತಿಯನ್ನು ಹೊಂದಿರುವ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಐದು ವರ್ಷಗಳ ತಮ್ಮ ಅವಧಿಯಲ್ಲಿ ಆಡಳಿತ ಸೇವಾ ಅನುಭವವನ್ನು ಸಮರ್ಥವಾಗಿ ಬಳಸಿಕೊಂಡು ಹಲವು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತಂದಿದ್ದರು.

ಅಭಿವೃದ್ಧಿಯ ರಾಜಕೀಯ
ರಾಜಕಾರಣಿಯಾಗಿ “ನನಗೆ ಅಭಿವೃದ್ಧಿಯ ರಾಜಕೀಯವಷ್ಟೇ ಗೊತ್ತು’ ಎನ್ನುವ ಲೋಬೋ, ಮಂಗಳೂರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ರಾಷ್ಟ್ರದಲ್ಲೇ ಅತ್ಯುತ್ತಮ ನಗರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ದುಡಿದಿದ್ದರು. ಎಲ್ಲ ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನುವುದು ಕ್ಷೇತ್ರದ ಕೆಲವು ಮತದಾರರ ಅಭಿಪ್ರಾಯ.

ನಗರದ ರಸ್ತೆ, ಒಳ ಸಂಪರ್ಕ ರಸ್ತೆ, ಫುಟ್‌ಪಾತ್‌, ಕುಡಿಯುವ ನೀರು, ರೈಲ್ವೇ ಅಂಡರ್‌ಪಾಸ್‌, ಎಡಿಬಿ ಯೋಜನೆ, ಘನ ತ್ಯಾಜ್ಯ ನಿರ್ವಹಣೆ, ಮಾರುಕಟ್ಟೆ ಅಭಿವೃದ್ಧಿ, ಕದ್ರಿ ಪಾರ್ಕ್‌ ಅಭಿವೃದ್ಧಿ, ಕದ್ರಿ ಪಾರ್ಕ್‌ನ ಪುಟಾಣಿ ರೈಲು, ಸಂಗೀತ ಕಾರಂಜಿ, ಬಡ ಜನರಿಗೆ ಸೂರು, ನಿವೇಶನ, ಹಕ್ಕುಪತ್ರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ ಪುನರ್ವಸತಿ, ಕೆರೆಗಳ ಅಭಿವೃದ್ಧಿಯತ್ತ ಗಮನಹರಿಸಿದ್ದರು.

ಮತ್ತಷ್ಟು ಅಭಿವೃದ್ಧಿಯ ಆಶಯ
ಮಂಗಳೂರಿಗೆ ಸಂಬಂಧಿಸಿದಂತೆ, ರಾಷ್ಟ್ರದಲ್ಲೇ ಪ್ರಥಮ ಎನ್ನಲಾದ 3ಡಿ ಪ್ಲಾನೆಟೋರಿಯಂ (ತಾರಾಲಯ) 36 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳದಲ್ಲಿ ನಿರ್ಮಾಣಗೊಂಡಿದ್ದು, ಅದರ ಉದ್ಘಾಟನೆಯೂ 2018ರ ಮಾರ್ಚ್‌ 1ರಂದು ನೆರವೇರಿತ್ತು. ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣ, ಪ್ರವಾಸೋದ್ಯಮ ಸಹಿತ ಇನ್ನೂ ಅನೇಕ ಯೋಜನೆಗಳ ಅನುಷ್ಠಾನ ಜಾರಿಯಲ್ಲಿದೆ. ಮಂಗಳೂರು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿರುವ ವಿಶ್ವದ 6ನೇ ನಗರ. ಕರಾವಳಿಯ ಪ್ರಮುಖ ವಾಣಿಜ್ಯ ನಗರಿಯಾಗಿರುವ ಮಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಆಶಯವನ್ನು ಮರು ಆಯ್ಕೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಅವರು ಬೆಳಗ್ಗೆ ನಗರದ ವಿವಿಧ ಪೂಜಾ ಸ್ಥಳಗಳಿಗೆ ಭೇಟಿ ನೀಡಿ ಧಾರ್ಮಿಕ ಸಾಮರಸ್ಯ ಕಾಪಾಡಲು ಸಾಧ್ಯವಾಗುವಂತೆ ಹಾಗೂ ತನ್ಮೂಲಕ ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕೋರಿ ಪ್ರಾರ್ಥನೆ ಸಲ್ಲಿಸಿದರು.

ಮತ ಯಾಚನೆ ಹಾಗೂ ಪ್ರಚಾರ ಕಾರ್ಯವನ್ನೂ ಲೋಬೋ ಚುರುಕುಗೊಳಿಸಿದ್ದಾರೆ. ಈಗಾಗಲೇ ಮನೆ-ಮನೆಗೆ ಭೇಟಿ ನೀಡಿ ಮತದಾರರ ಮನ ಗೆಲ್ಲುವತ್ತ ಕಾರ್ಯ ನಿರತರಾಗಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.