ಮಂಗಳೂರು: ವಿದ್ಯಾರ್ಥಿನಿಯ ಕೊಲೆ

ಕುತ್ತಿಗೆಗೆ ವೈರ್‌ ಬಿಗಿದು ಕೊಲೆ ಮಾಡಿದ ರೀತಿ ಚಿಕ್ಕಮಗಳೂರು ಯುವತಿಯ ಶವ ಪತ್ತೆ

Team Udayavani, Jun 7, 2019, 11:55 PM IST

0706MLR101

ಮಂಗಳೂರು: ಬ್ಯಾಂಕಿಂಗ್‌ ಪರೀಕ್ಷೆ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಕೊಲೆಯಾದ ಘಟನೆ ಶುಕ್ರವಾರ ಸಂಜೆ ನಗರದಲ್ಲಿ ನಡೆದಿದೆ.

ಚಿಕ್ಕಮಗಳೂರಿನ ತರೀಕೆರೆಯ ಮಂಜುನಾಥ ವೈ.ಎನ್‌ ಎಂಬವರ ಪುತ್ರಿ ಅಂಜನಾ ವಸಿಷ್ಠ (22) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದಾಳೆ.

ಅಂಜನಾ ಉಜಿರೆಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಎಂ.ಎಸ್ಸಿ ಪೂರೈ ಸಿದ್ದು, ಜೂ. 2ರಂದು ಕೋಚಿಂಗ್‌ ಸೆಂಟರ್‌ ಒಂದರಲ್ಲಿ ಬ್ಯಾಂಕಿಂಗ್‌ ಪರೀಕ್ಷೆ ತರಬೇತಿಗೆ ಮಂಗಳೂರಿಗೆ ಬಂದಿದ್ದಳು. ಆಕೆಯೊಂದಿಗೆ ಉಜಿರೆಯಲ್ಲಿ ಪರಿಚಿತ ಯುವಕ ನೋರ್ವನೂ ತರಬೇತಿಗೆ ಬಂದಿದ್ದ. ಇಬ್ಬರೂ ತಾವು ದಂಪತಿ ಎಂದು ಸುಳ್ಳು ಹೇಳಿ ಅತ್ತಾವರ ಕೆಎಂಸಿ ಆಸ್ಪತ್ರೆಯ ಹಿಂದಿನ ಮನೆಯ ಪಿಜಿಯಲ್ಲಿ ಇದ್ದರು ಎನ್ನಲಾಗಿದೆ.

2 ದಿನಗಳ ಬಳಿಕ ಆಕೆ ಊರಿಗೆ ಮರಳಿದ್ದು, ಆತ ಫೋನ್‌ ಮೂಲಕ ಆಕೆಯನ್ನು ಕರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿಗೆ ಬಂದಿದ್ದಳು. ಪಿಜಿಗೆ ಬಂದ ಬಳಿಕ ಸಂಜೆ ವೇಳೆ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.

ವೈರ್‌ ಬಿಗಿದು ಕೊಲೆ?
ಜತೆಗಿದ್ದ ಯುವಕ ಬೆಳಗ್ಗೆ ಆಕೆಯನ್ನು ಬೆಡ್‌ನ‌ಲ್ಲಿ ಟಿವಿ ಕೇಬಲ್‌ ವೈಯರ್‌ ಕತ್ತಿಗೆ ಬಿಗಿದು ಕೊಲೆ ಮಾಡಿ ಹೊರಗಿನಿಂದ ಬಾಗಿಲು ಹಾಕಿ ಪರಾರಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಸಂಜೆವರೆಗೆ ಬಾಗಿಲು ತೆರೆಯದ್ದರಿಂದ ಕಸ ಗುಡಿ ಸುವ ಮಹಿಳೆಗೆ ಸಂಶಯ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಾಗಿಲು ಒಡೆದು ನೋಡಿ ದಾಗ ಕೊಲೆಯಾಗಿರುವುದು ಗೊತ್ತಾಗಿದೆ. ಅಂಜನಾಳಿಗೆ ಇತ್ತೀಚೆಗೆ ಮನೆ ಯವರು ಬೇರೆ ಹುಡುಗ ನೊಂದಿಗೆ ಮದುವೆಗೆ ಮಾತುಕತೆ ನಡೆಸಿ ದ್ದರು. ಇದೇ ಆಕೆಯ ಕೊಲೆಗೆ ಕಾರಣ ವಾಗಿರಬಹುದು ಎಂದು ಶಂಕಿಸಲಾಗಿದೆ.

ತಜ್ಞರು ಆಗಮಿಸಲು ಪಟ್ಟು
ಘಟನೆ ಸುದ್ದಿ ತಿಳಿದು ಅಂಜನಾಳ ಹೆತ್ತವರು ಮಂಗಳೂರಿಗೆ ಧಾವಿಸಿ ಬಂದಿದ್ದು, ಸಂಜೆ ಪಿಜಿಯಿಂದ ಶವ ತೆಗೆಯಲು ನಿರಾಕರಿಸಿದ್ದರು. ಸ್ಥಳಕ್ಕೆ ವಿಧಿ-ವಿಜ್ಞಾನ ತಜ್ಞರು ಬಂದು ಪರಿಶೀಲಿಸಿದ ಬಳಿಕವೇ ಮೃತದೇಹವನ್ನು ಹೊರ ತೆಗೆಯಬೇಕೆಂದು ಪಟ್ಟು ಹಿಡಿದಿದ್ದರು. ಆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಜ್ಞರು ಆಗಮಿಸಿ ಪರಿಶೀಲಿಸಿದ ಬಳಿಕವೇ ಮೃತದೇಹ ಪಿಜಿಯಿಂದ ಹೊರತರಲಾಯಿತು.

ಚಿಕ್ಕಮಗಳೂರಿಂದ ತಂದೆಯೆ ಕಳಿಸಿದ್ದರು
ವಾಪಸ್‌ ಮಂಗಳೂರಿಗೆ ಹೊರ ಟಿದ್ದ ಅಂಜನಾಳನ್ನು ಆಕೆಯ ತಂದೆಯೇ ಚಿಕ್ಕಮಗಳೂರಿನಲ್ಲಿ ಬಸ್‌ ಹತ್ತಿಸಿ ಕಳುಹಿಸಿದ್ದರು. ಜತೆಗೆ ಮಂಗಳೂರಿಗೆ ತಲುಪಿದ ಬಗ್ಗೆಯೂ ಆಕೆ ಮನೆಗೆ ತಿಳಿಸಿದ್ದಳು. ಕೋಚಿಂಗ್‌ಗಾಗಿ ಮಂಗಳೂರಿನಲ್ಲಿ ಪಿಜಿಯಲ್ಲಿರುವುದಾಗಿಯೂ ಆಕೆ ಮನೆಯವರಿಗೆ ತಿಳಿಸಿದ್ದಳು. ಇದೀಗ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.
ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.