ಹೊಸ ವಿದ್ಯಾರ್ಥಿಗಳಿಗೆ ಸ್ಥಳ ಇಲ್ಲ ! ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಅನುಸರಿಸಲು ಸರಕಾರದ ಸೂಚನೆ

ಮಂಗಳೂರು ವಿಶ್ವವಿದ್ಯಾನಿಲಯ: ಹಳೆಯ ಶೈಕ್ಷಣಿಕ ವರ್ಷ ಮುಗಿಯದೆ ಸಮಸ್ಯೆ

Team Udayavani, Jul 23, 2022, 7:30 AM IST

ಹೊಸ ವಿದ್ಯಾರ್ಥಿಗಳಿಗೆ ಸ್ಥಳ ಇಲ್ಲ ! ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಅನುಸರಿಸಲು ಸರಕಾರದ ಸೂಚನೆ

ಮಂಗಳೂರು: ರಾಜ್ಯಾದ್ಯಂತ ಎಲ್ಲ ವಿಶ್ವವಿದ್ಯಾ ನಿಲಯಗಳ ವ್ಯಾಪ್ತಿಯಲ್ಲಿ ಏಕ ರೂಪ ಶೈಕ್ಷಣಿಕ ವೇಳಾಪಟ್ಟಿ ಅನುಸರಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಹೊಸ ಪದವಿ ತರಗತಿಗಳನ್ನು ಆ. 17ರಿಂದ ಆರಂಭಿಸಲು ಸೂಚಿಸಿದೆ.

ಆದರೆ ಮಂಗಳೂರು ವಿ.ವಿ. ವ್ಯಾಪ್ತಿಗೆ ಒಳಪಟ್ಟ ಪದವಿ ಕಾಲೇಜುಗಳಲ್ಲಿ 2021-22 ವರ್ಷದ ಪಾಠ ಪ್ರವಚನಗಳು ಮುಗಿದಿಲ್ಲ; ಹೀಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಪದವಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ತರಗತಿ ಲಭ್ಯವಿಲ್ಲ!ರಾಜ್ಯದ ಹಲವು ವಿಶ್ವ ವಿದ್ಯಾ ನಿಲಯಗಳಲ್ಲೂ ಇದೇ ಪರಿಸ್ಥಿತಿ ಉದ್ಭವಿಸಿದೆ.

ಹೊಸ ವಿದ್ಯಾರ್ಥಿಗಳಿಗೆ ಆನ್‌ಲೈನ್‌?
ಕಾಲೇಜುಗಳಲ್ಲಿ ಹೊಸ ಪದವಿ ವಿದ್ಯಾರ್ಥಿಗಳಿಗೆ ಆ. 17ರಿಂದ ಸ್ಥಳಾವಕಾಶ ಒದಗಿಸಲು ಸಾಧ್ಯವಾಗದೆ ಇದ್ದರೆ ಆನ್‌ಲೈನ್‌ ತರಗತಿ ಆರಂಭಿಸುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸರಕಾರಿ ಕಾಲೇಜುಗಳ ಪ್ರಾಂಶುಪಾಲರ ನೇತೃತ್ವದಲ್ಲಿ ಸಭೆ ನಡೆಸಿ ಪ್ರಾರಂಭಿಕವಾಗಿ ಆನ್‌ಲೈನ್‌ ತರಗತಿ ಆರಂಭಿಸುವ ಬಗ್ಗೆ ಚರ್ಚಿಸಲಾಗಿದೆ. ಸರಕಾರದಿಂದ ಬರುವ ನಿರ್ದೇಶನವನ್ನು ಗಮನಿಸಿ ತರಗತಿ ಆರಂಭದ ಬಗ್ಗೆ ತೀರ್ಮಾನಿಸಲು ವಿ.ವಿ. ಉದ್ದೇಶಿಸಿದೆ.

2021-22ರ ಕಾಲೇಜು ಶೈಕ್ಷಣಿಕ ಅವಧಿ ಪೂರ್ಣವಾಗಲು ಇನ್ನೂ ಒಂದೂವರೆ ತಿಂಗಳು ಬೇಕು. ಅಲ್ಲಿಯವರೆಗೆ ಹೊಸ ವಿದ್ಯಾರ್ಥಿಗಳ ಕಲಿಕೆ ಹೇಗೆ ಎಂಬುದೇ ಪ್ರಶ್ನೆ.

ಪಿಯು ಫಲಿತಾಂಶ ಬಂದು ಎರಡು ತಿಂಗಳು ಕಳೆದಿದೆ. ಪದವಿ ದಾಖಲಾತಿ ಆರಂಭವಾಗಿ ತಿಂಗಳುಗಳು ಕಳೆದಿವೆ.ಆದರೆ ಸದ್ಯ ಈ ವಿದ್ಯಾರ್ಥಿಗಳು ಕಾಲೇಜಿಗೆ ಬರುವಂತಿಲ್ಲ. ಏಕೆಂದರೆ ಮಂಗಳೂರು ವಿ.ವಿ.ಯಲ್ಲಿ 2021- 22ನೇ ಶೈಕ್ಷಣಿಕ ವರ್ಷ ಪೂರ್ಣ ವಾಗುವುದು ಆಗಸ್ಟ್‌ ಅಂತ್ಯಕ್ಕೆ.

ಆಗಸ್ಟ್‌ ಕೊನೆಯ ವರೆಗೆ ತರಗತಿ, ಸಪ್ಟೆಂಬರ್‌ನಲ್ಲಿ ಹಾಲಿ ಶೈಕ್ಷಣಿಕ ವರ್ಷದ ಪರೀಕ್ಷೆ ನಡೆಯಲಿದೆ. ಬಳಿಕ ಸುಮಾರು 10 ದಿನ ಮೌಲ್ಯಮಾಪನ ನಡೆದು ಪದವಿ ಮೊದಲ ವರ್ಷದ ತರಗತಿ ಆರಂಭವಾಗಬೇಕಿದೆ.

ಮೌಲ್ಯಮಾಪನದಲ್ಲಿ ವಿಳಂಬ ಮತ್ತು ಮಳೆ ಹಿನ್ನೆಲೆಯಲ್ಲಿ ರಜೆ ಘೋಷಿಸಿದ ಕಾರಣ ಬೋಧನೆಯ ವೇಳಾಪಟ್ಟಿಯಲ್ಲಿಯೂ ವ್ಯತ್ಯಯ ಉಂಟಾಗಿದೆ. ಮುಂದಿನ ಬೆರಳೆಣಿಕೆ ದಿನಗಳಲ್ಲಿ ಆಂತರಿಕ ಪರೀಕ್ಷೆ, ಕಾಲೇಜು ವಾರ್ಷಿಕೋತ್ಸವ ಮತ್ತಿತರ ಕಾರ್ಯಕ್ರಮಗಳೂ ಇರುವುದರಿಂದ ಬೋಧನೆಗೆ ಹೆಚ್ಚುವರಿ ದಿನ ಬೇಕಾಗಬಹುದು.

ಮೊದಲ ಎನ್‌ಇಪಿ ಮೌಲ್ಯಮಾಪನ ಬಾಕಿ!
ಬಹುನಿರೀಕ್ಷಿತ ಎನ್‌ಇಪಿ ಅಡಿ ಯಲ್ಲಿ ನಡೆದ ಮೊದಲ ಪರೀಕ್ಷೆ ನಡೆದು ಸ್ವಲ್ಪ ಸಮಯ ಕಳೆದಿದ್ದರೂ ಮೌಲ್ಯಮಾಪನ ಮಾತ್ರ ಇನ್ನೂ ಆರಂಭ ವಾಗಿಲ್ಲ.

ಸದ್ಯ ಎಲ್ಲ ಉಪನ್ಯಾಸಕರು ಕಾಲೇಜಿನಲ್ಲಿ ಕೊನೆಯ ಹಂತದ ಬೋಧನೆಯಲ್ಲಿದ್ದು, ಮೌಲ್ಯಮಾ ಪನಕ್ಕೆ ತೆರಳಿದರೆ ಮತ್ತೆ ಬೋಧನೆಗೆ ಸಮಸ್ಯೆ ಆಗಬಹುದು ಎಂಬ ಕಾರಣದಿಂದ ಮೌಲ್ಯಮಾಪನ ಇನ್ನಷ್ಟೇ ನಡೆಯಬೇಕಿದೆ.

ಎಲ್ಲ ವಿ.ವಿ. ವ್ಯಾಪ್ತಿಯಲ್ಲಿ ಆ. 17ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸುವಂತೆ ಸರಕಾರದಿಂದ ಸೂಚನೆ ಬಂದಿದೆ. ಆದರೆ ಮಂಗಳೂರು ವಿ.ವಿ. ಸಹಿತ ವಿವಿಧ ವಿ.ವಿ.ಗಳ ವ್ಯಾಪ್ತಿಯಲ್ಲಿ ಹಾಲಿ ಶೈಕ್ಷಣಿಕ ವರ್ಷ ಮುಗಿಯಲು ಇನ್ನೂ ಸ್ವಲ್ಪ ಸಮಯ ಬೇಕು. ಹೀಗಾಗಿ ಹೊಸ ವಿದ್ಯಾರ್ಥಿಗಳಿಗೆ ಹೇಗೆ ತರಗತಿ ಆರಂಭಿಸಬೇಕು ಎಂಬ ಬಗ್ಗೆ ಸರಕಾರದ ನಿರ್ದೇಶನವನ್ನು ನಿರೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಡಾ| ಕಿಶೋರ್‌ ಕುಮಾರ್‌ ಸಿ.ಕೆ. ಕುಲಸಚಿವರು (ಅಡಳಿತ), ಮಂಗಳೂರು ವಿಶ್ವವಿದ್ಯಾನಿಲಯ

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.