Mangaluru University ಪರೀಕ್ಷಾ ಅಕ್ರಮಕ್ಕೆ ದಂಡ ಸಂಹಿತೆ

ಪರಿಷ್ಕೃತ ಶಿಸ್ತು ಕ್ರಮಕ್ಕೆ ಅನುಮೋದನೆ

Team Udayavani, Oct 10, 2023, 1:15 AM IST

Mangaluru University ಪರೀಕ್ಷಾ ಅಕ್ರಮಕ್ಕೆ ದಂಡ ಸಂಹಿತೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪರೀಕ್ಷೆಗಳಲ್ಲಿ ನಕಲು ಸಹಿತ ಅಕ್ರಮಗಳಲ್ಲಿ ತೊಡಗಿದರೆ 5 ಸಾವಿರ ರೂ.ಗಳ ದಂಡ ತೆರಬೇಕು!

ಪರಿಷ್ಕೃತ ಶಿಸ್ತು ಕ್ರಮದಡಿ ಪರೀಕ್ಷಾ ಅಕ್ರಮವೆಸುವ ಅಭ್ಯರ್ಥಿ ಗಳ ಜತೆಗೆ ಪರೀಕ್ಷಾ ವಿಭಾಗದ ಅಧಿಕಾರಿಗಳು, ಉತ್ತರಪತ್ರಿಕೆ ಮೌಲ್ಯಮಾಪಕರು, ಕೊಠಡಿ ಮೇಲ್ವಿಚಾರಕರು ಮತ್ತು ಪ್ರಾಂಶುಪಾಲರೂ ದಂಡಕ್ಕೆ ಒಳಗಾಗಲಿದ್ದಾರೆ.

ಪರಿಷ್ಕೃತ ಶಿಸ್ತು ಕ್ರಮಗಳಿಗೆ ಮಂಗಳೂರು ವಿ.ವಿ.ಯ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಅ. 12ರಂದು ನಡೆಯುವ ವಿ.ವಿ. ಸಿಂಡಿಕೇಟ್‌ ಸಭೆಯಲ್ಲಿ ಒಪ್ಪಿಗೆ ಪಡೆದು ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಜಾರಿಯಾಗುವ ಸಾಧ್ಯತೆಯಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ| ಮಂಜುನಾಥ ಪಟ್ಟಾಭಿ ನೇತೃತ್ವದಲ್ಲಿ ಪ್ರೊ|ಪಿ.ಎಲ್‌. ಧರ್ಮ, ಪ್ರೊ| ಬಿ.ಎಚ್‌. ಶೇಖರ್‌, ನ್ಯಾಯವಾದಿ ಅಕ್ಷತಾ, ಪಿಪಿಸಿ ಪ್ರಾಂಶುಪಾಲ ಡಾ| ರಾಘವೇಂದ್ರ ಮತ್ತು ಪರೀಕ್ಷಾಂಗ ಕುಲಸಚಿವರ ತಂಡ ಈ ನಿಯಮಗಳ ಕರಡನ್ನು ತಯಾರಿಸಿತ್ತು.

ಪರೀಕ್ಷೆ ಸಂದರ್ಭ ಅಭ್ಯರ್ಥಿ ಸಂಬಂಧಿತ ಪರೀಕ್ಷೆಯ ನಕಲನ್ನು ಹೊಂದಿದ್ದರೆ ಪರೀಕ್ಷೆಯಿಂದ ಅಮಾನ್ಯಗೊಳಿಸುವ ಜತೆಗೆ ದಂಡವನ್ನು ತೆರಬೇಕಾಗುತ್ತದೆ. ಉತ್ತರ ಪತ್ರಿಕೆಯ ಪುಟಗಳು, ಡ್ರಾಯಿಂಗ್‌ ಶೀಟ್‌ಗಳನ್ನು ಹಾಳು ಅಥವಾ ಹಾನಿಗೊಳಪಡಿಸಿದರೆ ಪರೀಕ್ಷೆಯಿಂದ ಅಮಾನತುಗೊಳಿಸಿ ಮುಂದಿನ ಒಂದು ವರ್ಷ ಪರೀಕ್ಷೆ ಬರೆಯದಂತೆ ತಡೆ ಮಾತ್ರವಲ್ಲದೆ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ.
ಹೊಸ ಶಿಸ್ತು ಕ್ರಮ ಜಾರಿಯಾದರೆ ಪರೀಕ್ಷೆ ಸಂದರ್ಭ ಯಾವುದೇ ಗ್ಯಾಜೆಟ್‌ ಬಳಸಿದರೆ 2 ಸಾವಿರ ರೂ.ಗಳಿಂದ 40 ಸಾವಿರ ರೂ.ಗಳವರೆಗೆ ದಂಡ ವಿಧಿಸಲು ಅವಕಾಶವಿದೆ.

ಮೌಲ್ಯಮಾಪಕರಿಗೂ ದಂಡ!
ತಮ್ಮ ಕಾಲೇಜಿನ ಮೌಲ್ಯಮಾಪಕರು ಮೌಲ್ಯಮಾಪನಕ್ಕೆ ಗೈರಾದರೆ ಅಥವಾ ಮೌಲ್ಯಮಾಪಕರಿಂದ ತಪ್ಪುಗಳಾದರೆ ಸುಮಾರು ಕಾಲೇಜು ಪ್ರಾಂಶುಪಾಲರಿಗೆ 40 ಸಾವಿರ ರೂ.ವರೆಗಿನ ದಂಡ ವಿಧಿ ಸುವ ಪ್ರಕ್ರಿಯೆಯನ್ನು ಹೊಸ ಪರಿಷ್ಕರಣೆಯಲ್ಲಿ ಸೇರ್ಪಡೆ ಗೊಳಿಸಲಾಗಿದೆ ಎಂದು ವಿ.ವಿ. ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.