ಮಂಗಳೂರು ವಿ.ವಿ.: ನಾಳೆ ಘಟಿಕೋತ್ಸವ
Team Udayavani, Apr 9, 2021, 6:55 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ 39ನೇ ವಾರ್ಷಿಕ ಘಟಿಕೋತ್ಸವ ಎ. 10ರಂದು ಬೆಳಗ್ಗೆ 11 ಗಂಟೆಗೆ ಮಂಗಳಾ ಸಭಾಂಗಣದಲ್ಲಿ ಜರಗಲಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ| ಸುಧಾಮೂರ್ತಿ ಅವರು ಆನ್ಲೈನ್ನಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕುಲಾಧಿಪತಿಗಳಾದ ರಾಜ್ಯಪಾಲರು ಹಾಗೂ ಸಹಕುಲಾಧಿಪತಿಗಳಾದ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಭಾಗವಹಿಸಲು ಸಾಧ್ಯ ವಾಗುವುದಿಲ್ಲ. ಕೋವಿಡ್ ಕಾರಣ ಸೀಮಿತ ಸಂಖ್ಯೆಯಲ್ಲಿ ಮಾತ್ರ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ವಿವರಿಸಿದರು.
ಪರೀಕ್ಷಾಂಗ ಕುಲಸಚಿವ ಹಾಗೂ ಕುಲಸಚಿವ (ಪ್ರಭಾರ) ಪ್ರೊ| ಪಿ.ಎಲ್. ಧರ್ಮ ಮಾತನಾಡಿ, 117 ಮಂದಿಗೆ (ಕಲೆ 27, ವಿಜ್ಞಾನ 63, ವಾಣಿಜ್ಯ 14, ಶಿಕ್ಷಣ 13) ಪಿಎಚ್ಡಿ ಡಾಕ್ಟರೆಟ್, 10 ಚಿನ್ನದ ಪದಕ, 101 ಮಂದಿಗೆ ನಗದು ಬಹುಮಾನ, ವಿವಿಧ ಕೋರ್ಸ್ಗಳ 188 ಮಂದಿ ರ್ಯಾಂಕ್ಗಳಲ್ಲಿ
ಪ್ರಥಮ ರ್ಯಾಂಕ್ ಪಡೆದ 69 ಮಂದಿಗೆ ರ್ಯಾಂಕ್ ಪ್ರಮಾಣ ಪತ್ರ (ಸ್ನಾತಕೋತ್ತರ ಪದವಿ 52, ಪದವಿ 17, ಕಲೆ 17, ವಿಜ್ಞಾನ ಮತ್ತು ತಂತ್ರಜ್ಞಾನ 36, ವಾಣಿಜ್ಯ 9, ಶಿಕ್ಷಣ 4, ಸ್ನಾತಕೋತ್ತರ ಡಿಪ್ಲೊಮಾ 3) ನೀಡಲಾಗುವುದು. ಪಿಎಚ್ಡಿ ಪಡೆದವರಲ್ಲಿ 14 ವಿದೇಶಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಈ ಬಾರಿ ಕೋವಿಡ್ ಕಾರಣದಿಂದ 300 ವಿದ್ಯಾರ್ಥಿಗಳಿಗೆ ಮಾತ್ರ ಸಮಾ ರಂಭದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ.
ಪಿಎಚ್ಡಿ, ಚಿನ್ನದ ಪದಕ ಹಾಗೂ ಪ್ರಥಮ ರ್ಯಾಂಕ್ ಪಡೆದವರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ನಗದು ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ಅಂಚೆ ಮೂಲಕ ಒಂದೇ ವಾರದಲ್ಲಿ ಅವರ ವಿಳಾಸಕ್ಕೆ ನೀಡಲಾಗುತ್ತದೆ. ವಿಶೇಷವಾಗಿ ಈ ಬಾರಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕ್ರಮದ ಪ್ರಸಾರ ನಡೆಯಲಿದೆ ಎಂದರು.
ಈ ಬಾರಿ ಗೌರವ ಡಾಕ್ಟರೆಟ್ ಇಲ್ಲ :
ಪ್ರೊ| ಪಿ.ಎಸ್. ಯಡಪಡಿತ್ತಾಯ ಮಾತನಾಡಿ, ಈ ಬಾರಿ ಗೌರವ ಡಾಕ್ಟರೆಟ್ ನೀಡುವುದಿಲ್ಲ. ಗೌರವ ಡಾಕ್ಟರೇಟ್ ನೀಡಲೇಬೇಕು ಎನ್ನುವ ನಿಯಮವೂ ಇಲ್ಲ. ಈ ಬಾರಿ ಹೆಸರಿನ ಪಟ್ಟಿ ರಾಜ್ಯಪಾಲರಿಗೆ ಕಳುಹಿಸಿದ್ದರೂ ಕೊನೇ ಕ್ಷಣದಲ್ಲಿ ರಾಜ್ಯಪಾಲರಿಂದ ಅಂಕಿತ ಸಿಕ್ಕಿಲ್ಲ. ಜತೆಗೆ ಡಿಎಸ್ಸಿ ಮತ್ತು ಡಿ.ಲಿಟ್ ಪದವಿಯೂ ಈ ಬಾರಿ ಇರುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ