ಮಂಗಳೂರು ವಿಶ್ವವಿದ್ಯಾನಿಲಯ: ಕುಂದ ಕನ್ನಡಕ್ಕೆ “ಪೀಠ’, ಅರೆ ಭಾಷೆಗೆ “ಅಧ್ಯಯನ ಕೇಂದ್ರ’


Team Udayavani, Jun 24, 2022, 8:30 AM IST

ಮಂಗಳೂರು ವಿಶ್ವವಿದ್ಯಾನಿಲಯ: ಕುಂದ ಕನ್ನಡಕ್ಕೆ “ಪೀಠ’, ಅರೆ ಭಾಷೆಗೆ “ಅಧ್ಯಯನ ಕೇಂದ್ರ’

ಮಂಗಳೂರು: ಭಾಷಾಭಿವೃದ್ಧಿ ಚಟುವಟಿಕೆಗೆ ಆದ್ಯತೆ ನೀಡುವ ಇರಾದೆಯಿಂದ ಕುಂದಾಪುರ ಭಾಗದಲ್ಲಿನ ಕುಂದ ಕನ್ನಡ ಅಧ್ಯಯನ ಪೀಠ ಹಾಗೂ ಸುಳ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಬಳಕೆಯಲ್ಲಿರುವ ಅರೆಭಾಷೆಯ ಸಂಶೋಧನೆ ಮತ್ತು ಅಧ್ಯಯನ ಕೇಂದ್ರ ಆರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.

ಕುಂದ ಕನ್ನಡ ಅಧ್ಯಯನ ಪೀಠ ಆರಂಭಿಸುವ ನೆಲೆಯಲ್ಲಿ ಈಗಾಗಲೇ ವಿ.ವಿ.ಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಆರಂಭಿಸುವಂತೆ ವಿ.ವಿ.ಗೆ ಸೂಚನೆ ಬಂದಿದೆ. ಅದಕ್ಕಾಗಿ ವಿ.ವಿ.ಯು ಆಂತರಿಕ ಸಂಪನ್ಮೂಲದಿಂದ 25 ಲಕ್ಷ ರೂ.ಗಳನ್ನು ಮೀಸಲಿರಿಸಿದೆ. ಸರಕಾರದ ಅನುದಾನವನ್ನು ನಿರೀಕ್ಷಿಸಲಾಗಿದೆ.

ಅರೆಭಾಷೆ ಅಧ್ಯಯನ ಕೇಂದ್ರ ಆರಂಭಕ್ಕೆ ಸರಕಾರ ವಿಶೇಷ ನೆಲೆಯಲ್ಲಿ 2 ಕೋ.ರೂ. ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಅಲ್ಲಿವರೆಗೆ ಆಂತರಿಕ ಸಂಪನ್ಮೂಲ ಬಳಸಿ ಕೇಂದ್ರ ಆರಂಭದ ಬಗ್ಗೆ ವಿ.ವಿ. ಚಿಂತನೆ ನಡೆಸಿದೆ.

ಮಾಜಿ ಸಂಸದ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ “ಉದಯವಾಣಿ’ ಜತೆಗೆ ಮಾತನಾಡಿ, “ಕುಂದ ಕನ್ನಡ ಹಲವು ವಿಶೇಷ ಹಾಗೂ ಸಮೃದ್ಧ ವಿಚಾರಗಳ ಮೂಲಕ ಗೌರವ ಪಡೆದಿದೆ. ಈ ಭಾಷೆಯ ಶ್ರೀಮಂತಿಕೆ ಹಾಗೂ ಸೊಗಡನ್ನು ವಿವರವಾಗಿ ಅಧ್ಯಯನ ನಡೆಸಿ ಎಲ್ಲೆಡೆ ಪ್ರಚುರಪಡಿಸುವ ಅಗತ್ಯ ಇದೆ. ಹೀಗಾಗಿ ವಿ.ವಿ.ಯಲ್ಲಿ ಅಧ್ಯಯನ ಪೀಠ ಮಾಡಬೇಕು ಎಂದು ಸರಕಾರವನ್ನು ನಾನು ಒತ್ತಾಯಿಸಿದ್ದೆ. ಪೂರಕ ಸ್ಪಂದನೆ ಲಭಿಸಿದ್ದು, ಶೀಘ್ರ ಪೀಠ ರಚನೆಯ ಕಾರ್ಯ ನಡೆಯುವ ನಿರೀಕ್ಷೆಯಿದೆ’ ಎಂದರು.

ಕುಲಸಚಿವ (ಆಡಳಿತ) ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಪ್ರಕಾರ, “ಕುಂದ ಕನ್ನಡ ಹಾಗೂ ಅರೆಭಾಷೆ ಕರಾವಳಿಯ ಬಹು ಜನರು ಮಾತನಾಡುವ ಭಾಷೆ. ಇದರಲ್ಲಿ ಹಲವು ವಿಶೇಷತೆಗಳು ಇವೆ. ಇವುಗಳ ಬಗ್ಗೆ ತುಲನಾತ್ಮಕ ಅಧ್ಯಯನ ಆಗಬೇಕು ಎಂಬ ನೆಲೆಯಿಂದ ಪೀಠ ಹಾಗೂ ಅಧ್ಯಯನ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ’ ಎನ್ನುತ್ತಾರೆ.

ಪೀಠ, ಕೇಂದ್ರಗಳಿಗೆ ವಿಶೇಷ ಜವಾಬ್ದಾರಿ :

ಮಂಗಳೂರು ವಿ.ವಿ.ಯಲ್ಲಿ ಈಗ 24 ಅಧ್ಯಯನ ಪೀಠಗಳಿದ್ದು, ಈ ಪೈಕಿ ಕೆಲವು ಮಾತ್ರ ಸಶಕ್ತವಾಗಿದೆ. ಹೀಗಾಗಿ ಹೊಸದಾಗಿ ರಚನೆಯಾಗಲಿರುವ ಪೀಠ/ಕೇಂದ್ರವನ್ನು ಸಶಕ್ತಗೊಳಿಸುವ ಮಹತ್ವದ ಜವಾಬ್ದಾರಿ ವಿ.ವಿ. ಪಾಲಿಗಿದೆ. ಕುಂದ ಕನ್ನಡ ಹಾಗೂ ಅರೆಭಾಷೆಯಲ್ಲಿನ ಸಾಹಿತ್ಯಿಕ ಚಟುವಟಿಕೆ, ಕೊಡುಗೆಯ ಅನಾವರಣ, ಐತಿಹ್ಯಗಳನ್ನು ಬೆಳಕಿಗೆ ತರುವ ಹಾಗೂ ಭಾಷಾ ಬೆಳವಣಿಗೆಗೆ ಪೂರಕವಾಗುವ ಕಾರ್ಯಚಟುವಟಿಕೆ ನಡೆಸುವ ಕಾರ್ಯ ನಡೆಯಲಿದೆ.

ಕರಾವಳಿ ಭಾಗದಲ್ಲಿ ಜನಜನಿತವಾಗಿರುವ ಕುಂದ ಕನ್ನಡ ಹಾಗೂ ಅರೆಭಾಷೆಯ ಕುರಿತಂತೆ ವಿಶೇಷ ಅಧ್ಯಯನ ನಡೆಸಲು ಅವಕಾಶ ಒದಗಿಸುವ ಪೀಠ/ಕೇಂದ್ರವನ್ನು ಪ್ರತ್ಯೇಕವಾಗಿ ಮಂಗಳೂರು ವಿ.ವಿ.ಯಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು.ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ,ಕುಲಪತಿ, ಮಂಗಳೂರು ವಿ.ವಿ.

 

-ದಿನೇಶ್‌ ಇರಾ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.