ಮಂಗಳೂರು ವಿವಿ: ಸಮಸ್ಯೆಗಳು ಪರಿಹರಿಸುವಂತೆ ಎಬಿವಿಪಿ ಬೃಹತ್ ಪ್ರತಿಭಟನೆ


Team Udayavani, Oct 21, 2022, 5:57 PM IST

1-adadad

ಮಂಗಳೂರು : ಮಂಗಳೂರು ವಿ.ವಿ ಯಿಂದ ಹಲವಾರು ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದು,ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಕ್ಲಾಕ್ ಟವರ್ ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗಿದೆ.

UUCMS ತಂತ್ರಾಂಶದ ಲೋಪದೋಶದಿಂದ NEP ಯ ಪ್ರಥಮ ವರ್ಷದ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶವನ್ನು ನೀಡದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಶಿಕ್ಷಣವನ್ನು ಮುಂದುವರಿಸುವಂತೆ ಆಗಿದೆ . ವಿದ್ಯಾರ್ಥಿಗೆ ದೊರೆಯುವ ಎಲ್ಲಾ ಸೌಲಭ್ಯಗಳಿಂದ ವಿದ್ಯಾರ್ಥಿಗಳು ವಂಚಿತರಾಗುವಂತೆ ಹಾಗೂ ಬೇರೆ ಕಾಲೇಜಿಗೆ ವರ್ಗಾವಣೆಯನ್ನು ವಿದ್ಯಾರ್ಥಿ ಪಡೆಯದ ರೀತಿ ಸಮಸ್ಯೆಯು ಎದುರಾಗಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಸರಿಯಾದ ಸಮಯಕ್ಕೆ ಅಂಕಪಟ್ಟಿ ವಿತರಣೆಯನ್ನು ನಡೆಸುತ್ತಿಲ್ಲ, 2021 ರಲ್ಲಿ ಅಂತಿಮ ವರ್ಷದ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಸ್ತುತ ವಿದ್ಯಾಭ್ಯಾಸ ನಡೆಸುತ್ತಿರುವ, B.com ಹೊರತಾಗಿ ಬಹುತೇಕ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ವಿ.ವಿ ಯು ನೀಡಿರುವುದಿಲ್ಲ ಎಂದು ಆರೋಪಿಸಲಾಗಿದೆ.

2022 ಮಾರ್ಚ್ ನಲ್ಲಿ ಮರು ಮೌಲ್ಯ ಮಾಪನಕ್ಕೆ ಶುಲ್ಕಪಾವತಿ ಮಾಡಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ವಿ.ವಿ ನಡೆಸಿರುವುದಿಲ್ಲ, ವಿದ್ಯಾರ್ಥಿಗಳು 7 ತಿಂಗಳುಗಳಿಂದ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿಸಲಾಗಿದೆ.

ಮಂಗಳೂರು ವಿ.ವಿ ಯಿಂದ ದೂರ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ನೀಡಿರುವುದಿಲ್ಲ, ಹಲವಾರು ವಿದ್ಯಾರ್ಥಿಗಳು ಅಂಕಪಟ್ಟಿ ದೊರೆಯದೆ ವಿ.ವಿ ಗೆ ಅಲೆದಾಡುವಂತಾಗಿದೆ. ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಅಂಕಪಟ್ಟಿಗಳು ಸರಿಯಾಗಿ ದೊರೆಯುತ್ತಿಲ್ಲ, ಫಲಿತಾಂಶಗಳನ್ನು ವಿಳಂಬವಾಗಿ ನೀಡುತ್ತಿರುವುದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸೆಪ್ಟಂಬರ್ ನಲ್ಲಿ ಈ ಬಾರಿ ನಡೆದಿರುವ ಪರೀಕ್ಷೆಗಳ ಮೌಲ್ಯ ಮಾಪನವನ್ನು ನಡೆಸಿ ಕೂಡಲೇ ಫಲಿತಾಂಶ ನೀಡುವ ಅಗತ್ಯವಿದೆ. ಫಲಿತಾಂಶ ವಿಳಂಬವಾದಲ್ಲಿ ಸ್ನಾತಕೊತ್ತರ ಶಿಕ್ಷಣವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ವಂಚಿತರಾಗಲಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ.

ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳಿಂದ 2000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಹೋರಾಟದ ನೇತೃತ್ವವನ್ನು ಅಭಾವಿಪ ರಾಜ್ಯಾ ಕಾರ್ಯದರ್ಶಿ ಮಣಿಕಂಠ ಕಳಸ ಇವರು ವಹಿಸಿದ್ದರು, ಶ್ರೇಯಸ್ ಶೆಟ್ಟಿ, ನಿಶಾನ್ ಆಳ್ವ ಇವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.