ಮಂಗಳೂರು ವಿ.ವಿ. ಪರೀಕ್ಷಾ ಅವಾಂತರ: ಬಿಬಿಎ ಕನ್ನಡ ಪರೀಕ್ಷೆಗೆ ಹಳೆ ಪ್ರಶ್ನೆಪತ್ರಿಕೆ
Team Udayavani, Sep 6, 2022, 7:00 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಪರೀಕ್ಷೆಗಳು ಸೆ. 5ರಂದು ಆರಂಭ ವಾಗಿದ್ದು, ಮೊದಲ ದಿನವೇ ಬಿಬಿಎ ದ್ವಿತೀಯ ಸೆಮಿಸ್ಟರ್ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿದ ಪರಿಣಾಮ ಪರೀಕ್ಷೆಯನ್ನು ಮುಂದೂಡಿ ಮುಜುಗರಕ್ಕೀಡಾಗಿದೆ.
ಪರಿಷ್ಕೃತ ದಿನಾಂಕವನ್ನು ಶೀಘ್ರ ತಿಳಿಸುವುದಾಗಿ ವಿ.ವಿ. ಆಡಳಿತ ಕಾಲೇಜುಗಳಿಗೆ ತಿಳಿಸಿದೆ.
ವಿ.ವಿ. ವ್ಯಾಪ್ತಿಯ 34 ಕಾಲೇಜುಗಳಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್ನ ಪರೀಕ್ಷೆ ಸೋಮವಾರ ಆರಂಭವಾಯಿತು. ಮೊದಲ ದಿನ ಕನ್ನಡ ಪರೀಕ್ಷೆ ನಿಗದಿ ಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ “ದ್ವಿತೀಯ ಸೆಮಿಸ್ಟರ್’ ಎಂದು ನಮೂದಿಸಲಾಗಿತ್ತು. ಆದರೆ ಪ್ರಶ್ನೆಗಳನ್ನು ಓದುತ್ತಾ ಹೋದಂತೆ ಅಲ್ಲಿರುವುದು ಹಿಂದಿನ ಸೆಮಿಸ್ಟರ್ನ ಪ್ರಶ್ನೆಗಳು ಎಂಬುದು ತಿಳಿಯಿತು.ಪರೀಕ್ಷಾ ಕೇಂದ್ರಗಳು ತತ್ಕ್ಷಣವೇ ವಿ.ವಿ.ಯ ಗಮನಕ್ಕೆ ವಿಷಯವನ್ನು ತಂದವು.
ಕೂಡಲೇ ವಿ.ವಿ. ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ.ಎಲ್. ಧರ್ಮ ಅವರು ಪರೀಕ್ಷೆಯನ್ನು ರದ್ದು ಗೊಳಿಸಿದರು. ಹೊಸ ಪ್ರಶ್ನೆ ಪತ್ರಿಕೆಯೊಂದಿಗೆ ಪರೀಕ್ಷೆ ನಡೆಸುವುದಾಗಿ ಘೋಷಿಸಿದರು. ಪರೀಕ್ಷೆ ಆರಂಭವಾಗಿ ಅರ್ಧ ಗಂಟೆಯೊಳಗೆ ಪರೀಕ್ಷೆ ರದ್ದಾಯಿತು.
ನೋಟಿಸ್ ಜಾರಿ
ಘಟನೆ ಸಂಬಂಧ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಕಾಲೇಜುಗಳಿಗೆ ಪೂರೈಸುವ ಹೊಣೆ ಹೊತ್ತ ಸಂಬಂಧಪಟ್ಟ ಪರೀಕ್ಷಾ ವಿಭಾಗ ಮುಖ್ಯಸ್ಥರಿಗೆ ಮಂಗಳೂರು ವಿ.ವಿ. ನೋಟಿಸ್ ಜಾರಿ ಮಾಡಿದೆ.
ಬಿಬಿಎ ದ್ವಿತೀಯ ಸೆಮಿಸ್ಟರ್ನ ಕನ್ನಡ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಗೊಂದಲ ಆಗಿದ್ದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಪೂರ್ಣ ವರದಿಯನ್ನು ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಮಂಡಿಸಲಾಗುವುದು. ಸಂಬಂಧಪಟ್ಟ ಪರೀಕ್ಷಾ ಮುಖ್ಯಸ್ಥರೇ ಹೊಸ ಪ್ರಶ್ನೆಪತ್ರಿಕೆಯ ಮುದ್ರಣದ ವೆಚ್ಚವನ್ನು ನಿಭಾಯಿಸುವಂತೆ ಸೂಚಿಸಲಾಗಿದೆ.
– ಪ್ರೊ| ಪಿ.ಎಲ್. ಧರ್ಮ
ಪರೀಕ್ಷಾಂಗ ಕುಲಸಚಿವರು, ಮಂಗಳೂರು ವಿ.ವಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು