ಮಂಗಳೂರು ವಿಶ್ವವಿದ್ಯಾನಿಲಯ: ಪರೀಕ್ಷಾ ಶುಲ್ಕ ಕಡಿತ ಮಾಡಿದ ಎಂ.ಯು ಲಿಂಕ್ಸ್‌ ಸಾಫ್ಟ್ ವೇರ್‌!

ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ಲಾಭ

Team Udayavani, Mar 31, 2022, 7:23 AM IST

ಮಂಗಳೂರು ವಿಶ್ವವಿದ್ಯಾನಿಲಯ: ಪರೀಕ್ಷಾ ಶುಲ್ಕ ಕಡಿತ ಮಾಡಿದ ಎಂ.ಯು ಲಿಂಕ್ಸ್‌ ಸಾಫ್ಟ್ ವೇರ್‌!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿ ಹೊಸ ಸಾಫ್ಟ್ ವೇರನ್ನು
ಮಂಗಳೂರು ವಿ.ವಿ.ಯೇ ಅಭಿವೃದ್ಧಿಪಡಿಸಿದೆ.ಇದರಿಂದ ವಿ.ವಿ.ಗೆ ಹಣ ಉಳಿತಾಯವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಕಡಿತ ಮಾಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಈ ವರ್ಷದಿಂದಲೇ ತಲಾ 50 ರೂ.ಗಳಂತೆ ಪರೀಕ್ಷಾ ಶುಲ್ಕ ಕಡಿಮೆ ಮಾಡಲು ನಿರ್ಧರಿಸಿದೆ. ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಲಾಭವಾಗಿದೆ. ಪರೀಕ್ಷಾ ಶುಲ್ಕ ಕಡಿತ ಬಗ್ಗೆ ಶುಲ್ಕ ಸಮಿತಿ ತೀರ್ಮಾನ ಕೈಗೊಂಡು, ವಿ.ವಿ. ಸಿಂಡಿಕೇಟ್‌ ಇದಕ್ಕೆ ಒಪ್ಪಿಗೆ ಸೂಚಿಸಿತ್ತು.

ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು 2015ರಿಂದ 2020ರವರೆಗೆ ಪರೀಕ್ಷೆ ಪ್ರಾರಂಭದಿಂದ ಕೊನೆಯವರೆಗೆ ಎಲ್ಲಾ ಕೆಲಸಗಳನ್ನು ಹೊರಗುತ್ತಿಗೆ ನೀಡಲಾಗಿತ್ತು. 2020ರಲ್ಲಿ ಗುತ್ತಿಗೆ ಅವಧಿ ಪೂರ್ಣ ಗೊಂಡ ನಂತರ ಪರೀಕ್ಷೆಯಲ್ಲಿ ಹೊಸತನ ಪರಿಚಯಿಸಲಾಗಿದೆ. ಅದರಂತೆ ರಾಜ್ಯದಲ್ಲಿಯೇ ಮೊದಲ ಬಾರಿ ಆತ್ಮನಿರ್ಭರ ಕಲ್ಪನೆಯಂತೆ ಮಂಗಳೂರು ವಿ.ವಿ.ಯೇ ಪರೀಕ್ಷಾ ಸಾಪ್ಟ್ ವೇರ್‌ ಸಿದ್ದಪಡಿಸಿದೆ ಎನ್ನುತ್ತಾರೆ ಸಿಂಡಿಕೇಟ್‌ ಸದಸ್ಯ ರಮೇಶ್‌ ಅವರು.

ಉಚಿತವಾಗಿ ದೊರೆತ
ಸಾಪ್ಟ್ ವೇರ್‌!
ಮಂಗಳೂರು ವಿ.ವಿ.ಯ ಸಿಂಡಿಕೇಟ್‌ ಒಪ್ಪಿಗೆಯ ಮೇರೆಗೆ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್‌ ಮಂಗಳೂರು ಕಾಲೇಜಿನ ಪ್ರಾಂಶುಪಾಲರಾದ ಹರೀಶ್‌ ಶೆಟ್ಟಿ ಅವರು “ಎಂ.ಯು ಲಿಂಕ್ಸ್‌’ ಸಾಪ್ಟ್ ವೇರ್‌ ಸಿದ್ದಪಡಿಸಿ ಕೊಟ್ಟಿದ್ದಾರೆ. ಸಾಮಾನ್ಯವಾಗಿ ಸಾಪ್ಟ್ ವೇರ್‌ ಮಾಡಿಕೊಡಲು 2.50 ಕೋ.ರೂ. ಖರ್ಚಾಗುತ್ತದೆ. ಆದರೆ ಹರೀಶ್‌ ಶೆಟ್ಟಿ ಅವರು ಉಚಿತವಾಗಿ ಇದನ್ನು ವಿ.ವಿ.ಗೆ ಮಾಡಿಕೊಟ್ಟಿದ್ದಾರೆ.

ಪ್ರಸ್ತುತ ಇರುವ ವಿದ್ಯಾರ್ಥಿಗಳ ಎಲ್ಲ ವಿವರಗಳು “ಎಂ.ಯು ಲಿಂಕ್ಸ್‌’ ನಲ್ಲಿ ಸಂಗ್ರಹಿಸಿಡಲಾಗಿದೆ. ಆದರೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಬಳಿಕ ಸೇರಿದ ವಿದ್ಯಾರ್ಥಿಗಳ ಪರೀಕ್ಷಾ ವಿವರ ಹೊಸದಾಗಿ ಆರಂಭಿಸಲಾದ ಯುಯುಸಿ ಎಂಎಸ್‌ (ಸಮಗ್ರ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣ ವ್ಯವಸ್ಥೆ) ಸಾಫ್ಟ್ ವೇರ್‌ನಲ್ಲಿ ಇರಲಿದೆ.

ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ಇತರ ವಿವಿಗೂ ಎಂ.ಯು ಲಿಂಕ್ಸ್‌!
ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರು ವಿ.ವಿ.ಯೇ ಪರೀಕ್ಷಾ ಸಾಪ್ಟ್ ವೇರ್‌  ಮಾಡಿ ಅದರಿಂದ ಲಾಭ ಮಾಡಿಕೊಂಡ ವಿಚಾರ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಲ್ಲಿ ಚರ್ಚೆಯಾಗಿದೆ. ಹಾಗೂ ಖಾಸಗಿ ಏಜೆನ್ಸಿ ಮೂಲಕ ಪರೀಕ್ಷಾ ಸಾಪ್ಟ್ ವೇರ್‌ ಮಾಡಿರುವ ಕೆಲವು ವಿ.ವಿ.ಗಳಲ್ಲಿಯೂ ಎಂ.ಯು ಲಿಂಕ್ಸ್‌ ಮಾದರಿ ಸಾಪ್ಟ್ ವೇರ್‌ ಜಾರಿಗೆ ಒಲವು ವ್ಯಕ್ತಪಡಿಸಿದ್ದಾರೆ. ವಿಶೇಷವೆಂದರೆ ಯುಯುಸಿಎಂಎಸ್‌ ಸಾಪ್ಟ್ ವೇರ್‌ ರಚನೆ ಸಂದರ್ಭದಲ್ಲಿಯೂ ಎಂ.ಯು ಲಿಂಕ್ಸ್‌ನ ಅಂಶಗಳನ್ನೇ ಸ್ವೀಕರಿಸಲಾಗುತ್ತಿದೆ.

ಆತ್ಮನಿರ್ಭರ ಪರಿಕಲ್ಪನೆ ಜಾರಿ
ಮಂಗಳೂರು ವಿ.ವಿ.ಯೇ ಮೊದಲ ಬಾರಿಗೆ ಆತ್ಮನಿರ್ಭರ ಪರಿಕಲ್ಪನೆಯಲ್ಲಿ ಎಂ.ಯು ಲಿಂಕ್ಸ್‌ ಸಾಪ್ಟ್ ವೇರ್‌ ಸಿದ್ಧಪಡಿಸಿ ಪರೀಕ್ಷೆಯನ್ನು ನಡೆಸಿದೆ. ಇದರಿಂದ ಲಾಭದಾಯಕವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದಲ್ಲಿ ಕಡಿತ ಮಾಡುವ ಮಹತ್ವದ ನಿರ್ಧಾರವನ್ನು ವಿ.ವಿ. ಸಿಂಡಿಕೇಟ್‌ ಕೈಗೊಂಡಿದೆ. ಎಂ.ಯು.ಲಿಂಕ್ಸ್‌ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯದ ಇತರ ವಿವಿಯಲ್ಲಿಯೂ ಇದೇ ಮಾದರಿ ಅನುಷ್ಠಾನದ ಬಗ್ಗೆ ಆಸಕ್ತಿ ಕೇಳಿಬಂದಿದೆ.
– ಪ್ರೊ| ಪಿ.ಎಲ್‌. ಧರ್ಮ,
ಕುಲಸಚಿವರು (ಪರೀಕ್ಷಾಂಗ), ಮಂಗಳೂರು ವಿವಿ

ಅಂಕಪಟ್ಟಿ ಪ್ರಿಂಟ್‌ ವಿ.ವಿ.ಯಲ್ಲಿ !
ಇದೇ ಮೊದಲ ಬಾರಿಗೆ ಅಂಕಪಟ್ಟಿಯನ್ನು ಕೂಡ ಮಂಗಳೂರು ವಿ.ವಿ.ಯೇ ಪ್ರಿಂಟ್‌ ಮಾಡಿದೆ. ಇಲ್ಲಿಯವರೆಗೆ ಏಜೆನ್ಸಿ ಮುಖಾಂತರ ಪ್ರಿಂಟ್‌ ಮಾಡಲಾಗುತ್ತಿತ್ತು. ಎನ್‌ಇಪಿ ಪೂರ್ಣಮಟ್ಟದಲ್ಲಿ ಜಾರಿಯಾದ ಬಳಿಕ ಅಂಕಪಟ್ಟಿ ಪ್ರಿಂಟ್‌ ಮಾಡುವ ಪ್ರಕ್ರಿಯೆ ಸ್ಥಗಿತವಾಗಲಿದೆ. ಸಾಫ್ಟ್ ಕಾಪಿಯಲ್ಲಿ ಸಿಗಲಿದೆ!

– ದಿನೇಶ್‌ ಇರಾ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.