Mangaluru 10 ಸಾವಿರ ಸ್ವನಿಧಿ ಫಲಾನುಭವಿಗಳ ಸಮಾವೇಶ
ಮಂಗಳೂರಿನಲ್ಲಿ ಸ್ವನಿಧಿ ಸಮೃದ್ಧಿ ಮೇಳ ಉದ್ಘಾಟಿಸಿ ಸಂಸದ ನಳಿನ್
Team Udayavani, Dec 18, 2023, 11:59 PM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಪಿಎಂ ಸ್ವ ನಿಧಿ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ 12.61 ಕೋ.ರೂ. ಬ್ಯಾಂಕ್ ಸಾಲ ವಿತರಿಸಲಾಗಿದ್ದು, ಜನವರಿ 2ನೇ ವಾರದಲ್ಲಿ ಮಂಗಳೂರಿನಲ್ಲಿ 10 ಸಾವಿರ ಮಂದಿ ಫಲಾನುಭವಿಗಳ ಉಪಸ್ಥಿತಿಯಲ್ಲಿ ಸ್ವ ನಿಧಿ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದ.ಕ. ಜಿಲ್ಲಾಡಳಿತ, ಮಂಗಳೂರು ಪಾಲಿಕೆ ಆಶ್ರಯದಲ್ಲಿ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಮಂಗಳೂರು ಪುರಭವನದಲ್ಲಿ ಸೋಮವಾರ ಆಯೋಜಿಸಲಾದ ಸ್ವನಿಧಿ ಸಮೃದ್ಧಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಲ್ಲಿಯವರೆಗೆ 8,851 ಫಲಾನು ಭವಿಗಳು ಸ್ವನಿಧಿ ಯೋಜನೆಯ ಲಾಭ ಪಡೆದಿದ್ದಾರೆ. ಪ್ರಥಮ ಹಂತದಲ್ಲಿ 10 ಸಾವಿರ ರೂ.ಗಳಂತೆ ಒಟ್ಟು 6,538 ಫಲಾನುಭವಿಗಳಿಗೆ 6.54 ಕೋ.ರೂ., ದ್ವಿತೀಯ ಹಂತ 20 ಸಾವಿರ ರೂ.ಗಳಂತೆ 1,829 ಫಲಾನುಭವಿಗಳಿಗೆ 3.66 ಕೋ.ರೂ. ಹಾಗೂ ತೃತೀಯ ಹಂತದ 50 ಸಾವಿರ ರೂ. ಗಳಂತೆ 484 ಫಲಾನುಭವಿಗಳಿಗೆ 2.41 ಕೋ.ರೂ ಬ್ಯಾಂಕ್ ಸಾಲ ವಿತರಣೆಯಾಗಿದೆ ಎಂದರು.
ಪ್ರಧಾನಿ ಕಾರ್ಯಕ್ರಮಗಳ ಬಗ್ಗೆ ಜನಮಾನಸಕ್ಕೆ ತಿಳಿಸುವ ನಿಟ್ಟಿನಲ್ಲಿ ಭಾರತ ವಿಕಸಿತ ಯಾತ್ರೆ ಅನುಷ್ಠಾನಕ್ಕೆ ಬಂದಿದ್ದು, ಸಾಮಾನ್ಯ ಜನರಿಗೆ ಕೇಂದ್ರದ ಯೋಜನೆಯನ್ನು ಮನೆಬಾಗಿಲಿಗೆ ತಲುಪಿಸುವ ಕಾರ್ಯ ನಡೆಯಲಿದೆ. ಜಿಲ್ಲೆಯಾದ್ಯಂತ ಈ ಯಾತ್ರೆ ಸಂಚರಿಸಲಿದೆ ಎಂದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸ್ವ ನಿಧಿ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಮತ್ತಷ್ಟು ಮಂದಿಗೆ ಇದರ ಲಾಭ ಸಿಗುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಉಪಮೇಯರ್ ಸುನೀತ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ವಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಮಾಜಿ ಮೇಯರ್ ಎಂ. ಶಶಿಧರ ಹೆಗ್ಡೆ, ಪಾಲಿಕೆಯ ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರಾದ ಲೋಹಿತ್ ಅಮೀನ್, ವರುಣ್ ಚೌಟ, ಭರತ್ ಕುಮಾರ್, ಗಣೇಶ್ ಸಹಿತ ಮನಪಾ ಸದಸ್ಯರು, ಉಪಆಯುಕ್ತ ರವಿಕುಮಾರ್, ಪ್ರಮುಖ ರಾದ ಕವಿತಾ, ಪ್ರದೀಪ್ ಡಿ’ಸೋಜಾ, ಮಾಲಿನಿ ಉಪಸ್ಥಿತರಿದ್ದರು. ರಾಜೇಶ್ ಸುವರ್ಣ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು
Mangaluru ಮೂಲದ ಫಾ| ವಿಲ್ಫ್ರೆಡ್ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್ ಆಗಿ ನೇಮಕ
ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು
Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್ ಇಲ್ಲದೆ ಸಂಚಾರ; ನಟಿಗೆ ದಂಡ!
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ
ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್ ಜಾರಿ
Sakaleshpura ಪಿಕಪ್ ಪಲ್ಟಿ: ಕಕ್ಯಪದವಿನ ಯುವಕ ಸಾವು
Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು
Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ