Mangaluru; ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿದ ವಾಹನಕ್ಕೆ 5 ಸಾವಿರ ರೂ. ದಂಡ
Team Udayavani, Jan 11, 2024, 12:36 AM IST
ಮಂಗಳೂರು: ನಗರದ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದು ಗಲೀಜು ಮಾಡುತ್ತಿರುವ ಪ್ರಕರಣಗಳ ಬಗ್ಗೆ ಎಚ್ಚೆತ್ತುಕೊಂಡಿರುವ ಮಂಗಳೂರು ಪಾಲಿಕೆ ತ್ಯಾಜ್ಯ ಸುರಿಯುವವರ ವಿರುದ್ಧ ದಂಡ ಪ್ರಯೋಗವನ್ನು ಮುಂದುವರಿಸಿದೆ.
ತಲಪಾಡಿ ಭಾಗದಿಂದ ತ್ಯಾಜ್ಯವನ್ನು ತಂದು ಪಡೀಲ್ ಜಂಕ್ಷನ್ನಲ್ಲಿ ಸುರಿಯುತ್ತಿದ್ದ ವಾಹನ ಚಾಲಕನಿಗೆ ಪಾಲಿಕೆ ಅಧಿಕಾರಿಗಳು ಬುಧವಾರ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಇಂತಹ ವರ್ತನೆಯನ್ನು ಪುನರಾವರ್ತಿಸಿದರೆ ದಂಡ ಮೊತ್ತವನ್ನು ದ್ವಿಗುಣಗೊಳಿಸುವ ಎಚ್ಚರಿಕೆ ನೀಡಲಾಗಿದೆ.
ಪಾಲಿಕೆ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಸಜಿತ್, ಪರಿಸರ ಅಧಿಕಾರಿ ಸುಶಾಂತ್ ಹಾಗೂ ಸೂಪರ್ವೈಸರ್ ಪ್ರವೀಣ್ ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ