ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ದಂಪತಿ
ಸರಳವಾಗಿ ಸುಂದರವಾಗಿರುವ ದೇಗುಲಕ್ಕೆ ಮತ್ತೆ ಮತ್ತೆ ಬರಬೇಕು ಅನಿಸುತ್ತಿದೆ...
Team Udayavani, Dec 4, 2022, 7:26 PM IST
ಮಂಗಳೂರು: ಪ್ರಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಅವರೊಂದಿಗೆ ಭಾನುವಾರ (ಡಿ 4)ರ ಭಾನುವಾರ ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ನುಡಿ ಹಬ್ಬ ‘ಭ್ರಮರ ಇಂಚರ’ ದಲ್ಲಿ ಮತ್ತು ಮೂಲ್ಕಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭೇಟಿ ನೀಡಿದ್ದ ಅವರು ದೇವಿಯ ದರ್ಶನವನ್ನು ಪಡೆದಿದ್ದಾರೆ. ದೇವಾಲಯದ ಆಡಳಿತ ಮಂಡಳಿಯಿಂದ ದಂಪತಿಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.
ಸುದೀಪ್ ದಂಪತಿ ಭೇಟಿ ನೀಡಿದ ವೇಳೆ ದೇವಾಲಯದಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದರು. ಕ್ಷೇತ್ರದ ಮಹಿಮೆ, ಇತಿಹಾಸದ ಕುರಿತು ಕ್ಷೇತ್ರದ ಪ್ರಧಾನ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರು ವಿವರಿಸಿದರು. ಸಾವಿರಾರು ಮಂದಿ ಖ್ಯಾತ ನಟನೊಂದಿಗೆ ಸೆಲ್ಫಿ, ಫೋಟೋಗಾಗಿ ಮುಗಿಬಿದ್ದರು.
ಕಾಲೇಜಿನ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಸುದೀಪ್, ”ಸರಳವಾಗಿ ಸುಂದರವಾಗಿರುವ ದೇವಾಲಯಕ್ಕೆ ಮತ್ತೆ ಮತ್ತೆ ಬರಬೇಕು ಅನಿಸುತ್ತಿದೆ. ಪ್ರಿಯಾ ಕೂಡಾ ಅದನ್ನೇ ಹೇಳಿದ್ದಾರೆ. ಇಲ್ಲಿನ ಆದರಾತಿಥ್ಯ ನನಗೆ ಬಹಳ ಖುಷಿ ನೀಡಿದೆ. ಬೆಳಗ್ಗೆ ಅಭಿಮಾನಿಯೊಬ್ಬರು ಭರ್ಜರಿ ತಿಂಡಿ ವ್ಯವಸ್ಥೆ ಮಾಡಿದರು. ನಾನು ಮತ್ತೆ ಮತ್ತೆ ಬರುತ್ತೇನೆ” ಎಂದು ಸಂಭ್ರಮ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್