Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ
ವೈರಲ್ ಆಗುತ್ತಿರುವ ವಿಡಿಯೋ... ಏನಿದು ಘಟನೆ?
Team Udayavani, May 8, 2024, 11:37 AM IST
ಮಂಗಳೂರು: ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿದ್ದು, ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು ಹೊಡೆದಾಟಕ್ಕಿಳಿದಿರುವುದು ಕಂಡು ಬಂದಿದೆ. ಸೆಂಟ್ರಲ್ ರೈಲ್ವೇ ನಿಲ್ದಾಣದ ಹೊರಗೆ ನಡೆದ ಹೊಡೆದಾಟ ಮತ್ತು ತೀವ್ರ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಏನಿದು ಘಟನೆ?
ಬುಧವಾರ(ಮೇ 8) ಬೆಳಗ್ಗೆ 7. 30ಕ್ಕೆ ಚೆನ್ನೈನಿಂದ ದಂಪತಿ ಬಂದಿದ್ದು, ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಲು ಸ್ಥಳೀಯರಾದ ಇಬ್ಬರು ಬಂದಿದ್ದರು. ರೈಲ್ವೇ ನಿಲ್ದಾಣದಲ್ಲಿ ಪ್ರಸ್ತುತ ವ್ಯವಸ್ಥೆಯ ಪ್ರಕಾರ, ನಿಗದಿತ ಸ್ಥಳಗಳಲ್ಲಿ ಮಾತ್ರ ಪಾರ್ಕಿಂಗ್ ಮಾಡಬೇಕು ಮತ್ತು ಎಲ್ಲಾ ಪ್ರಯಾಣಿಕರ ಅನುಕೂಲಕ್ಕಾಗಿ ವಿಸ್ತೃತ ಸಮಯವನ್ನು ಕಾಯದೆ ಮುಖ್ಯ ಗೇಟ್ನ ಮುಂದೆ ಪಿಕಪ್ ಮತ್ತು ಡ್ರಾಪ್ ಅನ್ನು ಮಾತ್ರ ಅನುಮತಿಸಲಾಗುತ್ತದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಎಂಬ ವ್ಯಕ್ತಿ ಮತ್ತು ದಂಪತಿಯನ್ನು ಕರೆದುಕೊಂಡು ಹೋಗಲು ಬಂದ ಇಬ್ಬರು ವ್ಯಕ್ತಿಗಳ ನಡುವೆ ಸಣ್ಣ ಮಟ್ಟದ ವಾಗ್ವಾದ ನಡೆದಿದೆ. ನಂತರ ವಾದವನ್ನು ನೋಡಿ ಚಂದನ್ ಬೆಂಬಲವಾಗಿ ಆಟೋರಿಕ್ಷಾ ಚಾಲಕರು ಮಧ್ಯಪ್ರವೇಶಿಸಿದ್ದಾರೆ. ಆಬಳಿಕ ವಿಡಿಯೋದಲ್ಲಿ ಕಂಡು ಬಂದಿರುವಂತೆ ವಾಗ್ವಾದ ತಾರಕಕ್ಕೇರಿದ್ದು, ತಳ್ಳಾಟ ನೂಕಾಟ ನಡೆದಿದೆ.
ಆಟೋ ಚಾಲಕರ ಗುರುತನ್ನು ಪರಿಶೀಲಿಸಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲಿಸಲಾಗುತ್ತಿದೆ.ಈ ವಿಷಯದಲ್ಲಿ ಲಭ್ಯವಿರುವ ಎಲ್ಲಾ ಸಂಗತಿಗಳನ್ನು ಆಧರಿಸಿ ಸೂಕ್ತ ಕ್ರಮವನ್ನು ತ್ವರಿತವಾಗಿ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಮಕ್ಕಳ ಕೈಗೆ ಮೊಬೈಲ್ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ