ಮಂಗಳೂರಿನಲ್ಲಿ ಅಮ್ಮ; ಪ್ರವಚನ, ಸತ್ಸಂಗ, ಅನುಗ್ರಹ ದರ್ಶನ 


Team Udayavani, Mar 9, 2019, 5:32 AM IST

9-march-4.jpg

ಮಹಾನಗರ: ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರಾದ ಸದ್ಗುರು ಶ್ರೀ ಮಾತಾ ಅಮೃತಾ ನಂದಮಯಿ ದೇವಿ (ಅಮ್ಮ) ಅವರು ಶುಕ್ರವಾರ ನಗರದ ಸುಲ್ತಾನ್‌ಬತ್ತೇರಿಯ ಅಮೃತ ವಿದ್ಯಾಲಯಂ ಮೈದಾನದಲ್ಲಿ ಆಯೋಜಿಸಲಾದ ‘ಅಮೃತ ಸಂಗಮ -2019’ರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಶ್ರದ್ಧೆಯಿಂದ ಪಾಲ್ಗೊಂಡರು. ಶನಿವಾರವೂ ಅಮೃತ ಸಂಗಮ ಕಾರ್ಯಕ್ರಮ ನಡೆಯಲಿದ್ದು, ಅಮ್ಮನವರು ಅನುಗ್ರಹ ದರ್ಶನ ನೀಡಲಿದ್ದಾರೆ.

ಶುಕ್ರವಾರ ಬೆಳಗ್ಗೆ ನಡೆದ ಸಭೆಯಲ್ಲಿ ಸುಮಾರು 25 ಅಂಗವಿಕಲರಿಗೆ ಗಾಲಿ ಕುರ್ಚಿಗಳ ವಿತರಣೆ, ಸುಮಾರು 50,000 ರೂ. ವಿದ್ಯಾರ್ಥಿವೇತನ ವಿತರಣೆ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ವಿತರಣೆ, 17 ಲಕ್ಷ ರೂ. ವೆಚ್ಚದಲ್ಲಿ ಅಮಲ ಭಾರತ ಯೋಜನೆಯಡಿ ಆಧುನಿಕ ಮಾದರಿಯ ಶೌಚಾಲಯ ನಿರ್ಮಾಣ, ಅಮೃತ ಶ್ರೀ ಯೋಜನೆಯ ಮಹಿಳಾ ಸ್ವಾವಲಂಬಿ, ಸ್ವ ಉದ್ಯೋಗ ಯೋಜನೆಯ ಅಂಗವಾಗಿ ಹೊಲಿಗೆ ಯಂತ್ರ ವಿತರಣೆ ಮತ್ತು ಅಮೃತ ಶ್ರೀ ಯೋಜನೆಯ ಸದಸ್ಯರಿಗೆ ಸೀರೆ ವಿತರಣೆ ನಡೆಯಿತು. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರವಚನ, ಸತ್ಸಂಗ
ಶುಕ್ರವಾರ ಯಜ್ಞಶಾಲೆಯಲ್ಲಿ ಅಮ್ಮನವರಿಂದ ಪ್ರವಚನ, ಸತ್ಸಂಗ, ಭಜನೆ, ಧ್ಯಾನ, ಮಾನಸ ಪೂಜೆ ನೆರವೇರಿತು. ಶನಿವಾರವೂ ಈ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಹಲವು ಭಕ್ತರಿಗೆ ಅಪ್ಪುಗೆಯ ಮೂಲಕ ಅನುಗ್ರಹ ದರ್ಶನ ನೀಡಿದರು. ಜನರು ಜೀವನದಲ್ಲಿ ಅನುಭವಿಸುತ್ತಿರುವ ಸಂಕಷ್ಟಗಳ ಪರಿಹಾರಕ್ಕಾಗಿ ಅಮ್ಮನವರಿಂದ ಮಾರ್ಗೋಪದೇಶ ಪಡೆದುಕೊಂಡರು. ಜಾತಿ, ಮತ, ವರ್ಣ, ಲಿಂಗ ಭೇದವಿಲ್ಲದೆ ಎಲ್ಲರ ದುಃಖಗಳಿಗೆ ಅಮ್ಮ ತನ್ನ ಕರುಣಾಮಯಿ ಹೃದಯದಿಂದ ಅಪ್ಪಿ ಸಂತೈಸುತ್ತಾ ಅವರೆಲ್ಲರ ಬಾಳಿಗೆ ಚೈತನ್ಯ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ವಿಶೇಷ ಪೂಜೆಗಳು ನಡೆದಿದ್ದು, ಶನಿವಾರವೂ ಇದು ಮುಂದುವರಿಯಲಿದೆ.

ಬ್ರಹ್ಮಸ್ಥಾನ ಮಹೋತ್ಸವ
ನವಗ್ರಹ ಶಾಂತಿ ಹೋಮ, ಮಹಾ ಸುದರ್ಶನ ಹೋಮ, ಭಗವತಿ ಪೂಜಾ, ಮಹಾಗಣಪತಿ ಹೋಮ, ಶ್ರೀಲಲಿತಾ ತ್ರಿಶತಿ, ಅಲಂಕಾರ ಪೂಜಾ ಸಹಿತ ವಿವಿಧ ಅರ್ಚನೆಗಳು ಬ್ರಹ್ಮಸ್ಥಾನ ಮಹೋತ್ಸವ ಹಿನ್ನೆಲೆಯಲ್ಲಿ ನೆರವೇರಿವೆ.

ಇಂದು ಅಮ್ಮನವರ ಅನುಗ್ರಹ ದರ್ಶನ 
ಮಂಗಳೂರಿನ ಮಠಾಧಿಪತಿ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯರ ನಿರ್ದೇಶನದಂತೆ ವಿದೇಶೀ ಭಕ್ತರ ಸಹಿತ ಆಗಮಿಸಿದ ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಅಮ್ಮನವರ ದರ್ಶನ ಪಡೆಯಲು ಯಾವುದೇ ಶುಲ್ಕವಿಲ್ಲ. ಅಗತ್ಯವಾದ ಟೋಕನ್‌ಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲಾಗುತ್ತದೆ. ಸಕಾಲದಲ್ಲಿ ಆಗಮಿಸಿ ಆಸೀನರಾಗಿರುವವರೆಲ್ಲರಿಗೂ ಅವರು ಆಗಮಿಸಿದ ಸಮಯಾನುಸಾರದಂತೆ ದರ್ಶನ ಪಡೆಯಲು ಅವಕಾಶವಿರುತ್ತದೆ. ಸಾರ್ವಜನಿಕರ ಅಭಿಪ್ರಾಯದಂತೆ ಇನ್ನಷ್ಟು ಸರಳವಾಗಿ ಅಮ್ಮನ ದರ್ಶನದ ವ್ಯವಸ್ಥೆಯನ್ನು ಈ ವರ್ಷ ಮಾಡಲಾಗಿದೆ. ಶುಕ್ರವಾರ ಸಾವಿರಾರು ಮಂದಿ ಅಮ್ಮನ ಅನುಗ್ರಹ ದರ್ಶನ ಪಡೆದರು ಎಂದು ಪ್ರಸಾದ್‌ರಾಜ್‌ ಕಾಂಚನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.