Mangaluru 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
Team Udayavani, Feb 28, 2024, 11:19 PM IST
ಮಂಗಳೂರು: ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಳ್ತಂಗಡಿಯ ತೋಟತ್ತಾಡಿಯ ಟಿ.ಇ. ಜೋಸೆಫ್ (58)ನನ್ನು ಪೊಲೀಸರು 16 ವರ್ಷಗಳ ಅನಂತರ ಬಂಧಿಸಿದ್ದಾರೆ.
ಈತನ ವಿರುದ್ಧ ದ.ಕ. ಹಾಗೂ ಕೇರಳದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ಈತ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು.
ಫೆ. 22ರಂದು ತೃಶ್ಶೂರ್ನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಮಂಗಳೂರು ಕರಾವಳಿ ಕಾವಲು ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಎಎಸ್ಐ ಆಶೋಕ್, ಹೆಡ್ಕಾನ್ಸ್ಟೆಬಲ್ಗಳಾದ ವಿಜಯ ಸುವರ್ಣ, ಲೋಕೇಶ್ ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.