Mangaluru ಗಾಂಜಾ ಮಾರಾಟ ಮಾಡುತ್ತಿದ್ದಾತನ ಬಂಧನ
Team Udayavani, Mar 19, 2024, 12:56 AM IST
ಮಂಗಳೂರು: ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೇ ಫ್ಲೆ$ç ಓವರ್ ಬಳಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲಾಪು ಪಟ್ಲ ನಿವಾಸಿ ಮೊಹಮ್ಮದ್ ನಿಝಾಮ್ ಯಾನೆ ನಿಜ್ಜಾ ಬಂಧಿತ ಆರೋಪಿ. ಆತನಿಂದ 254 ಗ್ರಾಂ ಗಾಂಜಾವನ್ನು ಮತ್ತು ಪೋನ್ ಸೇರಿ ಒಟ್ಟು 9,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ.
ಈತನ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಾರೆಂಟ್ ಜಾರಿಯಾಗಿದ್ದು, ಸುಮಾರು 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆತಲೆಮರೆಸಿಕೊಂಡಿದ್ದ.
26 ಪ್ರಕರಣದಲ್ಲಿ ಸೇವನೆ ದೃಢ
ಮಾರ್ಚ್ ತಿಂಗಳಲ್ಲಿ ಮಂಗಳೂರು ನಗರದ ದಕ್ಷಿಣ ಉಪ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 56 ಸಂಶಯಾಸ್ಪದ ವ್ಯಕ್ತಿಗಳನ್ನು ಮಾದಕ ವಸ್ತು/ದ್ರವ್ಯ ಸೇವನೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ 26 ವ್ಯಕ್ತಿಗಳ ಪರೀಕ್ಷೆಯಲ್ಲಿ ಮಾದಕ ವಸ್ತು/ದ್ರವ್ಯ ಸೇವನೆ ದೃಢಪಟ್ಟಿದ್ದು ಆಯಾ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ