ಬೆಂಗಳೂರು-ಮಂಗಳೂರು ವಿಶೇಷ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ!
Team Udayavani, Apr 9, 2021, 2:08 PM IST
ಮಂಗಳೂರು: ವಾರದಲ್ಲಿ ನಾಲ್ಕು ದಿನ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲಿನ ವೇಳಾ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಈ ರೈಲು ಏಪ್ರಿಲ್ 11 ರಿಂದ ಪ್ರತಿ ದಿನ ಸಂಚರಿಸಲಿದೆ.
ಇಂದು ( ಏಪ್ರಿಲ್ 9) ಈ ಬಗ್ಗೆ ಪ್ರಕಟನೆ ಹೊರಡಿಸಿರುವ ರೈಲು ಅಧಿಕಾರಿಗಳು ವಾರದ ನಾಲ್ಕು ದಿನ ವಾಯಾ ಕುಣಿಗಲ್ ಮೇಲೆ ಸಂಚರಿಸುತ್ತಿದ್ದ ಬೆಂಗಳೂರು- ಮಂಗಳೂರು ವಿಶೇಷ ರೈಲು ಇನ್ಮುಂದೆ ಪ್ರತಿ ದಿನ ಓಡಾಡಲಿದೆ ಎಂದಿದ್ದಾರೆ.
ವಿಶೇಷ ಎಕ್ಸಪ್ರೆಸ್ ಟ್ರೈನ್ ನಂಬರ್ 06515/06516 ಪ್ರತಿ ದಿನ ರಾತ್ರಿ 9.30ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಮಂಗಳೂರಿಗೆ 7.55ಕ್ಕೆ ತಲುಪಲಿದೆ. ಇದೇ ಟ್ರೈನ್ ಮಂಗಳೂರಿನಿಂದ ರಾತ್ರಿ 8.10 ಕ್ಕೆ ಹೊರಟು ಮಾರನೇ ದಿನ ಮುಂಜಾನೆ 6.50ಕ್ಕೆ ಬೆಂಗಳೂರಿಗೆ ಬಂದು ತಲುಪಲಿದೆ.
ಇನ್ನು ಇಂದಿನಿಂದ(ಏಪ್ರಿಲ್9) ಯಶವಂತಪುರ-ಕಾರವಾರ (06513/14) ರೈಲಿನ ವೇಳಾಪಟ್ಟಿಯಲ್ಲಿಯೂ ಬದಲಾವಣೆಯಾಗಿದೆ. ಈ ರೈಲು ಪ್ರತಿದಿನ ರಾತ್ರಿ 11.45ಕ್ಕೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಡಲಿದ್ದು, ಮರುದಿನ ಮಧ್ಯಾಹ್ನ 3.40 PMಗೆ ಬಂದು ಸೇರಲಿದೆ. ಇದೆ ಟ್ರೈನ್ ಕಾರವಾರ ರೈಲು ನಿಲ್ದಾಣದಿಂದ ಸಂಜೆ 4.40 PM ಮರು ಪ್ರಯಾಣ ಬೆಳೆಸಲಿದ್ದು, ಯಶವಂತಪುರ ರೈಲು ನಿಲ್ದಾಣಕ್ಕೆ ಮರುದಿನ 11.45 AMಗೆ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ