ಬಹುನಿರೀಕ್ಷಿತ ಚುನಾವಣೆಗೆ ತಾಲೀಮು ಆರಂಭ

ಮಂಗಳೂರು ಮಹಾನಗರ ಪಾಲಿಕೆ

Team Udayavani, Sep 16, 2019, 5:25 AM IST

1509MLR28-MCC

ಮಹಾನಗರ: ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸು ವಂತೆ ರಾಜ್ಯ ಚುನಾವಣಾ ಆಯೋಗವು ದ.ಕ. ಜಿಲ್ಲಾಧಿಕಾರಿ ಅವರನ್ನು ಕೋರಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಪೂರ್ವಸಿದ್ಧತೆ ಆರಂಭವಾದಂತಾಗಿದೆ.

ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ, 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯ ವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಂಬಂಧ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ರಾಜ್ಯ ಚುನಾವಣ ಆಯೋಗವು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸೆ.13ರಂದು ಕೋರಿತ್ತು.

ಸಿದ್ಧತೆ ಆರಂಭ
ಮತದಾನ ಪಟ್ಟಿ, ಮತದಾನ ಕೇಂದ್ರ ಗಳ ಪಟ್ಟಿ ಸಿದ್ಧಪಡಿಸುವುದು, ಮತದಾನ ಸಿಬಂದಿ ನೇಮಕ, ಇವಿಎಂಗಳ ಸಂಗ್ರಹ ಮಾಡಿ ಸಿದ್ಧಪಡಿಸಿಕೊಳ್ಳುವುದು ಹಾಗೂ ಚುನಾವಣಾಧಿಕಾರಿಗಳ ನೇಮಕ ಮಾಡಲು ಪಟ್ಟಿ ತಯಾರಿಸಿ ಸಲ್ಲಿಸುವಂತೆ ರಾಜ್ಯ ಚುನಾವಣ ಆಯೋಗ ತಿಳಿಸಿದೆ. ಮಹಾ ನಗರ ಪಾಲಿಕೆಯ ಪ್ರತಿ 5 ವಾರ್ಡ್‌ಗೆ ಉಪವಿಭಾಗಾಧಿಕಾರಿ ಅಥವಾ ತತ್ಸಮಾನ ಹುದ್ದೆಯ ಓರ್ವ ಅಧಿಕಾರಿ ಯನ್ನು ನೇಮಕ ಮಾಡಲು ಪಟ್ಟಿ ತಯಾರಿಸಿ ಸಲ್ಲಿಸುವಂತೆ ಆಯೋಗ ಕೋರಿದೆ. ಈ ಎಲ್ಲ ಕಾರಣದಿಂದ ಜಿಲ್ಲಾಡಳಿತ ಇದಕ್ಕೆ ಸ್ಪಂದಿಸುವ ನೆಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಪ್ರಾರಂಭಿಸಿದೆ.
ಚುನಾವಣ ಆಯೋಗವು ಪಾಲಿಕೆ ಚುನಾವಣೆಗೆ ಮುನ್ಸೂಚನೆ ನೀಡು ತ್ತಿದ್ದಂತೆ ಇತ್ತ ರಾಜಕೀಯ ಪಕ್ಷಗಳಲ್ಲಿ ಲೆಕ್ಕಾ ಚಾರಗಳು ಶುರುವಾಗಿವೆ. ಈಗಾಗಲೇ ಪ್ರಕಟವಾಗಿರುವ ಮೀಸಲಾತಿ, ಅದರನ್ವಯ ಸ್ಪರ್ಧೆಯ ಅವಕಾಶದ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದ ವರಿಷ್ಠರಲ್ಲಿ ಆಕಾಂಕ್ಷಿಗಳು ಮಾತುಕತೆ ನಡೆಸಲು ಆರಂಭಿಸಿದ್ದಾರೆ.

ಈ ಮಧ್ಯೆ ಪ್ರಮುಖವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದ ವರಿಷ್ಠರು ಈಗಾ ಗಲೇ ಕೆಲವು ಸುತ್ತಿನ ಆಂತರಿಕ ಸಭೆ ನಡೆಸಿ 60 ವಾರ್ಡ್‌ಗಳಲ್ಲಿ ಯಾರ ಸ್ಪರ್ಧೆಗೆ ಅವಕಾಶ ಎಂಬ ಕುರಿತಂತೆ ಪ್ರಾಥಮಿಕವಾಗಿ ಚರ್ಚಿಸಿದ್ದಾರೆ. ಆದರೆ ಯಾವುದೂ ಕೂಡ ಅಂತಿಮವಾಗಿಲ್ಲ. ಉಳಿದಂತೆ ಜೆಡಿಎಸ್‌, ಎಸ್‌ಡಿಪಿಐ ಕೂಡ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಸಕ್ತಿ ತೋರಿದೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ, ಮಂಗಳೂರು ದಕ್ಷಿಣ-ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಹಾಗೂ ನಳಿನ್‌ ಕುಮಾರ್‌ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆ ಯಲ್ಲಿ ಈ ಬಾರಿ ಪಾಲಿಕೆ ಆಡಳಿತವನ್ನು ಬಿಜೆಪಿ ಪಡೆಯುವ ನೆಲೆಯಲ್ಲಿ ಸಿದ್ಧತೆ ನಡೆಸು ತ್ತಿದ್ದರೆ, ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ನಗರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿದ ಕೆಲ ವೊಂದು ವಿಚಾರಗಳನ್ನು ಮುಂದಿಟ್ಟು ಕಾಂಗ್ರೆಸ್‌ ಮತ್ತೆ ಪಾಲಿಕೆ ಆಡಳಿತವನ್ನು ತನ್ನ ಕೈವಶ ಮಾಡಲು ಪ್ರಯತ್ನಿಸುತ್ತಿದೆ.

ಮೀಸಲಾತಿ ವಿಚಾರ;
ಚುನಾವಣೆ ತಡವಾಗಲು ಕಾರಣ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ರಾಜ್ಯ ನಗರಾಭಿವೃದ್ಧಿ ಇಲಾಖೆಯು ಸಲ್ಲಿಸಿದ್ದ ಮಂಗಳೂರು ಪಾಲಿಕೆಯ ಅಂತಿಮ ಮೀಸಲು ಪಟ್ಟಿಯಲ್ಲಿ ಆವರ್ತನ ಪದ್ಧತಿ (ರೊಟೇಶನ್‌ ಪದ್ಧತಿ)ಯನ್ನು ಸರಿಯಾಗಿ ಅನುಸರಿಸಿಲ್ಲ ಎಂದು ಪ್ರಶ್ನಿಸಿ ಕೆಲವರು ರಾಜ್ಯ ಹೈಕೋರ್ಟ್‌ನಲ್ಲಿ ರಿಟ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ಹೊಸ ಮೀಸಲು ಪಟ್ಟಿ ಸಲ್ಲಿಸುವಂತೆ ಸರಕಾರಕ್ಕೆ ಈ ಹಿಂದೆ ಸೂಚಿಸಿತ್ತು.

ಆದರೆ ಏಕಸದಸ್ಯ ಪೀಠದ ತೀರ್ಪಿನ ವಿರುದ್ಧ ರಾಜ್ಯ ಸರಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮ  ನವಿ ಸಲ್ಲಿಸಿತ್ತು. ಹೈಕೋರ್ಟ್‌ ದ್ವಿಸ ದಸ್ಯ ಪೀಠದಲ್ಲಿ ವಿಚಾರಣೆ ನಡೆದು ಮೇ 31ರಂದು ಇದನ್ನು ವಜಾ ಮಾಡಿತ್ತು. ಈ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೆಲವು ಅರ್ಜಿದಾರರು ಮತ್ತೆ ಹೈಕೋರ್ಟ್‌ ಕದ ತಟ್ಟಿದ್ದು, ವಿಚಾರಣೆ ಸದ್ಯ ನಡೆಯುತ್ತಿದೆ. ಈ ಮಧ್ಯೆ, ಕೆಲವರು ಮತ್ತೆ ನ್ಯಾಯಾ ಲಯ ದಲ್ಲಿ ಪ್ರತ್ಯೇ  ಕವಾಗಿ ಅರ್ಜಿ ಹಾಕಿ ಚುನಾ ವಣೆ ನಡೆ ಯ ದಿರುವುದನ್ನು ಪ್ರಶ್ನಿ ಸಿ ದ್ದರು. ಹೀಗಾಗಿ ನ. 15ರೊಳಗೆ ಚುನಾ ವಣಪ್ರಕ್ರಿಯೆ ಪೂರ್ಣ  ಗೊಳಿಸುವಂತೆ ಚುನಾ ವಣ ಆಯೋಗಕ್ಕೆ ಆ. 28ರಂದು ಹೈಕೋರ್ಟ್‌ಆದೇಶಿಸಿದೆ.

ಮಾ. 7ಕ್ಕೆ ಅಧಿಕಾರಾವಧಿ ಪೂರ್ಣ
ಮಹಾನಗರ ಪಾಲಿಕೆಯ ಅಧಿಕಾರಾವಧಿ 2019ರ ಮಾ. 7ಕ್ಕೆ ಅಂತ್ಯಗೊಂಡಿತ್ತು. ಆದರೆ ವಾರ್ಡ್‌ ಮೀಸಲಾತಿ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ಚುನಾವಣೆ ನಡೆದಿರಲಿಲ್ಲ. ಮಹಾನಗರ ಪಾಲಿಕೆ ಒಟ್ಟು 60 ವಾರ್ಡ್‌ಗಳನ್ನು ಒಳಗೊಂಡಿದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ 35, ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಎಸ್‌ಡಿಪಿಐ 1, ಪಕ್ಷೇತರ 1 ಸ್ಥಾನ ಪಡೆದಿದ್ದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.