Mangaluru; ಕರಾವಳಿಯ ಋಣ ತೀರಿಸಲು ಸಾಧ್ಯವಿಲ್ಲ:ನಟ ಅನಂತನಾಗ್‌

75ನೇ ಹುಟ್ಟುಹಬ್ಬ, ವೃತ್ತಿ ಜೀವನದ 50ರ ಸಂಭ್ರಮದ "ಅನಂತ ಅಭಿನಂದನೆ'

Team Udayavani, Sep 3, 2023, 10:58 PM IST

Mangaluru; ಕರಾವಳಿಯ ಋಣ ತೀರಿಸಲು ಸಾಧ್ಯವಿಲ್ಲ:ನಟ ಅನಂತನಾಗ್‌

ಮಂಗಳೂರು: ಬಾಲ್ಯದಲ್ಲಿ ಓಡಾಡಿಕೊಂಡಿದ್ದ ಕರಾವಳಿಯಲ್ಲೇ 75ನೇ ವರ್ಷದ ಸಂಭ್ರಮಾಚರಣೆ ಮಾಡಿರುವುದು ಧನ್ಯತೆ, ಸಾರ್ಥಕ್ಯ ಭಾವ ಮೂಡಿಸಿದೆ. ಮಂಗಳಾದೇವಿಯ ಕೃಪೆಯಿಂದಲೇ ಇದು ಸಾಧ್ಯವಾಗಿದ್ದು, ಪ್ರತಿದಿನ ಈ ಕ್ಷಣವನ್ನು ನೆನಪಿಸುವಂತೆ ಮಾಡಿದೆ. ಕರಾವಳಿಯ ಅಭಿಮಾನದ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಎಂದು ನಟ ಅನಂತನಾಗ್‌ ಹೇಳಿದರು.

ಅನಂತ್‌ನಾಗ್‌-75 ಅಭಿನಂದನ ಸಮಿತಿ ಹಾಗೂ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 75ನೇ ಹುಟ್ಟು ಸಂಭ್ರಮ ಮತ್ತು ವೃತ್ತಿ ಜೀವನದ 50ರ ಸಂಭ್ರಮದ ಹಿನ್ನೆಲೆಯಲ್ಲಿ ರವಿವಾರ ನಗರದ ಕೊಡಿಯಾಲಬೈಲ್‌ನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಆಯೋಜಿಸಲಾದ “ಅನಂತ ಅಭಿನಂದನೆ’ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕಾಸರಗೋಡಿನ ಆನಂದಾಶ್ರಮದಲ್ಲಿ 6 ವರ್ಷ ಕಳೆದಿದ್ದೆ. ಗುರುಗಳೇ ಸಾಕ್ಷಾತ್‌ ದೇವರು ಎನ್ನುವ ವಿಚಾರವನ್ನು ಅಲ್ಲಿ ಕಲಿತಿದ್ದೆ ಎಂದರು. ಇದೇ ವೇಳೆ ಹಾಡು ಮತ್ತು ಡೈಲಾಗ್‌ಗಳ ಮೂಲಕ ರಂಜಿಸಿದರು.

ರಾಜಕಾರಣವೆನ್ನುವ ಪಾತ್ರ!
ರಾಜಕೀಯದಲ್ಲಿ ಸ್ವಲ್ಪ ಸಮಯ ಪಾತ್ರ ಎನ್ನುವ ರೀತಿಯಲ್ಲಿದ್ದೆ. ರಾಜಕಾರಣಿಗಳ ಜೀವನ ಎಷ್ಟು ಕಷ್ಟ ಎನ್ನುವುದು ವಿಧಾನ ಪರಿಷತ್‌ ಸದಸ್ಯನಾಗಿದ್ದಾಗ ತಿಳಿಯಿತು. 90ರ ದಶಕದಲ್ಲಿ ವಿಧಾನಸಭೆಗೆ ಆಯ್ಕೆಯಾದಾಗ ನೈಜತೆ ಅರಿವಾಯಿತು. ಇನ್ನು ವೈಯಕಿಕ್ತ ಜೀವನದ ಕಡೆಗೆ ಯಾವ ಗಮನವನ್ನೂ ಕೊಡಲು ಆಗುವುದಿಲ್ಲ, ರೋಲ್‌ ಮುಗಿಯಿತು ಎಂದು ರಾಜಕಾರಣದಿಂದ ಹಿಂದೆ ಸರಿದೆ ಎಂದರು.ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಅವರು ಮಾತನಾಡಿ, ಅನಂತ ನಾಗ್‌ ಅವರು ರಾಜ್ಯದ ಸ್ವಾಭಿಮಾನದ ವ್ಯಕ್ತಿತ್ವ.

ಕಾಲ ನಿರ್ಣಾಯಕರಾಗಿದ್ದು, ನಾವು “ಅನಂತನಾಗ್‌ ಕಾಲದಲ್ಲಿ’ ಇದ್ದವರು ಎಂದು ಗೌರವದಿಂದ ಹೇಳಬಹುದು. ಪಾತ್ರಕ್ಕೆ ಜೀವ ಕೊಡುವ ನಟ, ಕರ್ನಾಟಕದ ಅಮಿತಾಭ್‌ ಬಚ್ಚನ್‌ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಶಂಕರ್‌ನಾಗ್‌ ಅವರಲ್ಲಿ ನಿರ್ದೇಶಕನ ಕೌಶಲವಿದ್ದರೆ, ಅನಂತನಾಗ್‌ ಉತ್ತಮ ನಾಯಕ ನಟ. ಸಹಜ ನಟನೆ ಅವರ ವಿಶೇಷತೆಯಾಗಿದ್ದು, ಆದರಿಂದಲೇ ಯಶಸ್ಸು ಕಂಡಿದ್ದಾರೆ ಎಂದರು.

ಚಲನಚಿತ್ರ ನಟ ರಿಷಭ್‌ ಶೆಟ್ಟಿ ಮಾತನಾಡಿ, ಚಲನಚಿತ್ರ ರಂಗದ 50 ವರ್ಷ ಮಹಾನ್‌ ಸಾಧನೆಗೆ ದಾದಾ ಸಾಹೇಬ್‌ ಪಾಲ್ಕೆ, ಪದ್ಮವಿಭೂಷಣ ಸಿಗಬೇಕಿತ್ತು. ಅನಂತನಾಗ್‌ ಅವರಿಗೆ ಸಂದಾಗ ಮಾತ್ರ ಪ್ರಶಸ್ತಿಗೆ ಗೌರವ ಸಿಗುವುದು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದಲ್ಲಿ ಅನಂತನಾಗ್‌ ನಟನೆಯ ಬಳಿಕ, ಕಾಸರಗೋಡಿನ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರು ಬಂದರೆ ಧ್ವನಿ ಎತ್ತುವ ಮಟ್ಟಕ್ಕೆ ಹೋಗಿದೆ. ಅವರು ನಟನೆ ಎಷ್ಟು ಪರಿಣಾಮ ಬೀರಿದೆ ಎನ್ನುವುದನ್ನು ಯೋಚಿಸಬಹುದು ಎಂದರು.

ಪತ್ನಿ ಗಾಯತ್ರಿ ಅನಂತನಾಗ್‌, ಪುತ್ರಿ ಅದಿತಿ, ಅಳಿಯ ವಿವೇಕ್‌, ಶಾಸಕ ವೇದವ್ಯಾಸ ಕಾಮತ್‌, ನಟ ಡಾ| ದೇವದಾಸ್‌ ಕಾಪಿಕಾಡ್‌, ಉದ್ಯಮಿ ವಾಸುದೇವ ಕಾಮತ್‌, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ್‌ ನಾಯಕ್‌, ಕರ್ನಾಟಕ ಮಾಧ್ಯಮ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಸದಾಶಿವ ಶೆಣೈ, ಕಾರ್ಯಕ್ರಮ ಸಂಚಾಲಕ ಗೋಪಿನಾಥ ಭಟ್‌, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಗಿರಿಧರ ಶೆಟ್ಟಿ, ರಂಗ ಸಂಗಾತಿ ಅಧ್ಯಕ್ಷ ಗೋಪಾಲ ಕೃಷ್ಣ ಶೆಟ್ಟಿ, ನರೇಶ್‌ ಶೆಣೈ ಉಪಸ್ಥಿತರಿದ್ದರು.

ಶಶಿರಾಜ್‌ ಕಾವೂರು ಪ್ರಸ್ತಾವನೆಗೈದರು. ಪತ್ರಕರ್ತ ಮನೋಹರ ಪ್ರಸಾದ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್‌

ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.