Mangaluru:ಡಿ.ಕೆ.ಸುರೇಶ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಕೋರ್ಟ್ ಗೆ ಅರ್ಜಿ
Team Udayavani, Feb 2, 2024, 6:50 PM IST
ಮಂಗಳೂರು: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ಮಂಗಳೂರಿನ 2ನೇ JMFC ನ್ಯಾಯಾಲಯಕ್ಕೆ ದೂರು ಅರ್ಜಿ ಸಲ್ಲಿಸಲಾಗಿದೆ.
ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವರಿಂದ ದೂರು ಅರ್ಜಿ ಸಲ್ಲಿಸಲಾಗಿದ್ದು,ಸೆಕ್ಷನ್ 124 ಎ ಅಡಿ ಎಫ್.ಐ.ಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ಮನವಿ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ, ಮಂಗಳೂರು ಉತ್ತರ ಪೊಲೀಸ್ ಠಾಣೆಗೂ ವಿಕಾಸ್ ದೂರು ನೀಡಿದ್ದಾರೆ.