ಮಂಗಳೂರು : ಅಂಗಡಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿನ ಸಜೆ


Team Udayavani, Jun 22, 2022, 9:30 PM IST

ಮಂಗಳೂರು : ಅಂಗಡಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿನ ಸಜೆ

ಮಂಗಳೂರು : ಬಟ್ಟೆ ಅಂಗಡಿಗೆ ಕೆಲಸಕ್ಕೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್‌ಸಿ-2 ನ್ಯಾಯಾಲಯವು 10 ವರ್ಷ ಕಠಿನ ಸಜೆ ವಿಧಿಸಿ ತೀರ್ಪು ನೀಡಿದೆ.

ಮಂಗಳೂರು ತಾಲೂಕು ಕಂದಾವರ ಗ್ರಾಮದ ಅಬ್ದುಲ್‌ ಲತೀಫ್ ಆಲಿಯಾಸ್‌ ಇಚ್ಚಾ(42) ಶಿಕ್ಷೆಗೊಳಗಾದ ಅಪರಾಧಿ. ಈತ 2017ರಲ್ಲಿ ಅಪ್ರಾಪೆ¤ಯ ಮೇಲೆ ಅತ್ಯಾಚಾರವೆಸಗಿ ಜೀವ ಬೆದರಿಕೆಯೊಡ್ಡಿದ್ದ.

ಪ್ರಕರಣದ ವಿವರ :
ಅಬ್ದುಲ್‌ ಲತೀಫ್ ತೆಂಕ ಉಳೆಪಾಡಿ ಗ್ರಾಮದ ಕೈಕಂಬದಲ್ಲಿ ಫಾತಿಮಾ ಡ್ರೆಸ್‌ ಕಲೆಕ್ಷನ್ಸ್‌ ಎಂಬ ಬಟ್ಟೆ ಅಂಗಡಿ ಹೊಂದಿದ್ದ. ಈತನ ಅಂಗಡಿಗೆ ಬಾಲಕಿಯೋರ್ವಳು ಕೆಲಸಕ್ಕೆ ಸೇರಿದ್ದಳು.

2017ರ ಎಪ್ರಿಲ್‌ನಲ್ಲಿ ಮಧ್ಯಾಹ್ನ ವೇಳೆ ಬಾಲಕಿ ತಲೆನೋವೆಂದು ಹೇಳಿದಾಗ ಔಷಧ ತರುವುದಾಗಿ ಹೇಳಿದ ಅಬ್ದುಲ್‌ ಲತೀಫ್ ಯಾವುದೋ ಒಂದು ಮಾತ್ರೆ ಮತ್ತು ಜ್ಯೂಸ್‌ ತಂದುಕೊಟ್ಟಿದ್ದ. ಅದನ್ನು ಸೇವಿಸಿದ ಬಾಲಕಿ ಪ್ರಜ್ಞೆ ತಪ್ಪಿದ್ದಳು. ಆ ಸಂದರ್ಭ ಅತ್ಯಾಚಾವೆಸಗಿದ್ದ. ಅನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು. ಎಲ್ಲವನ್ನೂ ವೀಡಿಯೋ ಮಾಡಿದ್ದೇನೆ. ಹೇಳಿದರೆ ಅದನ್ನು ವೈರಲ್‌ ಮಾಡುತ್ತೇನೆ. ನಾನು ಹೇಳಿದಂತೆ ಮುಂದೆಯೂ ಕೇಳಬೇಕು ಎಂದು ಬೆದರಿಕೆ ಹಾಕಿದ್ದ. ಆ ಬಳಿಕ ಬೆದರಿಸಿ ಅತ್ಯಾಚಾರವೆಸಗಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಗ 2017ರ ಆ. 11ರಂದು ಬಜಪೆ ಪೊಲೀಸರಿಗೆ ದೂರು ನೀಡಿದ್ದಳು. ಅನಂತರ ಮಗುವಿಗೆ ಜನ್ಮ ನೀಡಿದ್ದಳು. ಪೊಲೀಸರು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಅಬ್ದುಲ್‌ ಲತೀಫ್ ಮಗುವಿನ ತಂದೆ ಎಂಬುದು ದೃಢಪಟ್ಟಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್‌ಸಿ-2 ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ. ರಾಧಾಕೃಷ್ಣ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿದರು. ನೊಂದ ಬಾಲಕಿ ಮತ್ತು ಆಕೆಯ ಮನೆಯವರು ಪೂರಕ ಸಾಕ್ಷ್ಯ ನುಡಿಯದೇ ಇದ್ದರೂ ಕೂಡ ಡಿಎನ್‌ಎ ವರದಿ, ವೈದ್ಯಕೀಯ ಪ್ರಮಾಣಪತ್ರ ಮತ್ತು ತನಿಖಾಧಿಕಾರಿಗಳ ಸಾಕ್ಷ್ಯವನ್ನು ಪರಿಗಣಿಸಿ ಆರೋಪಿ ತಪ್ಪಿತಸ್ಥನೆಂದು ನ್ಯಾಯಾಧೀಶರು ತೀರ್ಪು ನೀಡಿದರು.

ಇದನ್ನೂ ಓದಿ : ಒಳ ಉಡುಪಿನಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ

ಪೋಕ್ಸೋ ಕಾಯ್ದೆಯ ಕಲಂ 6ರಡಿ ಅತ್ಯಾಚಾರ ಕೃತ್ಯಕ್ಕೆ 10 ವರ್ಷ ಕಠಿನ ಸಜೆ ಮತ್ತು 50,000 ರೂ. ದಂಡ ಹಾಗೂ ಐಪಿಸಿ ಸೆಕ್ಷನ್‌ 506ರಡಿ ಬೆದರಿಕೆಗೆ 1ವರ್ಷ ಸಾದಾ ಸಜೆ ಮತ್ತು 10,000 ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಆರೋಪಿಗೆ ಸಹಕರಿಸಿದ ಆರೋಪದಲ್ಲಿ ಬಟ್ಟೆ ಅಂಗಡಿಯ ಗೀತಾ ಎಂಬಾಕೆಯ ಮೇಲೆಯೂ ಪ್ರಕರಣ ದಾಖಲಾಗಿತ್ತು. ಆದರೆ ಸಾಕ್ಷ್ಯಾಧಾರದ ಕೊರತೆಯಿಂದ ಆಕೆಯನ್ನು ನ್ಯಾಯಾಧೀಶರು ಪ್ರಕರಣದಿಂದ ಬಿಡುಗಡೆಗೊಳಿಸಿದ್ದಾರೆ. ಸರಕಾರದ ಪರವಾಗಿ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್‌ಸಿ-2 ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು. ಇನ್‌ಸ್ಪೆಕ್ಟರ್‌ಗಳಾದ ಪಿ.ಡಿ. ನಾಗರಾಜ್‌, ಪರಶಿವ ಮೂರ್ತಿ ಮತ್ತು ಕೆ.ಆರ್‌. ನಾಯಕ್‌ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.