ವಿದೇಶಿ ಕರೆನ್ಸಿ, ಚಿನ್ನದ ಬದಲು ಕಾಗದದ ಕಟ್ಟು ನೀಡಿ 4 ಲ.ರೂ. ವಂಚನೆ
Team Udayavani, Jan 30, 2023, 10:29 PM IST
ಮಂಗಳೂರು: ವಿದೇಶಿ ಕರೆನ್ಸಿ ಮತ್ತು ಚಿನ್ನ ನೀಡುವುದಾಗಿ ಹೇಳಿ ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4 ಲ.ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮುಡಿಪು ಜಂಕ್ಷನ್ನಲ್ಲಿರುವ ತಾಜ್ಬುಕ್ ಸ್ಟಾಲ್ ಎಂಬ ಅಂಗಡಿಗೆ ಬಂದಿದ್ದ ಓರ್ವ ಅಪರಿಚಿತ ವ್ಯಕ್ತಿಯು ಆತನ ಬಳಿ ಸೌದಿ ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದ್ದು ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿದ. ಜ.29ರಂದು ಅಪರಿಚಿತ ವ್ಯಕ್ತಿ ಅಂಗಡಿಯವರಿಗೆ ಕರೆ ಮಾಡಿ 4 ಲ.ರೂ.ಗಳೊಂದಿಗೆ ಮಂಗಳೂರಿಗೆ ಬಂದು ಕರೆ ಮಾಡುವಂತೆ ತಿಳಿಸಿದ. ಅಂಗಡಿಯವರು ಜ.30ರಂದು ಅಪರಿಚಿತ ವ್ಯಕ್ತಿಗೆ ಕರೆ ಮಾಡಿದಾಗ ನಗರದ ಸ್ಟೇಟ್ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ಮೈದಾನದ ಬಳಿ ಇರುವ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಕಾಯುವಂತೆ ತಿಳಿಸಿದ.
ಅದರಂತೆ ಅಂಗಡಿಯವರು ಕಾದು ನಿಂತಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ ಅಂಗಡಿಯವರಿಂದ 4 ಲ.ರೂ. ಪಡೆದು ಆತನ ಕೈಯಲ್ಲಿದ್ದ ಪ್ಲಾಸ್ಟಿಕ್ ಕಟ್ಟನ್ನು ನೀಡಿ ತೆರಳಿದ. ಅಂಗಡಿಯವರು ಕಟ್ಟನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕಾಗದ ತುಂಡುಗಳನ್ನು ಮಡಚಿ ಒಂದರ ಮೇಲೆ ಒಂದರಂತೆ ನೋಟಿನಂತೆ ಇಟ್ಟಿರುವುದು ಕಂಡುಬಂದಿದೆ. ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬರ್ತ್ಡೇ ಪಾರ್ಟಿಯಲ್ಲಿ ಗುಂಡಿನ ದಾಳಿ: 8 ಮಂದಿ ಸಾವು, 3 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿದ್ದರಾಮಯ್ಯ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿ: ಮಾಜಿ ಸಚಿವ ದಿವಾಕರ ಬಾಬು
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್
ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ
ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ