ಮಂಗಳೂರಿಗರೇ ಗಮನಿಸಿ ; ನೀವು ತೊಂದರೆಯಲ್ಲಿ ಸಿಲುಕಿದ್ದರೆ ಇವರನ್ನು ಸಂಪರ್ಕಿಸಿ

ಗೌತಮ್ ಬೋಳಾರ್ (93418 21331), ಮತ್ತು ಶೈಲೇಶ್ ಕುಮಾರ್ (99023 37423)

Team Udayavani, Dec 19, 2019, 6:56 PM IST

Mangalore-Curfew-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ನಿಷೇಧಾಜ್ಞೆಯ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ನಿಯಂತ್ರಸಲು ಪೊಲೀಸರು ಲಾಠೀ ಚಾರ್ಜ್ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಯ ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಮಂಗಳೂರಿನ ಕೇಂದ್ರ ಉಪವಿಭಾಗ ವ್ಯಾಪ್ತಿಗೆ ಬರುವ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 20ರ ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಲಾಗಿದೆ.

ಈ ಅನಿರೀಕ್ಷಿತ ಘಟನೆಯಿಂದ ತೊಂದರೆಗೊಳಗಾಗಬಹುದಾದವರಿಗೆ ಸಹಾಯಹಸ್ತ ಚಾಚಲು ಗೌತಮ್ ಬೋಳಾರ್ ಮತ್ತು ಶೈಲೇಶ್ ಕುಮಾರ್ ಎಂಬ ಇಬ್ಬರು ಮಂಗಳೂರಿಗರು ಮುಂದೆ ಬಂದಿದ್ದಾರೆ.

ನಗರದಲ್ಲಿ ಕರ್ಫ್ಯೂ ವಿಧಿಸಿರುವುದರಿಂದ ಬಸ್ಸು ಮತ್ತು ವಾಹನ ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಮನೆಗೆ ತಲುಪಲಾಗದೇ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಮತ್ತು ಸಾರ್ವಜನಿಕರ ಸಹಾಯಕ್ಕೆ ಇವರಿಬ್ಬರು ಈಗಾಗಲೇ ಕಾರ್ಯೋನ್ಮುಖರಾಗಿದ್ದಾರೆ.

ಈ ಕುರಿತಾಗಿ ಶೈಲೇಶ್ ಕುಮಾರ್ ಅವರನ್ನು ನಮ್ಮ ವೆಬ್ ಸೈಟ್ ಸಂಪರ್ಕಿಸಿದಾಗ ಅವರು ಹೆಳಿದ್ದು ಹೀಗೆ. ‘ನಗರದಲ್ಲಿ ಅನಿರೀಕ್ಷಿತ ಕರ್ಫ್ಯೂ ವಿಧಿಸಿದ್ದರಿಂದ ತೊಂದರೆಗೊಳಗಾದವರಿಗೆ ನಮ್ಮ ಕೈಲಾದ ಉಚಿತ ಸಹಾಯವನ್ನು ಮಾಡಲು ನಾವು ನಿರ್ಧರಿಸಿದ್ದೇವೆ. ನಾನು ಬೈಕಿನಲ್ಲಿ ಹಾಗೂ ಗೌತಮ್ ಅವರು ಕಾರಿನಲ್ಲಿ ಸಂಕಷ್ಟಕ್ಕೊಳಗಾದವರನ್ನು ಅವರ ಮನೆಗಳಿಗೆ (ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ) ಬಿಟ್ಟುಬರುವ ಕಾರ್ಯವನ್ನು ಮಾಡುತ್ತಿದ್ದಾರೆ.’

ಮೊದಲಿಗೆ ಜೆಪ್ಪು ಪ್ರದೇಶ ವ್ಯಾಪ್ತಿಗೆ ನಮ್ಮ ಸೇವೆಯನ್ನು ನೀಡುವ ಉದ್ದೇಶವನ್ನು ಹೊಂದಿದ್ದೆವು ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಾವು ಈ ಕುರಿತಾಗಿ ಹಾಕುತ್ತಿದ್ದಂತೆಯೇ ನಮಗೆ ಹಲವಾರು ಕರೆಗಳು ಬರಲಾರಂಭಿಸಿವೆ. ಸಂಕಷ್ಟಕ್ಕೆ ಒಳಗಾದವರನ್ನು ಅವರ ಮನೆಗಳಿಗೆ ಸುರಕ್ಷಿತವಾಗಿ ತಲುಪಿಸುವ ಕಾರ್ಯವನ್ನು ನಾವು ಮುಂದುವರಿಸುತ್ತಿದ್ದೇವೆ ಎಂದು ಶೈಲೇಶ್ ಅವರು ಹೇಳಿದ್ದಾರೆ.

ಇವರಿಗೆ ನೈತಿಕ ಬಲ ತುಂಬಲು ಬಯಸುವವರು ಮತ್ತು ತಮ್ಮ ಮನೆಗಳಿಗೆ ತೆರಳಲಾಗದೇ ಸಂಕಷ್ಟಕ್ಕೆ ಒಳಗಾಗಿರುವವರು ಗೌತಮ್ ಬೋಳಾರ್ (93418 21331), ಮತ್ತು ಶೈಲೇಶ್ ಕುಮಾರ್ (99023 37423) ಅವರನ್ನು ಸಂರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.