ಮತಪ್ರಚಾರ ಮರೆತು ಕನ್ನಡ ಸೇವೆ ಮಾಡಿದ್ದ ಕಿಟ್ಟೆಲ್‌

ಮಂಗಳೂರಿನಲ್ಲಿ ಕಿಟ್ಟೆಲ್‌ ಪ್ರತಿಮೆ ಅನಾವರಣ

Team Udayavani, Nov 13, 2022, 6:20 AM IST

ಮತಪ್ರಚಾರ ಮರೆತು ಕನ್ನಡ ಸೇವೆ ಮಾಡಿದ್ದ ಕಿಟ್ಟೆಲ್‌

ಮಂಗಳೂರು: ಜರ್ಮನಿಯಿಂದ ಬಂದು ರಾಜ್ಯದಲ್ಲಿ ನೆಲೆಯೂರಿ ಕನ್ನಡ ಭಾಷೆ, ವ್ಯಾಕರಣಕ್ಕೆ ಅಪೂರ್ವ ಕೊಡುಗೆಯಿತ್ತ ರೆ| ಡಾ| ಫರ್ಡಿನಾಂಡ್‌ ಕಿಟ್ಟೆಲ್‌ ಅವರು ಒಂದು ಹಂತದಲ್ಲಿ ಬಾಸೆಲ್‌ ಮಿಷನ್‌ ಸುಪೀರಿಯರ್‌ಗಳಿಂದ ತಾವು ಕ್ರೈಸ್ತ ಮತಪ್ರಚಾರದ ಕೆಲಸ ವನ್ನು ಮಾಡುತ್ತಿಲ್ಲ, ಕೇವಲ ಕನ್ನಡ ಪರಿ ಚಾರಿಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೂ ಒಳಗಾಗಿದ್ದರು. ಆದರೆ ಅವೆಲ್ಲವನ್ನೂ ಅವಗಣಿಸಿ ಕನ್ನಡದ ಕೆಲಸ ಮುಂದುವರಿಸಿದ ಮಹಾನುಭಾವ ರಾಗಿದ್ದರು ಎಂದು ಹಿರಿಯ ವಿದ್ವಾಂಸ ಪ್ರೊ| ಡಾ| ಬಿ.ಎ. ವಿವೇಕ ರೈ ಹೇಳಿದರು.

ಬಲ್ಮಠದಲ್ಲಿರುವ ಕರ್ನಾಟಕ ಥಿಯೋ ಲಾಜಿಕಲ್‌ ಕಾಲೇಜಿನ (ಕೆಟಿಸಿ) 175 ವರ್ಷಾಚರಣೆ ಅಂಗವಾಗಿ ಕಾಲೇಜಿನ ಆವರಣದಲ್ಲಿ ಶನಿವಾರ ಆಯೋಜಿ ಸಿದ್ದ ಡಾ| ಕಿಟ್ಟೆಲ್‌ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಿಟ್ಟೆಲ್‌ ಕನ್ನಡ ಪ್ರೇಮ
ಕಿಟ್ಟೆಲ್‌ 1853ರಲ್ಲಿ ಮುಂಬಯಿಗೆ, ಬಳಿಕ ಧಾರವಾಡಕ್ಕೆ ಬಂದರು. ಪ್ರಾರಂಭ ದಲ್ಲೇ ಕನ್ನಡವನ್ನು ಕಲಿತು ಬಳಿಕ ಕನ್ನಡ ಕೃತಿ ರಚನೆ, ಭಾಷಾಂತರ, ವ್ಯಾಕರಣ, ಛಂದಸ್ಸುಗಳ ಸಮಗ್ರ ಮಾಹಿತಿ ಇರುವ ಪಠ್ಯಪುಸ್ತಕ ರಚನೆಯಂತಹ ಕೆಲಸಗಳನ್ನು ಮಾಡಿದ್ದರು. ಅವರ ಕನ್ನಡ ಸೇವೆ ಎಷ್ಟಿತ್ತು ಎಂದರೆ ಅವರ ಮಿಷನ್‌ ಸುಪೀರಿ ಯರ್‌ಗಳೇ ನೀನು ಭಾರತದಲ್ಲಿ ಕ್ರೈಸ್ತ ಮತಪ್ರಚಾರ ಮಾಡದೆ ಕನ್ನಡದ ಕೆಲಸ ಮಾಡುತ್ತಿರುವೆ, ಹೀಗಾದರೆ ಮಿಷನ್‌ನಿಂದ ಕೈಬಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ ಅದಕ್ಕೆ ಉತ್ತರಿಸಿದ್ದ ಕಿಟ್ಟೆಲ್‌ ಮಿಷನ್‌ನಿಂದ ಕೈಬಿಟ್ಟರೆ ತನ್ನದೇ ಮಿಷನ್‌ ಸ್ಥಾಪಿಸಿ ಕೆಲಸ ಮುಂದುವರಿಸುವುದಾಗಿ ಹೇಳಿರುವುದು ಅವರ ಪತ್ರಗಳಲ್ಲಿ ಉಲ್ಲೇಖವಾಗಿದೆ ಎಂದು ಪ್ರೊ| ರೈ ವಿವರಿಸಿದರು.

1894ರಲ್ಲಿ ಅವರು ರಚಿಸಿದ ಶಬ್ದಕೋಶ ದಲ್ಲಿ 75 ಸಾವಿರ ಕನ್ನಡ ಪದಗಳಿವೆ. ಮಂಗಳೂರಿನಲ್ಲಿದ್ದು ಕನ್ನಡ ಕಟ್ಟುವ ಕೆಲಸ ಮಾಡಿರುವ ಕಿಟ್ಟೆಲ್‌ ಅವರ ನೆನಪನ್ನು ಚಿರಸ್ಥಾಯಿಯಾಗಿಸಲು ಈ ಪರಿಸರದ ಯಾವುದಾದರೊಂದು ರಸ್ತೆಗೆ ಅವರ ಹೆಸರನ್ನಿಡಬೇಕು, ಜರ್ಮನಿಯಲ್ಲಿರುವ ಕಿಟ್ಟೆಲ್‌ರ ಹಸ್ತಪ್ರತಿಗಳನ್ನು ಅಧ್ಯಯನ ಮಾಡಿ, ಅವರ ಸಮಗ್ರ ಸಾಹಿತ್ಯ ಸಂಪಾದನೆಗೆ ಮುಂದಾಗ ಬೇಕು ಅಲ್ಲದೆ ಕನ್ನಡ ಇಂಗ್ಲಿಷ್‌ ಶಬ್ದಕೋಶ ರಚಿಸಬೇಕು ಎಂದು ವಿನಂತಿ ಮಾಡಿದರು.

ಜರ್ಮನ್‌ ಸರಕಾರದ ಕೌನ್ಸುಲ್‌ ಜನರಲ್‌ ಫ್ರೆಡರಿಕ್‌ ಬಿರ್ಗೆಲಿನ್‌ ಮಾತನಾಡಿ, ಡಾ| ಕಿಟ್ಟೆಲ್‌ ಅವರು ನಮ್ಮೆರಡು ದೇಶಗಳ ಹಾಗೂ ಸಂಸ್ಕೃತಿಗಳ ನಡುವೆ ಇದ್ದ ಸೇತುವೆಯಂತೆ. ಮಿಷನರಿಯಾಗಿದ್ದುಕೊಂಡು ಕನ್ನಡದ ಕುರಿತು ವಿಸ್ತಾರವಾದ ಸೇವೆ ಮಾಡಿದ ಕಿಟ್ಟೆಲ್‌ ಬಗ್ಗೆ ಇಲ್ಲಿನ ಜನರಿಗೆ ಇರುವ ಪ್ರೀತಿ ನೋಡಿ ವಿಸ್ಮಿತನಾಗಿದ್ದೇನೆ ಎಂದರು.

ಕೆಟಿಸಿ ನಿವೃತ್ತ ಪ್ರಾಂಶುಪಾಲ ಡಾ| ಸಿ.ಎಲ್‌. ಫುರ್ಟಾಡೊ, ಕನ್ನಡ ವಿದ್ವಾಂಸ ಡಾ| ಎ.ವಿ. ನಾವಡ, ಬೆಂಗಳೂರಿನ ಯುನೈಟೆಡ್‌ ಥಿಯೊಲಾಜಿಕಲ್‌ ಕಾಲೇಜಿನ ಡಾ| ಗುಡ್ರುನ್‌ ಲೊÂವ°ರ್‌, ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಶ್ರೀನಾಥ್‌, ಮನಪಾ ವಿಪಕ್ಷ ನಾಯಕ ನವೀನ್‌ ಡಿ’ಸೋಜಾ ಉಪಸ್ಥಿತರಿದ್ದರು. ಕೆಟಿಸಿ ಪ್ರಾಂಶುಪಾಲ ಡಾ| ಎಚ್‌.ಎಂ. ವಾಟ್ಸನ್‌ ಅಧ್ಯಕ್ಷತೆ ವಹಿಸಿದ್ದರು. ಡಾ| ಸಂದೀಪ್‌ ಸ್ವಾಗತಿಸಿದರು.

ಕಿಟ್ಟೆಲ್‌ ಮರಿಮಕ್ಕಳ ಹರ್ಷ
ಕಿಟ್ಟೆಲ್‌ ಅವರ ಮರಿಮಗಳು ಅಲ್ಮುಥ್‌ ಬಾರ್ಬರಾ ಎಲೆನೊರೆ ಮೈಯರ್‌ (ಕಿಟ್ಟೆಲ್‌) ಮಾತನಾಡಿ, ನನ್ನ ಮುತ್ತಜ್ಜನ ಬಗ್ಗೆ ಅಜ್ಜ ಹೇಳಿದ್ದು ಕೇಳಿದ್ದೇನೆ. ಇಲ್ಲಿನ ಜನರಿಗೆ ಅವರ ಬಗ್ಗೆ ಇದ್ದ ಮಮತೆ ನೋಡಿ ಖುಷಿ ಎನಿಸಿದೆ. ಧಾರವಾಡ ಹಾಗೂ ಮಂಗಳೂರಿಗೆ ಭೇಟಿ ನೀಡಿ ತೃಪ್ತಳಾಗಿದ್ದೇನೆ ಎಂದು ತಿಳಿಸಿದರು.

ಮರಿಮರಿಮಗ ವೈ. ಪ್ಯಾಟ್ರಿಕ್‌ ಮೈಯರ್‌ ಮಾತನಾಡಿ, ಮುತ್ತಜ್ಜನ ತಂದೆಯಾದ ಕಿಟ್ಟೆಲ್‌ ಅವರು ಬೆಸೆದಿರುವ ಎರಡು ದೇಶಗಳ ಬಾಂಧವ್ಯದ ಬೆಸುಗೆಯನ್ನು ಇನ್ನಷ್ಟು ಬೆಚ್ಚಗಾಗಿಸುವ ಇರಾದೆ ಎಂದು ಹೇಳಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.