Mangaluru ಈಜುಕೊಳದಲ್ಲಿ ಮುಳುಗಿ ಸಾವು


Team Udayavani, Dec 12, 2023, 9:52 PM IST

maMangaluru ಈಜುಕೊಳದಲ್ಲಿ ಮುಳುಗಿ ಸಾವು

ಮಂಗಳೂರು: ನಗರದ ಮಂಗಳಾ ಈಜುಕೊಳದಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಹರ್ಯಾಣ ಮೂಲದ ಅಭಿಷೇಕ್‌ (30) ಮೃತಪಟ್ಟವರು. ಈಜುಕೊಳದಲ್ಲಿ ಸಂಜೆ 4.45ರಿಂದ 5.30ರ ವರೆಗೆ ಸಾರ್ವಜನಿಕರಿಗೆ ಈಜಲು ಪ್ರವೇಶಾವಕಾಶವಿದ್ದು ಅಭಿಷೇಕ್‌ 4.30ರ ವೇಳೆಗೆ ಟಿಕೆಟ್‌ ಪಡೆದುಕೊಂಡು ನೀರಿಗೆ ಇಳಿದಿದ್ದಾರೆ. ಸುಮಾರು 15 ನಿಮಿಷದ ಬಳಿಕ ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಸುಮಾರು 30 ಮಂದಿ ಈಜಾಡುತ್ತಿದ್ದರು. ಆದರೆ ಅವರ ಗಮನಕ್ಕೆ ಬಂದಿರಲಿಲ್ಲ. ಹುಡುಗನೋರ್ವ ಗಮನಿಸಿ ಲೈಫ್ಗಾರ್ಡ್‌ಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಬದುಕಿಸುವ ಯತ್ನ ವಿಫ‌ಲ
ಈಜುಕೊಳದಲ್ಲಿ ಕಾರ್ಯನಿರತರಾಗಿದ್ದ ಲೈಫ್ಗಾರ್ಡ್‌ಗಳಾದ ರಾಜೇಂದ್ರ ಮತ್ತು ಪುಂಡಲೀಕ ಅವರು ಕಾರ್ಯಾಚರಣೆ ನಡೆಸಿದರೂ ಬದುಕಿಸಲು ಸಾಧ್ಯವಾಗಲಿಲ್ಲ. ಈಜಾಡಲು ಬಂದಿದ್ದ ಡಾ| ನರೇಂದ್ರ ನಾಯಕ್‌ ಮತ್ತು ಲೈಫ್‌ಗಾರ್ಡ್‌ ರಾಜೇಂದ್ರ ಅವರು ಅಭಿಷೇಕ್‌ ಅವರಿಗೆ ಕೃತಕ ಉಸಿರಾಟ ನೀಡಿದರೂ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ. ಅಭಿಷೇಕ್‌ ಅವರು ಈಜುಕೊಳಕ್ಕೆ ಯುವಕ ಬಂದಿರುವುದು, ಈಜುಕೊಳಕ್ಕೆ ಇಳಿದು ಈಜಾಡುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೃದಯಾಘಾತ?
ಅಭಿಷೇಕ್‌ ಅವರಿಗೆ ಪ್ರಥಮ ಚಿಕಿತ್ಸೆ ನೀಡುತ್ತಿದ್ದಾಗ ಆಹಾರ ಹಾಗೂ ರಕ್ತ ವಾಂತಿ ಮಾಡಿರುವುದಾಗಿ ಈಜುಕೊಳದ ಸಿಬಂದಿ ತಿಳಿಸಿದ್ದಾರೆ. ಏಕಾಏಕಿ ನೀರಿನಲ್ಲಿ ಮುಳುಗಿರುವ ಹಿನ್ನೆಲೆಯಲ್ಲಿ ಹೃದಯಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮೂರನೇ ಸಾವು
ಮಂಗಳಾ ಈಜುಕೊಳದಲ್ಲಿ 2013ರ ಅ. 25ರಂದು ಬೋಳೂರಿನ ವಿದ್ಯಾರ್ಥಿ ಸೋಹನ್‌ (13) ಮೃತಪಟ್ಟಿದ್ದ. 2019 ಮಾ. 24ರಂದು ಜೋಡುಕಟ್ಟೆ ನಿವಾಸಿ ಯಜ್ಞೇಶ್ (19) ಮೃತಪಟ್ಟಿದ್ದರು.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.