Mangaluru ವಯೋವೃದ್ಧ ಸಹೋದರಿಯರು ಆತ್ಮಹತ್ಯೆ
Team Udayavani, Oct 3, 2023, 11:36 PM IST
ಮಂಗಳೂರು: ವಯೋವೃದ್ಧೆಯರಾದ ಅಕ್ಕ ಮತ್ತು ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ಸಂಭವಿಸಿದೆ.
ಜಗನ್ನಾಥ್ ಭಂಡಾರಿ ಅವರ ಪತ್ನಿ ಲತಾ ಭಂಡಾರಿ (70) ಮತ್ತು ಆಕೆಯ ಅಕ್ಕ ಸುಂದರಿ ಶೆಟ್ಟಿ (80) ಮೃತಪಟ್ಟವರು. ಮನೆಯಲ್ಲಿ ಜಗನ್ನಾಥ್ ಭಂಡಾರಿ, ಲತಾ ಭಂಡಾರಿ ಮತ್ತು ಸುಂದರಿ ಶೆಟ್ಟಿ ವಾಸವಾಗಿದ್ದರು. 78 ವರ್ಷ ವಯಸ್ಸಿನ ಜಗನ್ನಾಥ್ ಭಂಡಾರಿ ಅವರು ಎಂದಿನಂತೆ ಬಾರ್ವೊಂದಕ್ಕೆ ಕೆಲಸಕ್ಕೆಂದು ಹೋಗಿದ್ದರು.
ಸಂಜೆ 4.30ಕ್ಕೆ ವಾಪಸ್ ಮನೆಗೆ ಬಂದು ನೋಡಿದಾಗ ಬಾಗಿಲು ಮುಚ್ಚಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಕೂಡ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿದ್ದರು. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!