Mangaluru: ಉದ್ಯಮಿಯ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ; 7 ಮಂದಿ ಅರೆಸ್ಟ್
Team Udayavani, Jun 28, 2023, 7:47 PM IST
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಪರಿಸರದಲ್ಲಿ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣವನ್ನು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕೃತ್ಯದಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಸುರೇಂದ್ರ (29) ಮುರಳಿ ಕೃಷ್ಣ(26)ಕಿಶೋರ್ (32), ಸುಶಾಂತ್(23),ಲಿಖಿತ್(23) ತರುಣ್(20) ಮತ್ತು ಅಕ್ಷತಾ(24) ಎನ್ನುವವರಾಗಿದ್ದಾರೆ.
ಆರೋಪಿಗಳ ಪೈಕಿ ಸುರೇಂದ್ರ ಅಲಿಯಾಸ್ ಪ್ರೀತಂ(ಪ್ರೀತು)ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಕಿಶೋರ್ ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸುಶಾಂತ್ ಎಂಬಾತನ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.