Mangaluruಯುವತಿಯ ಕೊಲೆ ಯತ್ನ ಪ್ರಕರಣ: ಅಪರಾಧಿ ಸುಶಾಂತ್‌ಗೆ 18 ವರ್ಷ 1 ತಿಂಗಳ ಸಜೆ


Team Udayavani, Jan 13, 2024, 12:53 AM IST

Mangaluruಯುವತಿಯ ಕೊಲೆ ಯತ್ನ ಪ್ರಕರಣ: ಅಪರಾಧಿ ಸುಶಾಂತ್‌ಗೆ 18 ವರ್ಷ 1 ತಿಂಗಳ ಸಜೆ

ಮಂಗಳೂರು: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ, ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಂಗಳೂರಿನ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಯುವಕ ಸುಶಾಂತ್‌ ಯಾನೆ ಶಾನ್‌ (31)ಗೆ ಒಟ್ಟು 18 ವರ್ಷ 1 ತಿಂಗಳು ಸಜೆ ವಿಧಿಸಿ ಆದೇಶ ನೀಡಿದೆ.

ಐಪಿಸಿ ಸೆಕ್ಷನ್‌ 341 ಶಿಕ್ಷಾರ್ಹ ಕಲಂಗೆ 1 ತಿಂಗಳು ಸಜೆ. 326 ಶಿಕ್ಷಾರ್ಹ ಕಲಂಗೆ 7 ವರ್ಷ ಕಠಿನ ಸಜೆ, 1 ಲಕ್ಷ ರೂ. ದಂಡ. ದಂಡ ಪಾವತಿಗೆ ವಿಫಲವಾದರೆ 1 ವರ್ಷ ಕಠಿನ ಕಜೆ. 307ರ ಶಿಕ್ಷಾರ್ಹ ಕಲಂಗೆ 10 ವರ್ಷದ ಕಠಿನ ಸಜೆ ಮತ್ತು 1 ಲಕ್ಷ ರೂ.ದಂಡ. ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಕಠಿನ ಸಜೆ. 354ರ ಶಿಕ್ಷಾರ್ಹ ಕಲಂಗೆ 1 ವರ್ಷದ ಕಠಿನ ಸಜೆ ಮತ್ತು 10 ಸಾವಿರ ರೂ.ದಂಡ ಪಾವತಿ. ದಂಡ ಪಾವತಿಸಲು ತಪ್ಪಿದರೆ 2 ತಿಂಗಳ ಕಠಿನ ಸಜೆ. 309 ಶಿಕ್ಷಾರ್ಹ ಕಲಂಗೆ 1 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಎಲ್ಲ ಶಿಕ್ಷೆಗಳನ್ನು ಒಂದರ ಅನಂತರ ಒಂದರಂತೆ ಪ್ರತ್ಯೇಕವಾಗಿ ಅನುಭವಿಸಬೇಕು ಎಂದು ನ್ಯಾಯಧೀಶರಾದ ಪ್ರೀತಿ ಕೆ.ಪಿ.ಅವರು ಆದೇಶ ನೀಡಿದ್ದಾರೆ. ದಂಡದ ರೂಪದಲ್ಲಿ ವಸೂಲಾಗುವ ಹಣದಲ್ಲಿ 2 ಲಕ್ಷ ರೂ. ವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣದ ವಿವರ
2019ರ ಜೂ.28ರಂದು ಸಂಜೆ 4.30ಕ್ಕೆ ಕೋಟೆಕಾರು ಗ್ರಾಮದ ದೇರಳಕಟ್ಟೆ ಬಗಂಬಿಲ ರಸ್ತೆಯ ಶಾಂತಿಧಾಮದ ಬಳಿ ಸಂತ್ರಸ್ತ ಯುವತಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಸುಶಾಂತ್‌ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಬಳಿಕ ಆಕೆಯನ್ನು ತಡೆದು ಅವಳ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿ, ಮಾನಭಂಗ ಮಾಡಿ, ತನ್ನಲ್ಲಿದ್ದ ಚೂರಿಯಿಂದ ಆಕೆಯ ಎದೆಗೆ, ಹೊಟ್ಟೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರವಾಗಿ ತಿವಿದು ಗಾಯಗೊಳಿಸಿ ಕೊಲೆ ಮಾಡಲು ಯತ್ನಿಸಿದ್ದ. ಆಕೆ ಪ್ರಜ್ಞಾ ಹೀನಳಾಗಿ ಬಿದ್ದ ಬಳಿಕ ಅದೇ ಚೂರಿಯಿಂದ ತನ್ನ ಕುತ್ತಿಗೆಗೆ ಹಾಗೂ ಕೈಯ ನಾಡಿಗೆ ಇರಿದು ಆತ್ಮಹತ್ಯೆಗೆ ಪ್ರಯತ್ನಪಟ್ಟು ಸ್ಥಳದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ. ಸ್ಥಳೀಯರು, ಪಕ್ಕದ ಖಾಸಗಿ ಆಸ್ಪತ್ರೆ ಸಿಬಂದಿಯವರು ಧಾವಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇಬ್ಬರೂ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದರು.

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ
ಸುಶಾಂತ್‌ ನೃತ್ಯ ತರಬೇತುದಾರನಾಗಿದ್ದು, ಯುವತಿ ಕಲಿಯುತ್ತಿದ್ದ ಕಾಲೇಜಿನಲ್ಲಿ ನೃತ್ಯ ಕಲಿಸುತ್ತಿದ್ದ. ಆಕೆಯೊಂದಿಗೆ ಗೆಳೆತನದಿಂದ ಇದ್ದು, ಪ್ರೀತಿಸುವಂತೆ, ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಬಗ್ಗೆ ಈ ಮೊದಲೇ ಆಕೆ ಕಾರ್ಕಳದ ಗ್ರಾಮಾಂತರ ಠಾಣೆಯಲ್ಲಿ ಆತನ ವಿರುದ್ಧ ದೂರು ದಾಖಲಿಸಿದ್ದಳು. ಆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆತ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಈ ದ್ವೇಷದಿಂದ ಆತ ಕೃತ್ಯ ಎಸಗಿದ್ದ.

ಸಿಸಿ ಕೆಮರಾದಲ್ಲಿ ದೃಶ್ಯ ಸೆರೆ
ಉಳ್ಳಾಲ ಠಾಣೆಯ ಅಂದಿನ ಉಪನಿರೀಕ್ಷಕರಾಗಿದ್ದ ಗುರಪ್ಪ ಕಾಂತಿ ಅವರು ಸಮಗ್ರ ತನಿಖೆ ನಡೆಸಿ, 34 ಸಾಕ್ಷಿದಾರರನ್ನು ವಿಚಾರಣೆ ಮಾಡಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ದಾಖಲಿಸಿದ್ದರು. ಘಟನೆಯ ಸಂಪೂರ್ಣ ಚಿತ್ರಣ ಸಮೀಪದ ಕೆಎಸ್‌ ಹೆಗ್ಡೆ ಆಸ್ಪತ್ರೆಯ ಹಿಂಭಾಗದ 2 ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು. ತನಿಖಾಧಿಕಾರಿಯವರು ಸಿಸಿ ಕೆಮರಾ ದೃಶ್ಯಾವಳಿಯನ್ನು ಸಂಗ್ರಹಿಸಿ ಪ್ರಮುಖ ಸಾಕ್ಷ್ಯಧಾರವನ್ನಾಗಿ ದೋಷಾರೋಪಣ ಪಟ್ಟಿಯಲ್ಲಿ ಸೇರಿಸಿದ್ದರು.

ಒಡನಾಟದಲ್ಲಿದ್ದ ಬಗ್ಗೆ ಸಾಕ್ಷಿ ನುಡಿದಿದ್ದ
2021ರ ಫೆಬ್ರವರಿ 10ರಂದು ವಿಚಾರಣೆ ಪ್ರಾರಂಭಗೊಂಡು ಅಭಿಯೋಜನೆ ಪರ 21 ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿತ್ತು. ಆರೋಪಿಯೂ ತನ್ನ ಪರವಾಗಿ ತನ್ನ ತಂಗಿಯನ್ನು ನ್ಯಾಯಾಲಯದ ಮುಂದೆ ಸಾಕ್ಷ್ಯವಾಗಿ ಹಾಜರುಪಡಿಸಿದ್ದ. ತಾನು ಹಾಗೂ ಸಂತ್ರಸ್ತೆ ಪ್ರೀತಿಸುತ್ತಿದ್ದೆವು. ಸಂತ್ರಸ್ತೆ ತನ್ನ ಹಾಗೂ ಮನೆಯವರ ಜತೆ ಒಡನಾಟದಲ್ಲಿ ಇದ್ದಳು ಎಂದು ಸಾಕ್ಷಿ ನುಡಿದಿದ್ದು, ಅದಕ್ಕೆ ಸಂಬಂಧಿಸಿದ ಛಾಯಾಚಿತ್ರಗಳನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಅಭಿಯೋಜನೆಯ ಸಾಕ್ಷ್ಯಧಾರಗಳನ್ನು ಪರಿಗಣಿಸಿ, ಆತನ ಮೇಲೆ ಹೊರಿಸಲಾದ ಎಲ್ಲ ಶಿಕ್ಷಾರ್ಹ ಕಲಂಗೆ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್‌ ನಾಯಕ್‌ ಅವರು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.