ಜ. 21, 25: ಉದ್ಯೋಗ ಮೇಳ, ಉಜ್ವಲ ಸಮಾವೇಶ


Team Udayavani, Jan 16, 2019, 4:37 AM IST

nalin.jpg

ಮಂಗಳೂರು: ಕೇಂದ್ರ ಕೌಶಲ ಅಭಿವೃದ್ಧಿ ಸಚಿವಾಲಯ ನಗರದಲ್ಲಿ ಜ. 21ರಂದು ಉದ್ಯೋಗ ಮೇಳ ಹಾಗೂ ಜ. 25 ರಂದು ಬಿ.ಸಿ ರೋಡಿನಲ್ಲಿ ಉಜ್ವಲ ಯೋಜನೆಯ 2 ನೇ ಹಂತದ ಫಲಾನುಭವಿಗಳ ಸಮಾವೇಶ ಏರ್ಪಡಿಸಿದೆ. 
ಕೆನರಾ ಕಾಲೇಜು ಮೈದಾನದಲ್ಲಿ ನಡೆಯುವ ಉದ್ಯೋಗ ಮೇಳವನ್ನು ಕೇಂದ್ರ ಕೌಶಲ ಅಭಿವೃದ್ಧಿ ಸಚಿವ
ಅನಂತ್‌ ಕುಮಾರ್‌ ಹೆಗಡೆ ಉದ್ಘಾಟಿಸುವರು. ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಉಜ್ವಲ ಯೋಜನೆಯ ಪ್ರಥಮ ಹಂತದಲ್ಲಿ 2011ರ ಜನಗಣತಿಯಲ್ಲಿ ಗುರುತಿಸಲ್ಪಟ್ಟ ಜಿಲ್ಲೆಯ 42 ಸಾವಿರ ಅರ್ಹ ಬಡಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ನೀಡಲಾಗಿತ್ತು. ಇದೀಗ ಉಜ್ವಲಾ- 2ರಡಿ ಉಳಿದ ಅರ್ಹರಿಗೆ ಜ. 25ರಂದು ಬಿ.ಸಿ.ರೋಡು ನಾರಾಯಣ ಗುರು ವೃತ್ತದ ಬಳಿ ನಡೆಯುವ ಸಮಾವೇಶದಲ್ಲಿ ವಿತರಿಸಲಾಗುವುದು. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತಿತರರು ಪಾಲ್ಗೊಳ್ಳುವರು ಎಂದರು. 

ಮೇಲ್ಸೇತುವೆ ಫೆಬ್ರವರಿಗೆ ಪೂರ್ಣ ಫೆಬ್ರವರಿ ಕೊನೆಯ ವಾರದಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ರಾ. ಹೆ.
ಸಚಿವ ನಿತಿನ್‌ ಗಡ್ಕರಿ  ಕುಂದಾಪುರ- ತಲಪಾಡಿ ಚತುಷಥ ರಸ್ತೆಯನ್ನು ಉದ್ಘಾಟಿಸುವರು. ಇದೇ ಸಂದರ್ಭ ಮೂಲ್ಕಿ-ಕಟೀಲು-ಕೈಕಂಬ ಬಿ.ಸಿ. ರೋಡ್‌ ಹಾಗೂ ಬಿ.ಸಿ.ರೋಡ್‌, ಮುಡಿಪು- ತೊಕ್ಕೊಟ್ಟು ರಸ್ತೆಗಳ ಉನ್ನತೀಕರಣ ಹಾಗೂ ಕುಲಶೇಖರ- ಕಾರ್ಕಳ ರಾ.ಹೆ. ವಿಸ್ತರಣೆ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುವರು. ಪಂಪ್‌ವೆಲ್‌ ಹಾಗೂ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಫೆಬ್ರವರಿಯೊಳಗೆ ಪೂರ್ಣಗೊಳಿಸುವಂತೆ ಸಚಿವರು ಗುತ್ತಿಗೆ ಸಂಸ್ಥೆಗೆ ತಾಕೀತು ಮಾಡಿದ್ದು ಅದೇ ಸಂದರ್ಭದಲ್ಲಿ ಉದ್ಘಾಟಿಸುವುದಾಗಿ ತಿಳಿಸಿದ್ದಾರೆ ಎಂದು ನಳಿನ್‌ ತಿಳಿಸಿದರು.

15 ದಿನದಲ್ಲಿ  ಆರಂಭ
ತಾಂತ್ರಿಕ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದ ಬಿ.ಸಿ.ರೋಡು -ಅಡ್ಡಹೊಳೆ ರಾ.ಹೆ. ಕಾಮಗಾರಿ 15 ದಿನಗಳೊಳಗೆ ಎಲ್‌ ಆ್ಯಂಡ್‌ ಟಿ ಕಂಪೆನಿ ಪುನರಾರಂಭಿಸಲಿದೆ. ಗುಂಡ್ಯದಲ್ಲಿ ಅರಣ್ಯ ವ್ಯಾಪ್ತಿಯ 21 ಹೆಕ್ಟೇರ್‌ ಪ್ರದೇಶದ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗುತ್ತಿದೆ.ಹೆಚ್ಚುವರಿಯಾಗಿ ಅವಶ್ಯವಿ ರುವ 41 ಹೆ. ಭೂಸ್ವಾಧೀನಕ್ಕೆ ಕೇಂದ್ರ ಹಣ ಬಿಡುಗಡೆ ಮಾಡಿದೆ. ಕಲ್ಲಡ್ಕದಲ್ಲಿ 6 ಕಿ.ಮೀ. ರಸ್ತೆಗೆ ಭೂಸ್ವಾಧೀನ ನಡೆಸಬೇಕಿದ್ದು ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ನಳಿನ್‌ ತಿಳಿಸಿದರು. 

ವಿಜಯ ಬ್ಯಾಂಕ್‌ ಹೆಸರು ಉಳಿಸಲು ಯತ್ನ
ಮಂಗಳೂರು: ವಿಲೀನ ಪ್ರಕ್ರಿಯೆಯಲ್ಲಿರುವ ವಿಜಯ ಬ್ಯಾಂಕಿನ ಹೆಸರು ಉಳಿಸಲು ಸರ್ವಪ್ರಯತ್ನ ನಡೆಸುವುದಾಗಿ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ. ಜಿಲ್ಲೆಯ ಹೆಮ್ಮೆಯ ವಿಜಯ ಬ್ಯಾಂಕ್‌ ದೇಶದ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ. ವಿಲೀನಗೊಳಿಸುವಾಗ ವಿಜಯ ಬ್ಯಾಂಕಿನ ಹೆಸರು ಉಳಿಸುವಂತೆ ನಾನು, ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಗೋಪಾಲ ಶೆಟ್ಟಿಯವರು ಕೇಂದ್ರ ಸಚಿವ ಅರುಣ್‌ ಜೇಟ್ಲಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಪೂರಕ ಸ್ಪಂದನೆ ಸಿಕ್ಕಿದೆ ಎಂದರು. 

ಕಾಂಗ್ರೆಸ್‌ನ ನಿರ್ಧಾರ
ಬ್ಯಾಂಕ್‌ಗಳ ವಿಲೀನ ಹಿಂದಿನ ಕಾಂಗ್ರೆಸ್‌ ನೇತೃತ್ವದ ಯುಪಿಎ-2 ಸರಕಾರದ ನಿರ್ಧಾರ. ಪ್ರಥಮ ಹಂತದಲ್ಲಿ ಸ್ಟೇಟ್‌ಬ್ಯಾಂಕ್‌ ಆಫ್‌ ಮೈಸೂರು ಸೇರಿದಂತೆ ಕೆಲವು ಬ್ಯಾಂಕ್‌ಗಳನ್ನು ಎಸ್‌ಬಿಐಯೊಂದಿಗೆ ವಿಲೀನಗೊಳಿಸಲಾಗಿತ್ತು. ವಿಜಯ ಬ್ಯಾಂಕನ್ನು ಬ್ಯಾಂಕ್‌ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆ ಬಂದಾಗ ರಾಜ್ಯದ ಯಾವುದೇ ಕಾಂಗ್ರೆಸ್‌ ಸಂಸದರು ವಿರೋಧಿಸಿರಲಿಲ್ಲ. ಪ್ರಸ್ತಾವನೆ ಲೋಕಸಭೆಗೆ ಅಂಗೀಕಾರಕ್ಕೆ ಬರುವ ಮೊದಲು ಹಣಕಾಸು ಸ್ಥಾಯೀ ಸಮಿತಿಗೆ ಬಂದಾಗಲೂ ಅದರ ಅಧ್ಯಕ್ಷರಾದ ಜಿಲ್ಲೆಯವರೇ ಆದ ಡಾ| ಎಂ. ವೀರಪ್ಪ ಮೊಲಿ ತಡೆಯಬಹುದಿತ್ತು.ಆದರೆ ಅನುಮೋದಿಸಿದರು. ಇದೀಗ ಕಾಂಗ್ರೆಸ್‌ನವರು ಸತ್ಯಾಂಶಗಳನ್ನು ಮರೆಮಾಚಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಬಿ.ಸಿ.ರೋಡ್‌-ಅಡ್ಡಹೊಳೆ ರಸ್ತೆ ಕಾಮಗಾರಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ನಾಟಕ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಸಲಾಗುತ್ತಿದೆ ಎಂದು ಟೀಕಿಸಿದ ಅವರು, ಕಾಮಗಾರಿಗೆ ರಾಜ್ಯ ಮಟ್ಟದಲ್ಲಿ ಎದುರಾದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಅವರದ್ದೇ ರಾಜ್ಯ ಸರಕಾರ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ವಿಮಾನ ನಿಲ್ದಾಣ ಖಾಸಗೀಕರಣದಲ್ಲಿ ನಮ್ಮ ಪಾತ್ರವಿಲ್ಲ
ದೇಶದ ಸುಮಾರು 14 ವಿಮಾನ ನಿಲ್ದಾಣಗಳ ಖಾಸಗೀಕರಣ ನಿರ್ಧಾರ ಕೂಡ ಯುಪಿಎ ಸರಕಾರದ್ದು. ಆಗಿನ ವಿಮಾನಯಾನ ಸಚಿವ ಪ್ರಫುಲ್‌ ಪಟೇಲ್‌ ಇದನ್ನು ರೂಪಿಸಿದ್ದರು. ಇದೀಗ ಕಾಂಗ್ರೆಸ್‌ ನಮ್ಮ ಮೇಲೆ ಆರೋಪ ಹೊರಿಸುತ್ತಿದೆ ಎಂದರು.

ಶುಭ ಸುದ್ದಿ ಬರಲಿದೆ
ರಾಜ್ಯದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರ ರಚಿಸಲಿ ದೆಯೇ ಎಂಬ ಪ್ರಶ್ನೆಗೆ ಸಂಕ್ರಾಂತಿ ಕಳೆದಿದೆ; ಶುಭ ಸುದ್ದಿ ಬರಲಿದೆ ಎಂದರು. ಹರಿಯಾಣದ ಹೊಟೇಲ್‌ನಲ್ಲಿ ಬಿಜೆಪಿ ಶಾಸಕರಿಗೆ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ  ತರಬೇತಿ ನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.