ಮಂಗಳೂರು: ಟ್ರಕ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಬಲಿ
Team Udayavani, Oct 26, 2022, 7:37 PM IST
ಮಂಗಳೂರು: ಕೊಟ್ಟಾರದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಟ್ರಕ್ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಆಕಾಶ ಭವನದ ಅಶೋಕ್ (45) ಎನ್ನುವವರು ಮೃತ ದುರ್ದೈವಿ. ಅವರು ವಾಹನ ಪಾರ್ಕಿಂಗ್ ಮಾಡಿ ಕೆಲಸಕ್ಕೆಂದು ಹೋಗುವ ವೇಳೆ ಟ್ರಕ್ ಢಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.