ಮಂಗಳೂರು-ಮೂಡುಬಿದಿರೆ “ಕುಡಿಯುವ ನೀರಿನ ಯೋಜನೆಗೆ” ಬೇಕು ವೇಗ


Team Udayavani, Jan 29, 2024, 3:17 PM IST

ಮಂಗಳೂರು-ಮೂಡುಬಿದಿರೆ “ಕುಡಿಯುವ ನೀರಿನ ಯೋಜನೆಗೆ” ಬೇಕು ವೇಗ

ಮಹಾನಗರ: ಮಳೆ ಕೊರತೆ ಕಾರಣದಿಂದ ದ.ಕ. ಜಿಲ್ಲೆಯ ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕು “ಬರಪೀಡಿತ’ ಎಂದು ಸರಕಾರ ಘೋಷಿಸಿದ್ದರೂ ಕುಡಿಯುವ ನೀರಿನ ಬಹುಮುಖ್ಯ ಯೋಜನೆಯಾದ “ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ ಮಾತ್ರ ಇಲ್ಲಿ ವೇಗ ಪಡೆಯುವಲ್ಲಿ ಹಿಂದೆ ಬಿದ್ದಿದೆ.

ಮತ್ತೊಂದೆಡೆ, ಜಲಜೀವನ್‌ ಮಿಷನ್‌ ಯೋಜನೆಯ ನೀರು ಸರಬರಾಜು ಯೋಜನೆಯೂ ಪೂರ್ಣ ಪ್ರಮಾಣದಲ್ಲಿ ಈ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಬಂದಿಲ್ಲ. ಮೂಡುಬಿದಿರೆ ಕುಡಿಯುವ ನೀರಿನ ಯೋಜನೆ ಮಂಗಳೂರು ಹಾಗೂ ಬಂಟ್ವಾಳ ತಾಲೂಕಿಗೆ ಸಂಬಂಧಿಸಿ ಮೂಡುಬಿದಿರೆ ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಒಳಗೊಂಡ ಮೂಡುಬಿದಿರೆ
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಒಟ್ಟು 21 ಗ್ರಾಮ ಪಂಚಾಯತ್‌ ಹಾಗೂ 39 ಗ್ರಾಮಗಳನ್ನು ಒಳಗೊಂಡಿದೆ.

583 ಜನ ವಸತಿ ಪ್ರದೇಶ ಹಾಗೂ 1,54,033 ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ. 183.16 ಕೋ.ರೂ ಅನುದಾನ ಮಂಜೂರಾಗಿದ್ದು, ಸದ್ಯ ಇಲಾಖೆಯ ಪ್ರಕಾರ ಶೇ.70ರಷ್ಟು ಕಾಮಗಾರಿ ಪ್ರಗತಿಯಲ್ಲಿದೆ. 2 ವರ್ಷದ ಹಿಂದೆ ಶುರುವಾದ ಈ ಯೋಜನೆ ಎಪ್ರಿಲ್‌ ವೇಳೆಗೆ ಪೂರ್ಣವಾಗಬೇಕಿದ್ದರೂ ಸದ್ಯಕ್ಕೆ ಪೂರ್ಣವಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಉಳಾಯಿಬೆಟ್ಟು-ಕುಡಿಯುವ ನೀರಿನ ಯೋಜನೆ ಮಂಗಳೂರು ಹಾಗೂ ಬಂಟ್ವಾಳ ತಾಲೂಕಿಗೆ ಸಂಬಂಧಿಸಿ ಬಂಟ್ವಾಳ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಒಳಗೊಂಡ ಉಳಾಯಿಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ 11
ಗ್ರಾ.ಪಂ. ಹಾಗೂ 15 ಗ್ರಾಮಗಳನ್ನು ಒಳಗೊಂಡಿದೆ. 132 ಜನವಸತಿ ಪ್ರದೇಶ ಹಾಗೂ 82,606 ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ. 91.42 ಕೋ.ರೂ ಅನುದಾನ ಮಂಜೂರಾಗಿದ್ದು, ಶೇ.60ರಷ್ಟು ಪ್ರಗತಿಯನ್ನು ಇದು ಕಂಡಿದೆ.ಇದೂ ಕೂಡ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ.

ಈ ಮಧ್ಯೆ ಮಂಗಳೂರಿಗೆ ಹೊಂದಿ ಕೊಂಡಿರುವ ಉಳ್ಳಾಲ, ಕೋಟೆಕಾರ್‌ನ 26 ಗ್ರಾಮಗಳ 1.60 ಲಕ್ಷ ಜನರಿಗೆ ನೀರಿನ ಸಂಪರ್ಕ ನೀಡುವ ಬಹು ಮಹತ್ವದ ಯೋಜನೆಗೆ ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. 245 ಕೋ.ರೂ. ಇದಕ್ಕೆ ಅನುದಾನ ಮೀಸಲಿಡಲಾಗಿದೆ. ಇದು ಪೂರ್ಣವಾಗಲು ಇನ್ನೆಷ್ಟು ಸಮಯ ಬೇಕಾಗಬಹುದು ಎಂಬ ಪ್ರಶ್ನೆ ಎದುರಾಗಿದೆ.

ಸದ್ಯಕ್ಕಿರುವುದು 2 ಯೋಜನೆ
ಮಂಗಳೂರು ಹಾಗೂ ಮೂಡುಬಿದಿರೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಈಗಾಗಲೇ ಅನುಷ್ಠಾನವಾಗಿದ್ದು, 583 ಜನವಸತಿ ಪ್ರದೇಶಗಳಿಗೆ ಮಳವೂರು ಡ್ಯಾಂನಿಂದ 13 ಎಂಎಲ್‌ಡಿ ನೀರು ಸರಬರಾಜಾಗುತ್ತಿದೆ. ಮತ್ತೊಂದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಡಿ 131 ಜನ ವಸತಿ ಪ್ರದೇಶಗಳಿಗೆ ತುಂಬೆ ವೆಂಟೆಡ್‌ ಡ್ಯಾಂನಿಂದ 6.34 ಎಂಎಲ್‌ಡಿ ನೀರು ಸರಬರಾಜಾಗುತ್ತಿದೆ.

ತುರ್ತಾಗಿ ಆಗಬೇಕಿತ್ತು!
ನಗರಕ್ಕೆ ಹೊಂದಿಕೊಂಡಿರುವ ನೇತ್ರಾವತಿ, ಫಲ್ಗುಣಿಯ ತೆಕ್ಕೆಯಲ್ಲಿರುವ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈಗಲೇ ಎದುರಾಗಿದೆ. ಅದರಲ್ಲಿಯೂ, ಈ ಬಾರಿ ಮಳೆ ಕೊರತೆ ಕಾರಣದಿಂದ ಮಂಗಳೂರು ಹಾಗೂ ಮೂಡುಬಿದಿರೆ
ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರಕಾರ ಪ್ರಕಟಿಸಿದೆ.

ಹೀಗಾಗಿ ನೀರಿನ ಹಾಹಾಕಾರ ಈ ಬಾರಿ ಎದುರಾಗುವ ಸಾಧ್ಯತೆ ಇದೆ. ಇಂತಹ ಕಾಲದಲ್ಲಿ ಕುಡಿಯುವ ನೀರಿನ ಯೋಜನೆಗಳು ಎಲ್ಲ ಕಾಮಗಾರಿಗಳಿಗಿಂತ ತುರ್ತಾಗಿ ನಡೆಯಬೇಕಿದೆ. ಅದು ಮೊದಲ ಆದ್ಯತೆಯಲ್ಲೇ ನಡೆಯಬೇಕಿದೆ. ಆದರೆ ಬಹುಗ್ರಾಮ
ಕುಡಿಯುವ ನೀರಿನ ಯೋಜನೆ ಮಾತ್ರ ಕುಂಟುತ್ತಾ ಸಾಗುತ್ತಿದೆ. ಅನುಷ್ಠಾನ ಹಂತದಲ್ಲಿ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕಾದದ್ದು, ಜನಪ್ರತಿನಿಧಿಗಳ, ಅಧಿಕಾರಿಗಳ ಜವಾಬ್ದಾರಿ ಎಂಬುದು ಸಾರ್ವಜನಿಕರ ಅಭಿಪ್ರಾಯ.

ತುರ್ತಾಗಿ ಪೂರ್ಣಗೊಳಿಸಲು ಸೂಚನೆ
ಮೂಡುಬಿದಿರೆ ಹಾಗೂ ಉಳಾಯಿಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಸಿವಿಲ್‌ ಕಾಮಗಾರಿ ಕೊಂಚ ಬಾಕಿ ಇದೆ. ಜತೆಗೆ ಪಂಪ್‌ ಸೆಟ್‌ಗಳ ಜೋಡಣೆ ಬಾಕಿ ಇದೆ. ಇದೆರಡನ್ನೂ ಆದ್ಯತೆಯ ನೆಲೆಯಲ್ಲಿ ತುರ್ತಾಗಿ ಪೂರ್ಣಗೊಳಿಸಿ
ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
*ಡಾ| ಆನಂದ್‌, ಸಿಇಒ, ದ.ಕ. ಜಿಲ್ಲಾ ಪಂಚಾಯತ್‌

ಶೀಘ್ರ ಪೂರ್ಣ
ಮೂಡುಬಿದಿರೆ ಹಾಗೂ ಉಳಾಯಿಬೆಟ್ಟು ಯೋಜನೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಎರಡೂ ಕೇಂದ್ರಗಳಿಗೆ ಪಂಪ್‌ಗಳನ್ನು ಜೋಡಿಸುವ ಮುಖ್ಯ ಕಾರ್ಯ ಚಾಲ್ತಿಯಲ್ಲಿದೆ. ಇದು ಪೂರ್ಣವಾದ ಬಳಿಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗುವುದು.
*ಎನ್‌.ಡಿ. ರಘುನಾಥ್‌,
ಕಾರ್ಯನಿರ್ವಾಹಕ ಎಂಜಿನಿಯರ್‌,
ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ

*ದಿನೇಶ್‌ ಇರಾ

ಟಾಪ್ ನ್ಯೂಸ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.