ವೈದ್ಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣ: ಹೈಕೋರ್ಟ್ ಮಧ್ಯಪ್ರವೇಶಿಸಲು, ಸಿಬಿಐಗೆ ವಹಿಸಲು ಆಗ್ರಹ
Team Udayavani, Jan 25, 2023, 6:30 AM IST
ಮಂಗಳೂರು: ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ವರದಿಯಾದ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಆದ್ದರಿಂದ ಹೈಕೋರ್ಟ್ ಮಧ್ಯ ಪ್ರವೇಶ ಮಾಡಬೇಕು ಇಲ್ಲವೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ, ನಿಕಟಪೂರ್ವ ಜಿಲ್ಲಾ ಸರಕಾರಿ ಅಭಿಯೋಜಕ ಮನೋರಾಜ್ ರಾಜೀವ ಮತ್ತು ವಿಧಿ ವಿಜ್ಞಾನ ತಜ್ಞ ಡಾ| ಮಹಾಬಲೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಮನೋರಾಜ್ ಮಾತನಾಡಿ, ಮಾದಕ ವಸ್ತುಗಳನ್ನು ಮಾರಾಟ ಮಾಡುವವರನ್ನು ಬಂಧಿಸಿರು ವುದರಲ್ಲಿ ಯಾವುದೇ ಆಕ್ಷೇಪ ಇಲ್ಲ. ಆದರೆ ಸೇವಿಸಿದ್ದವರನ್ನು ಬಂಧಿಸು ವಾಗ ಕೆಲವೊಂದು ಕಾನೂನಾತ್ಮಕ ಅಂಶಗಳನ್ನು ಪಾಲಿಸಬೇಕಾಗುತ್ತದೆ. ಎನ್ಡಿಪಿಎಸ್ ಕಾಯ್ದೆ 64(ಎ) ಪ್ರಕಾರ ಅವರನ್ನು ಜೈಲಿಗೆ ಕಳುಹಿಸುವಂತಿಲ್ಲ. ಬದಲಾಗಿ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಿ ಕೌನ್ಸೆಲಿಂಗ್ ನಡೆಸಬೇಕು. ಆದರೆ ಈ ಪ್ರಕರಣದಲ್ಲಿ ಆರೋಪಿ ಗಳಾಗಿರುವ ವೈದ್ಯರು, ವೈದ್ಯ ವಿದ್ಯಾರ್ಥಿ ಗಳ ಫೋಟೋ, ಹುದ್ದೆ, ವಿಳಾಸ ಎಲ್ಲವನ್ನೂ ಬಹಿರಂಗ ಪಡಿಸ ಲಾಗಿದೆ. ವಿದ್ಯಾರ್ಥಿಗಳನ್ನು ಗುರಿ ಪಡಿಸುವುದರೊಂದಿಗೆ ಕುಟುಂಬದ ಗೌರವಕ್ಕೂ ಧಕ್ಕೆ ತರಲಾಗಿದೆ ಎಂದು ಆರೋಪಿಸಿದರು.
ನಷ್ಟ ಭರಿಸುವವರಾರು?
ಶೈಕ್ಷಣಿಕ ಕೇಂದ್ರವಾಗಿ ಹೆಸರಾಗಿರುವ ಮಂಗಳೂರಿಗೆ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೊಡೆತ ಬಿದ್ದಿದೆ. ಶಿಕ್ಷಣ ಸಂಸ್ಥೆಗಳ ಹೆಸರು ಹಾಳಾಗುತ್ತಿದೆ. ಪೊಲೀಸ್ ಇಲಾಖೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅವರಿಗೆ ಮಾರ್ಗದರ್ಶನ ನೀಡಬೇಕಾದ ಹಿರಿಯ ಪೊಲೀಸ್ ಅಧಿಕಾರಿಗಳು, ಗೃಹ ಇಲಾಖೆ, ಸರಕಾರ ಎಲ್ಲರೂ ಇದಕ್ಕೆ ಜವಾಬ್ದಾರರು. ಒಂದು ವೇಳೆ ನ್ಯಾಯಾಲಯದಲ್ಲಿ ಸಂತ್ರಸ್ತರದ್ದು ತಪ್ಪಿಲ್ಲ ಎಂದು ಸಾಬೀತಾದರೆ, ಇದ ರಿಂದಾದ ನಷ್ಟವನ್ನು ಪೊಲೀಸ್ ಇಲಾಖೆ ಅಥವಾ ಸರಕಾರ ಭರಿಸು ತ್ತದೆಯೇ. . ಆದ್ದರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವ ನಿಟ್ಟಿ ನಲ್ಲಿಯೂ ಚಿಂತನೆ ನಡೆಸಿದ್ದೇವೆ ಎಂದರು.
ಜೈಲಿಗಟ್ಟುವುದರಿಂದ ಪರಿವರ್ತನೆ ಅಸಾಧ್ಯ
ವಿಧಿ ವಿಜ್ಞಾನ ತಜ್ಞ ಡಾ| ಮಹಾ ಬಲೇಶ್ ಶೆಟ್ಟಿ ಮಾತನಾಡಿ, ವಿಚಾರಣೆಗೆ ಒಳಪಡಿಸುವ ವೇಳೆ ನಡೆಸುವ ತಪಾಸಣೆ(ಸ್ಕ್ರೀನಿಂಗ್ ಟೆಸ್ಟ್)ಯೇ ಅಂತಿಮವಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ದೃಢೀಕರಣ ವರದಿ ಪಡೆಯಬೇಕು. ಈ ಪ್ರಕರಣದಲ್ಲಿ ಎಫ್ಎಸ್ಎಲ್ ದೃಢೀಕರಣವಾಗಿಲ್ಲ. ಜೈಲಿಗೆ ಕಳುಹಿಸುವುದರಿಂದ ಅವರ ಪರಿವರ್ತನೆ ಸಾಧ್ಯವಿಲ್ಲ. ಬದಲಾಗಿ ಅವರ ಮನಸ್ಥಿತಿ ಮೇಲೆ ಪರಿಣಾಮ ಬೀರಬಹುದು. ಒಂದೇ ಕಾಲೇಜನ್ನು ಗುರಿ ಮಾಡುವ ಪ್ರಯತ್ನವೂ ಇಲ್ಲಿ ನಡೆದಿದೆ. ಜಿಲ್ಲೆಗೆ ಮಾದಕ ವಸ್ತುಗಳು ಯಾವ ಮೂಲದಿಂದ ಬರುತ್ತವೆ ಎನ್ನುವುದನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವುದು ಪೊಲೀಸ್ ಇಲಾಖೆ ಸರಕಾರದ ಜವಾಬ್ದಾರಿ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ