ರಂಗದಿಂದ ಇಳಿಸಿ ಅವಮಾನ ಮಾಡಿದರು; ಮುಂದಿನ ಕ್ರಮ ಪ್ರಕಟಿಸಿದ ಪಟ್ಲ ಸತೀಶ್ ಶೆಟ್ಟಿ
Team Udayavani, Nov 25, 2019, 3:31 PM IST
ಮಂಗಳೂರು: ರಂಗಸ್ಥಳದಿಂದ ಕೆಳಗಿಳಿಸುವ ಮೂಲಕ ಸಾವಿರಾರು ಜನರ ಮುಂದೆ ನನ್ನನ್ನು ಅವಮಾನ ಮಾಡಲಾಗಿದೆ. ಹೀಗಾಗಿ ಮೇಳದ ಯಜಮಾನರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾನು ಈ ಮೊದಲು ಕಲಾವಿದರ ಹಿತ್ತಾಸಕ್ತಿ ಕಾಯ್ದುಕೊಳ್ಳಲು ಶ್ರಮಿಸಿದ್ದು, ಮುಂದೆಯೂ ಕಲಾವಿದರ ಹಿತಾಸಕ್ತಿ ಕಾಯ್ದುಕೊಳ್ಳುವ ಹೋರಾಟದಲ್ಲಿ ಭಾಗಿಯಾಗುತ್ತೇನೆ ಎಂದರು.
ಕಟೀಲು ಮೇಳದಲ್ಲಿ ಪ್ರಸ್ತುತ ಮೇಳದ ಆಡಳಿತ ಮಂಡಳಿಯಿಂದ ಕಲಾವಿದರ ಮೇಲೆ ದೌರ್ಜನ್ಯ ಆಗುತ್ತಿರುವ ಹಿನ್ನಲೆಯಲ್ಲಿ ಮೇಳವನ್ನು ಮುಜರಾಯಿ ಇಲಾಖೆಗೆ ವಹಿಸಿಕೊಡಬೇಕು. ನಾನು ಇನ್ನು ಮುಂದೆಯೂ ಕಟೀಲು ದೇವಿಯ ಸೇವೆ ಮಾಡಲು ಸಿದ್ದನಿದ್ದೇನೆ. ಇತರ ಮೇಳಕ್ಕೆ ಹೋಗುವುದಿಲ್ಲ. ನನ್ನನ್ನು ರಂಗಸ್ಥಳದಿಂದ ಕೆಳಗಿಳಿಸಿರುವುದು ನ್ಯಾಯಾಲಯ ನೀಡಿದ ನಿರ್ದೇಶನದ ಉಲ್ಲಂಘನೆಯಾಗಿದ್ದು, ಈ ಬಗ್ಗೆ ನ್ಯಾಯಾಂಗ ನಿಂದನೆ ದೂರನ್ನು ದಾಖಲಿಸಲಾಗುವುದು ಎಂದರು.
ನಾನು ಕಟೀಲು ಮೇಳದ ಯಜಮಾನರು ನೀಡಿದ ನಿರ್ದೇಶನ, ಸೂಚನೆಯನ್ನು ಉಲ್ಲಂಘನೆ ಮಾಡಿಲ್ಲ. ನನಗೆ ಮೇಳದ ಭಾಗವತಿಕೆ ಮಾಡಬಾರದೆಂದು ನಾನು ರಂಗಸ್ಥಳಕ್ಕೆ ಬರುವವರೆಗೂ ನನಗೆ ಯಾರೂ ಸೂಚನೆ ನೀಡಿಲ್ಲ. ನನ್ನನ್ನು ರಂಗಸ್ಥಳದಿಂದ ಕೆಳಗಿಳಿಸಿರುವುದು ಪೂರ್ವ ನಿರ್ಧಾರಿತ ಹಾಗೂ ಷಡ್ಯಂತ್ರವಾಗಿದೆ ಆರೋಪಿಸಿದರು.
ಕಟೀಲು ಯಕ್ಷಗಾನದ ಈ ವರ್ಷದ ತಿರುಗಾಟದ ಮೊದಲ ದಿನದ ಸೇವೆಯಾಟದಲ್ಲಿ ಭಾಗವತಿಕೆ ಅಣಿಯಾಗುತ್ತಿದ್ದ ಪಟ್ಲ ಸತೀಶ್ ಶೆಟ್ಟಿಯವರನ್ನು ರಂಗಸ್ಥಳದಿಂದ ಕೆಳಗಿಳಿಯುವಂತೆ ಸೂಚಿಸಲಾಗಿತ್ತು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಪಟ್ಲ ಸತೀಶ್ ಶೆಟ್ಟಿ ಅವರನ್ನು ಆಶಿಸ್ತು ಮತ್ತು ಮೇಳದ ಅವಹೇಳನದ ಕಾರಣದಿಂದ ಮೇಳದಿಂದ ಹೊರಗಿಡಲಾಗಿದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ