ಮಂಗಳೂರು: ಮುಂದಿನ ಆದೇಶದ ತನಕ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಗೆ ವಿನಾಯಿತಿ
Team Udayavani, Oct 11, 2019, 5:26 PM IST
ಮಂಗಳೂರು: ಮಂಗಳೂರು ನಗರದಲ್ಲಿ ಆಸ್ತಿ ನೋಂದಣಿ ಸಂದರ್ಭದಲ್ಲಿ ಪಿ.ಆರ್.ಕಾರ್ಡ್ ( ಪ್ರಾಪರ್ಟಿ ಕಾರ್ಡ್) ಕಡ್ಡಾಯಗೊಳಿಸುವುದನ್ನು ಮುಂದಿನ ಆದೇಶದವರೆಗೆ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ.
ಮಂಗಳೂರು ನಗರದಲ್ಲಿ ಯು.ಪಿ.ಓ.ಆರ್. ಯೋಜನೆಯಡಿಯಲ್ಲಿ ಆಸ್ತಿಗಳ ನೋಂದಣಿ ಸಮಯದಲ್ಲಿ ಪಿ.ಆರ್.ಕಾರ್ಡ್ ( ಪ್ರಾಪರ್ಟಿ ಕಾರ್ಡ್) ಕಡ್ಡಾಯಗೊಳಿಸಿರುವ ಬಗ್ಗೆ ಸಾರ್ವಜನಿಕರು, ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಮಾಧ್ಯಮ ವರ್ಗದವರಿಂದ ಸಾಕಷ್ಟು ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದರಿಂದ ಹಾಲಿ ಇರುವ ಯೋಜನೆಯನ್ನು ಪೂರ್ಣಪ್ರಮಾಣವಾಗಿ ಸಮಸ್ಯೆಗಳನ್ನು ಬಗೆಹರಿಸುವ ತನಕ ಮುಂದುವರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.