ಹೋರ್ಡಿಂಗ್ಸ್‌ ತೆರವುಗೊಳಿಸಿದ ಅಧಿಕಾರಿಯ ಎತ್ತಂಗಡಿ!


Team Udayavani, Aug 22, 2018, 3:20 AM IST

hoarding-21-8.jpg

ಮಂಗಳೂರು: ಹೈಕೋರ್ಟ್‌ ನಿರ್ದೇಶನದಡಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ ಕಟ್ಟುನಿಟ್ಟಾಗಿ ನಡೆಯುತ್ತಿರುವಾಗಲೇ ಮಂಗಳೂರಿನಲ್ಲಿ ಇಂಥದ್ದೇ ಒಳ್ಳೆ ಕೆಲಸ ಮಾಡಿದ್ದಕ್ಕೆ ಪಾಲಿಕೆ ಅಧಿಕಾರಿಯೊಬ್ಬರು ವರ್ಗಾವಣೆ ಶಿಕ್ಷೆ ಅನುಭವಿಸುವಂತಾಗಿದೆ. ಮಂಗಳೂರು ಮನಪಾದ ಕಂದಾಯ ಅಧಿಕಾರಿ ಪ್ರವೀಣ್‌ ಚಂದ್ರ ಕರ್ಕೇರ ಕಲುಬುರ್ಗಿ ಪಾಲಿಕೆಗೆ ಎತ್ತಂಗಡಿಯಾಗಿರುವವರು. ಈ ಮಧ್ಯೆ ಏಕಾಏಕಿ ವರ್ಗಾವಣೆ ವಿರೋಧಿಸಿ ಪಾಲಿಕೆಯ ಕೆಲವು ಅಧಿಕಾರಿಗಳು ಪ್ರತಿಭಟನೆಗೂ ಮುಂದಾಗಿದ್ದಾರೆ. ನಗರಾಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಖಾದರ್‌ ತವರು ಜಿಲ್ಲೆಯಲ್ಲೇ ಈ ಪ್ರಕರಣ ನಡೆದದ್ದು ವಿಶೇಷವೆನಿಸಿದೆ. ಎತ್ತಂಗಡಿಯಾದ ಅಧಿಕಾರಿಯ ನಿವೃತ್ತಿಗೆ 3 ವರ್ಷವಿದ್ದು, ದೂರದ ಊರಿಗೆ ವರ್ಗಾವಣೆ ಟೀಕೆಗೆ ಗುರಿಯಾಗಿದೆ.

ದೂರುಗಳ ಮೇಲೆ ಕ್ರಮ
ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವರು ಅನಧಿಕೃತ ಹೋರ್ಡಿಂಗ್‌ ಅಳವಡಿಸಿ ಪಾಲಿಕೆ ಆದಾಯಕ್ಕೆ ಖೋತಾ ಮಾಡಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಮಾರು 45ಕ್ಕೂ ಹೆಚ್ಚು ಕಡೆ ಹೋರ್ಡಿಂಗ್‌ಗಳ ತೆರವಿಗೆ ಅಧಿಕಾರಿಗಳು ತೀರ್ಮಾನಿಸಿದ್ದರು.

ಆ.6ರಂದು ಏರ್‌ಪೋರ್ಟ್‌ ರಸ್ತೆಯಲ್ಲಿ ಕಾವೂರು ಜಂಕ್ಷನ್‌ನಿಂದ ಮರವೂರು ಸೇತುವೆ ತನಕ 15ಕಡೆ ಇದ್ದ ಹೋರ್ಡಿಂಗ್‌ಗಳನ್ನು ಪ್ರವೀಣ್‌ಚಂದ್ರ ತೆರವುಗೊಳಿಸಿದ್ದರು. ಆ ಪೈಕಿ ಹೆಚ್ಚಿನವು ರಾಜಕಾರಣಿಯೊಬ್ಬರ ಸಂಬಂಧಿಕರಿಗೆ ಸೇರಿದ್ದವು. ಕಾರ್ಯಾಚರಣೆ ವಿಸ್ತರಿಸುವಷ್ಟರಲ್ಲೇ ಆ.14ರಂದು ಅವರನ್ನು ಕಲುಬುರ್ಗಿಗೆ ವರ್ಗಾಯಿಸಲಾಗಿದೆ.

ರಜೆ ಮೇಲೆ ತೆರಳಿದ ಅಧಿಕಾರಿ
ಈ ವರ್ಗಾವಣೆಯಿಂದ ಬೇಸತ್ತು ರಜೆ ಮೇಲೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ ಈ ರೀತಿಯ ವರ್ಗಾವಣೆ ಅವರಿಗೆ ಮೊದಲಲ್ಲ. 2014ರಲ್ಲಿ ಕಾರ್ಪೊರೇಟರ್‌ ಒಬ್ಬರಿಗೆ ಸೇರಿದ್ದ ಅನಧಿಕೃತ ಹೋರ್ಡಿಂಗ್‌ ತೆರವುಗೊಳಿಸಿದ್ದಕ್ಕೆ ಸಹಾಯಕ ಕಂದಾಯ ಅಧಿಕಾರಿಯಾಗಿದ್ದ ಅವರನ್ನು ಬೆಳಗಾವಿಗೆ ವರ್ಗಾಯಿಸಲಾಗಿತ್ತು. ಅದನ್ನು ಪ್ರಶ್ನಿಸಿ ಕೋರ್ಟ್‌ ಮೊರೆ ಹೋಗಿ, ಭಡ್ತಿ ಪಡೆದು ಮಂಗಳೂರಿಗೆ ವಾಪಸಾಗಿದ್ದರು.

ಕಂದಾಯ ಅಧಿಕಾರಿಯೇ ಇಲ್ಲ
ಪಾಲಿಕೆ ವ್ಯಾಪ್ತಿಯಲ್ಲಿ 3 ಕಂದಾಯ ವಲಯವಿದ್ದು, ಪ್ರವೀಣ್‌ಚಂದ್ರ ನಗರ ವಿಭಾಗದಲ್ಲಿದ್ದರು. ಇಲ್ಲಿಯ ಸಹಾಯಕ ಕಂದಾಯ ಅಧಿಕಾರಿಯನ್ನು ಸುರತ್ಕಲ್‌ ವಿಭಾಗದ 2 ಹುದ್ದೆಗಳ ಪೈಕಿ ಒಂದಕ್ಕೆ ಕಂದಾಯ ಅಧಿಕಾರಿಯಾಗಿ ನಿಯೋಜಿಸಲಾಗಿದೆ. ಈಗ ಪ್ರವೀಣ್‌ಚಂದ್ರರ ವರ್ಗಾವಣೆಯಿಂದ ನಗರ ವಿಭಾಗದಲ್ಲಿ ಕಂದಾಯ ಅಧಿಕಾರಿ ಇಲ್ಲದಂತಾಗಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.