![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಹೋರ್ಡಿಂಗ್ಸ್ ತೆರವುಗೊಳಿಸಿದ ಅಧಿಕಾರಿಯ ಎತ್ತಂಗಡಿ!
Team Udayavani, Aug 22, 2018, 3:20 AM IST
![hoarding-21-8.jpg](https://www.udayavani.com/wp-content/uploads/2018/08/21/hoarding-21-8.jpg)
ಮಂಗಳೂರು: ಹೈಕೋರ್ಟ್ ನಿರ್ದೇಶನದಡಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ಗಳ ತೆರವು ಕಾರ್ಯಾಚರಣೆ ಕಟ್ಟುನಿಟ್ಟಾಗಿ ನಡೆಯುತ್ತಿರುವಾಗಲೇ ಮಂಗಳೂರಿನಲ್ಲಿ ಇಂಥದ್ದೇ ಒಳ್ಳೆ ಕೆಲಸ ಮಾಡಿದ್ದಕ್ಕೆ ಪಾಲಿಕೆ ಅಧಿಕಾರಿಯೊಬ್ಬರು ವರ್ಗಾವಣೆ ಶಿಕ್ಷೆ ಅನುಭವಿಸುವಂತಾಗಿದೆ. ಮಂಗಳೂರು ಮನಪಾದ ಕಂದಾಯ ಅಧಿಕಾರಿ ಪ್ರವೀಣ್ ಚಂದ್ರ ಕರ್ಕೇರ ಕಲುಬುರ್ಗಿ ಪಾಲಿಕೆಗೆ ಎತ್ತಂಗಡಿಯಾಗಿರುವವರು. ಈ ಮಧ್ಯೆ ಏಕಾಏಕಿ ವರ್ಗಾವಣೆ ವಿರೋಧಿಸಿ ಪಾಲಿಕೆಯ ಕೆಲವು ಅಧಿಕಾರಿಗಳು ಪ್ರತಿಭಟನೆಗೂ ಮುಂದಾಗಿದ್ದಾರೆ. ನಗರಾಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ತವರು ಜಿಲ್ಲೆಯಲ್ಲೇ ಈ ಪ್ರಕರಣ ನಡೆದದ್ದು ವಿಶೇಷವೆನಿಸಿದೆ. ಎತ್ತಂಗಡಿಯಾದ ಅಧಿಕಾರಿಯ ನಿವೃತ್ತಿಗೆ 3 ವರ್ಷವಿದ್ದು, ದೂರದ ಊರಿಗೆ ವರ್ಗಾವಣೆ ಟೀಕೆಗೆ ಗುರಿಯಾಗಿದೆ.
ದೂರುಗಳ ಮೇಲೆ ಕ್ರಮ
ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವರು ಅನಧಿಕೃತ ಹೋರ್ಡಿಂಗ್ ಅಳವಡಿಸಿ ಪಾಲಿಕೆ ಆದಾಯಕ್ಕೆ ಖೋತಾ ಮಾಡಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಮಾರು 45ಕ್ಕೂ ಹೆಚ್ಚು ಕಡೆ ಹೋರ್ಡಿಂಗ್ಗಳ ತೆರವಿಗೆ ಅಧಿಕಾರಿಗಳು ತೀರ್ಮಾನಿಸಿದ್ದರು.
ಆ.6ರಂದು ಏರ್ಪೋರ್ಟ್ ರಸ್ತೆಯಲ್ಲಿ ಕಾವೂರು ಜಂಕ್ಷನ್ನಿಂದ ಮರವೂರು ಸೇತುವೆ ತನಕ 15ಕಡೆ ಇದ್ದ ಹೋರ್ಡಿಂಗ್ಗಳನ್ನು ಪ್ರವೀಣ್ಚಂದ್ರ ತೆರವುಗೊಳಿಸಿದ್ದರು. ಆ ಪೈಕಿ ಹೆಚ್ಚಿನವು ರಾಜಕಾರಣಿಯೊಬ್ಬರ ಸಂಬಂಧಿಕರಿಗೆ ಸೇರಿದ್ದವು. ಕಾರ್ಯಾಚರಣೆ ವಿಸ್ತರಿಸುವಷ್ಟರಲ್ಲೇ ಆ.14ರಂದು ಅವರನ್ನು ಕಲುಬುರ್ಗಿಗೆ ವರ್ಗಾಯಿಸಲಾಗಿದೆ.
ರಜೆ ಮೇಲೆ ತೆರಳಿದ ಅಧಿಕಾರಿ
ಈ ವರ್ಗಾವಣೆಯಿಂದ ಬೇಸತ್ತು ರಜೆ ಮೇಲೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ ಈ ರೀತಿಯ ವರ್ಗಾವಣೆ ಅವರಿಗೆ ಮೊದಲಲ್ಲ. 2014ರಲ್ಲಿ ಕಾರ್ಪೊರೇಟರ್ ಒಬ್ಬರಿಗೆ ಸೇರಿದ್ದ ಅನಧಿಕೃತ ಹೋರ್ಡಿಂಗ್ ತೆರವುಗೊಳಿಸಿದ್ದಕ್ಕೆ ಸಹಾಯಕ ಕಂದಾಯ ಅಧಿಕಾರಿಯಾಗಿದ್ದ ಅವರನ್ನು ಬೆಳಗಾವಿಗೆ ವರ್ಗಾಯಿಸಲಾಗಿತ್ತು. ಅದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿ, ಭಡ್ತಿ ಪಡೆದು ಮಂಗಳೂರಿಗೆ ವಾಪಸಾಗಿದ್ದರು.
ಕಂದಾಯ ಅಧಿಕಾರಿಯೇ ಇಲ್ಲ
ಪಾಲಿಕೆ ವ್ಯಾಪ್ತಿಯಲ್ಲಿ 3 ಕಂದಾಯ ವಲಯವಿದ್ದು, ಪ್ರವೀಣ್ಚಂದ್ರ ನಗರ ವಿಭಾಗದಲ್ಲಿದ್ದರು. ಇಲ್ಲಿಯ ಸಹಾಯಕ ಕಂದಾಯ ಅಧಿಕಾರಿಯನ್ನು ಸುರತ್ಕಲ್ ವಿಭಾಗದ 2 ಹುದ್ದೆಗಳ ಪೈಕಿ ಒಂದಕ್ಕೆ ಕಂದಾಯ ಅಧಿಕಾರಿಯಾಗಿ ನಿಯೋಜಿಸಲಾಗಿದೆ. ಈಗ ಪ್ರವೀಣ್ಚಂದ್ರರ ವರ್ಗಾವಣೆಯಿಂದ ನಗರ ವಿಭಾಗದಲ್ಲಿ ಕಂದಾಯ ಅಧಿಕಾರಿ ಇಲ್ಲದಂತಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.