Mangaluru “ಸೀ ಸ್ಕೌಟ್ಸ್‌’ ತರಬೇತಿ ಶೀಘ್ರ ಆರಂಭ: ಪಿ.ಜಿ.ಆರ್‌. ಸಿಂಧ್ಯಾ


Team Udayavani, Jan 28, 2024, 11:05 PM IST

Mangaluru “ಸೀ ಸ್ಕೌಟ್ಸ್‌’ ತರಬೇತಿ ಶೀಘ್ರ ಆರಂಭ: ಪಿ.ಜಿ.ಆರ್‌. ಸಿಂಧ್ಯಾ

ಮಂಗಳೂರು: ಭಾರತ್‌ ಸ್ಕೌಟ್ಸ್‌ ಗೈಡ್ಸ್‌ನಿಂದ ಕರ್ನಾಟಕದಲ್ಲಿ ಏರ್‌ ಸ್ಕೌಟ್ಸ್‌, ಸೀ ಸ್ಕೌಟ್ಸ್‌ ಮತ್ತು ರೂರಲ್‌ ಸ್ಕೌಟ್ಸ್‌ ತರಬೇತಿ ಆರಂಭಿಸಿ ರಾಷ್ಟ್ರದ ಕೇಂದ್ರವನ್ನಾಗಿಸಲಿದೆ ಎಂದು ಭಾರತೀಯ ಸ್ಕೌಟ್ಸ್‌-ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್‌. ಸಿಂಧ್ಯಾ ಹೇಳಿದರು.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕರ್ನಾಟಕ ದ.ಕ. ಜಿಲ್ಲಾ ಸಂಸ್ಥೆ ವತಿಯಿಂದ ನಡೆದ ವಿಶ್ವ ಸಾಂಸ್ಕೃತಿಕ ಜಾಂಬೂರಿ 2022-23ರ ನೆನಪಿಗಾಗಿ ಪಿಲಿಕುಳದಲ್ಲಿ ನಿರ್ಮಿಸಿದ ಕಟ್ಟಡದ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಚ್‌ಎಎಲ್‌ ಬೆಂಗಳೂರಿನಲ್ಲಿ ಈಗಾಗಲೇ ಏರ್‌ ಸ್ಕೌಟ್ಸ್‌ ತರಬೇತಿ ಆರಂಭಗೊಂಡಿದ್ದು, 100 ಮಂದಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಮಂಗಳೂರಿನಲ್ಲಿ ಸೀ ಸ್ಕೌಟ್ಸ್‌ ತರಬೇತಿ ಸದ್ಯದಲ್ಲೇ ಆರಂಭಗೊಳ್ಳಲಿದ್ದು, ಮುಂಬಯಿಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ. ಇಲ್ಲಿ ನೌಕಾಸೇನೆ, ಪ್ರವಾಹದಿಂದ ರಕ್ಷಣೆ ಸಹಿತ ವಿವಿಧ ವಿಷಯಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು. ಪ್ರಥಮವಾಗಿ ಶಿಕ್ಷಕರಿಗೆ ಬಳಿಕ ವಿದ್ಯಾರ್ಥಿಗಳಿಗೂ ಕ್ಯಾಂಪ್‌ ರೀತಿ ತರಬೇತಿ ನೀಡಲಾಗುತ್ತದೆ. ಇದಾದ ಬಳಿಕ ಗ್ರಾಮೀಣ ಭಾಗದ ಕೃಷಿ, ಅಲ್ಲಿನ ಚಟುವಟಿಕೆ ಬಗ್ಗೆ ಅರಿವು ಮೂಡಿಸಲು ರೂರಲ್‌ ಸ್ಕೌಟ್ಸ್‌ ಆರಂಭ ಮಾಡುತ್ತೇವೆ. ಇನ್ನೂ ಜಾಗ ಅಂತಿಮಗೊಂಡಿಲ್ಲ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಆಯುಕ್ತ ಮೋಹನ ಆಳ್ವರ ನೇತೃತ್ವದಲ್ಲಿ ಸ್ಕೌಟ್ಸ್‌ ಗೈಡ್ಸ್‌ಗೆ ಸಂಬಂಧಿಸಿ ಉತ್ತೇಜನ, ಹಲವು ಅಭಿವೃದ್ಧಿ ಕೆಲಸ ನಡೆದಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಪಾಳು ಬಿದ್ದ ಜಾಗದಲ್ಲಿ ಸುಸಜ್ಜಿತ ಭವನ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಕಟ್ಟಡದಿಂದ ಈ ಭಾಗದ ಸಾರ್ವಜನಿಕರಿಗೆ ಲಾಭ ವಾಗಲಿದೆ ಎಂದರು.

ಮೇಯರ್‌ ಸುಧೀರ್‌ ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಅನಿಲ್‌ ಕುಮಾರ್‌, ಉದ್ಯಮಿ ಶಶಿಧರ ಶೆಟ್ಟಿ, ಅದಾನಿ ಸಂಸ್ಥೆಯ ಕಿಶೋರ್‌ ಆಳ್ವ, ಗಂಗಪ್ಪ ಗೌಡ, ರಾಧಾ ವೆಂಕಟೇಶ್‌, ರಾಮಲತಾ ಉಪಸ್ಥಿತರಿದ್ದರು.

ಭಾರತ್‌ ಸ್ಕೌಟ್ಸ್‌ ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಪ್ರಸ್ತಾವನೆಗೈದು, ಭಾರತ್‌ ಸ್ಕೌಟ್ಸ್‌ ಗೈಡ್‌ನ‌ಲ್ಲಿ ದ.ಕ. ಜಿಲ್ಲೆ ಕೆಲವು ವರ್ಷಗಳಿಂದ ರಾಜ್ಯದಲ್ಲೇ ಮೊದಲನೇ ಸ್ಥಾನದಲ್ಲಿದೆ. 6 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು, 25 ಸಾವಿರಕ್ಕೂ ಹೆಚ್ಚಿನ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಚಟುವಟಿಕೆಗಳಿಗೆ ಕ್ಯಾಂಪ್‌ ಮಾಡಲು ಸೂಕ್ತ ಸಭಾಂಗಣ ಇರಲಿಲ್ಲ. ಈಗ 1.5 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳದಲ್ಲಿ ನಿರ್ಮಾಣಗೊಂಡಿದೆ. 1,500ಕ್ಕೂ ಹೆಚ್ಚಿನ ಮಂದಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.