ಮುಳುಗಿರುವ ಪ್ರಿನ್ಸೆಸ್‌ ಮಿರಾಲ್‌ ನೌಕೆ ; ತೈಲ ತೆರವು ಕಾರ್ಯ ಆರಂಭ

ಜೂನ್‌ 21ರಂದು ಅವಘಡ ಸಂಭವಿಸಿತ್ತು ; ಮೊದಲ ದಿನ 30 ಟನ್‌ ಡೀಸೆಲ್‌ ಹೊರಕ್ಕೆ

Team Udayavani, Jan 17, 2023, 7:10 AM IST

ಮುಳುಗಿರುವ ಪ್ರಿನ್ಸೆಸ್‌ ಮಿರಾಲ್‌ ನೌಕೆ ; ತೈಲ ತೆರವು ಕಾರ್ಯ ಆರಂಭ

ಮಂಗಳೂರು: ಚೀನದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್‌ ಕಾಯಿಲ್‌ ಸಾಗಿಸುತ್ತಿದ್ದ ವೇಳೆ ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿ ಮಾಲಿನ್ಯದ ಭಯ ಮೂಡಿಸಿದ್ದ ಪ್ರಿನ್ಸೆಸ್‌ ಮಿರಾಲ್‌ ಹಡಗಿನಿಂದ ತೈಲ ಹೊರತೆಗೆಯುವ ಕಾರ್ಯ ಕೊನೆಗೂ ಸೋಮವಾರ ಆರಂಭಗೊಂಡಿದೆ.

ಗುಜರಾತ್‌ ಮೂಲದ ಬನ್ಸಲ್‌ ಎಂಡೆವರ್ಸ್‌ ಸಂಸ್ಥೆಗೆ ಗುತ್ತಿಗೆ ನೀಡಲಾಗಿದ್ದು, ಹಲವು ದಿನಗಳಿಂದ ಸಿದ್ಧತೆ ನಡೆಯುತ್ತಿತ್ತು. ಸೋಮವಾರ ಸಂಜೆ ವೇಳೆಗೆ ಸುಮಾರು 30 ಟನ್‌ ಡೀಸೆಲ್‌ ಹೊರತೆಗೆಯಲಾಗಿದೆ ಎಂದು ತಿಳಿದುಬಂದಿದೆ.

2021ರ ಜೂನ್‌ 21ರಂದು ಈ ಹಗಡು ಅಪಾಯಕ್ಕೆ ಸಿಲುಕಿತ್ತು. ರಂಧ್ರ ಕಾಣಿಸಿಕೊಂಡು ನೀರು ಒಳಸೇರಲಾರಂಭಿಸಿದಾಗ ಅದರಲ್ಲಿದ್ದ 15 ಸಿರಿಯನ್‌ ನಾವಿಕರನ್ನು ಕೋಸ್ಟ್‌ಗಾರ್ಡ್‌ ರಕ್ಷಿಸಿತ್ತು. ಬಳಿಕ ಹಡಗಿನ ತಳವು ನೆಲಕ್ಕೆ ತಾಗಿ ಚಲಿಸುವ ಯಾವುದೇ ಸಾಧ್ಯತೆ ಇಲ್ಲದೆ ಮುಕ್ಕಾಲು ಭಾಗ ಮುಳುಗಿದ ಸ್ಥಿತಿಯಲ್ಲಿ ನಿಂತಿದೆ. 160 ಟನ್‌ ಫರ್ನೆಸ್‌ ಆಯಿಲ್‌, 60 ಟನ್‌ ಡೀಸೆಲ್‌ ಸೇರಿದಂತೆ 220 ಟನ್‌ ತೈಲ ಇದರಲ್ಲಿದೆ.

ಬಾರ್ಜ್‌ ಆಗಮನ
ತಜ್ಞರ ತಂಡ ಮಂಗಳೂರಿಗೆ ಆಗಮಿಸಿ ಕಳೆದ ಒಂದು ವಾರಗಳಿಂದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೋಸ್‌ಪೈಪ್‌ ಅಳವಡಿಸಿ ವ್ಯಾಕ್ಯೂಂ ಪಂಪ್‌ ಮೂಲಕ ತೈಲವನ್ನು ಹೊರಕ್ಕೆಳೆಯುವುದು ಸದ್ಯದ ಮಾರ್ಗ. ಅದಕ್ಕಾಗಿ 320 ಟನ್‌ ಸಾಮರ್ಥ್ಯದ ಬಂಕರ್‌ ಬಾರ್ಜ್‌ ಕೂಡ ಸಿದ್ಧವಾಗಿದ್ದು, ತೈಲವನ್ನು ಅದಕ್ಕೆ ಪೂರ್ಣ ವರ್ಗಾಯಿಸಿ ಹಳೆಬಂದರಿಗೆ ತರಲಾಗುವುದು. ಅಲ್ಲಿಂದ ಅದನ್ನು ಪುನರ್ಬಳಕೆ ಉದ್ದೇಶಗಳಿಗಾಗಿ ಸೂಕ್ತ ಕಡೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರ ಅನುಮತಿ ಇರುವ ವಾಹನದಲ್ಲಿ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತೈಲ ತೆರವು ಮಾತ್ರ
ಮುಳುಗಿದ ಹಡಗಿನ ತೆರವಿಗೆ ಬೇರೆ ಬೇರೆ ಪ್ರಕ್ರಿಯೆಗಳು ನಡೆಯುತ್ತಿದ್ದವು. ಆ ನಡುವೆ ಅಕ್ಟೋಬರ್‌ನಲ್ಲಿ ಯುಎಇಗೆ ಸೇರಿದ ಮೊಂಜಾಸಾ ಡಿಎಂಸಿಸಿ ಎಂಬ ಕಂಪೆನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತನಗೆ ಶಿಪ್‌ ಬಂಕರಿಂಗ್‌ (ತೈಲ ಪೂರೈಕೆ) ಕಾರ್ಯಕ್ಕಾಗಿ ಬರಬೇಕಾದ 1,71,301 ಅಮೆರಿಕನ್‌ ಡಾಲರ್‌ (ಸುಮಾರು 1.39 ಕೋಟಿ ರೂ.) ಮೊತ್ತ ಬಂದಿಲ್ಲ, ಅದು ಬರುವ ವರೆಗೆ ಈಹಡಗನ್ನು ತಡೆಹಿಡಿಯುವಂತೆ ಕೋರಿತ್ತು. ಅದನ್ನು ಹೈಕೋರ್ಟ್‌ ಮಾನ್ಯ ಮಾಡಿತ್ತು. ಬಳಿಕ ಜಿಲ್ಲಾಡಳಿತವು ಹೈಕೋರ್ಟ್‌ಗೆ ಪರಿಸರಮಾಲಿನ್ಯ ಭೀತಿ ಇರುವುದರಿಂದ ತೈಲ ತೆರವಿಗೆ ಅರ್ಜಿ ಸಲ್ಲಿಸಿದ್ದು, ಅನುಮತಿ ಸಿಕ್ಕಿದೆ. ತೈಲ ತೆರವಿನ ಬಳಿಕ ಅದರಲ್ಲಿರುವ ಸ್ಟೀಲ್‌ ಕಾಯಿಲ್‌, ಕೊನೆಯಲ್ಲಿ ಹಡಗನ್ನೂ ತೆರವು ಮಾಡುವುದು ಜಿಲ್ಲಾಡಳಿತದ ಉದ್ದೇಶ.

ಐದು ಬಾರಿ ಸಭೆ ನಡೆಸಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೈಲ ತೆರವಿನ ಪ್ರಕ್ರಿಯೆ ಆರಂಭಿಸಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್‌ ಇಲಾಖೆ ಮತ್ತು ಕೋಸ್ಟ್‌ಗಾರ್ಡ್‌ನಿಂದ ನಿರಾಕ್ಷೇಪಣ ಪತ್ರ (ಎನ್‌ಒಸಿ) ಎಲ್ಲವನ್ನೂ ಪಡೆದುಕೊಳ್ಳಲಾಗಿದೆ. ಇನ್ನೂ ಸುಮಾರು 15 ದಿನ ಇದಕ್ಕೆ ತಗಲಬಹುದು.
– ರವಿಕುಮಾರ್‌ ಎಂ.ಆರ್‌.,
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.