ಮಂಗಳೂರು: ಕೊಳವೆ ಬಿರುಕು- ಪೋಲಾಗುತ್ತಿದೆ “ಜೀವ ಜಲ’

ಜನ ಪ್ರತಿನಿಧಿಗಳು, ಪಾಲಿಕೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

Team Udayavani, Jan 24, 2023, 3:29 PM IST

ಮಂಗಳೂರು: ಕೊಳವೆ ಬಿರುಕು- ಪೋಲಾಗುತ್ತಿದೆ “ಜೀವ ಜಲ’

ಮಹಾನಗರ: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಮುಖ್ಯ ಕೊಳವೆ ಅಲಲ್ಲಿ ಬಿರುಕು ಬಿಟ್ಟು ಸಾವಿರಾರು ಲೀ. ನೀರು  ಪೋಲಾಗುವಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ತಿಂಗಳ ಅವಧಿಯಲ್ಲಿ ಕನಿಷ್ಠ ಎರಡು ಮೂರು ಕಡೆಗಳಲ್ಲಿ ಇಂತಹ ಘಟನೆಗಳು ವರದಿಯಾಗುತ್ತಿವೆ.

ಬೇಸಗೆ ದಿನಗಳು ಬರುತ್ತಿರುವುದರಿಂದ ನೀರಿನ ಬೇಡಿಕೆ ನಗರದಲ್ಲಿ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೊಳವೆ ಮಾರ್ಗದಲ್ಲಿ ಬಿರುಕು ಉಂಟಾಗುತ್ತಿರುವುದು ನೀರಿನ ಪೂರೈಕೆಯಲ್ಲಿ ವ್ಯತ್ಯಯಕ್ಕೂ ಕಾರಣವಾಗುತ್ತಿದೆ. ಪರಿಣಾಮ ನೀರು ಇದ್ದರೂ ಕೃತಕ ಅಭಾವ ಸೃಷ್ಟಿಯಾಗುತ್ತಿದ್ದು, ಇದು ಜನ ಪ್ರತಿನಿಧಿಗಳು, ಪಾಲಿಕೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ತುಂಬೆ ಅಣೆಕಟ್ಟಿನಿಂದ ನಗರಕ್ಕೆ ಪ್ರತಿದಿನ 160 ಎಂಎಲ್‌ಡಿ ನೀರು ಸರಬರಾಜಾಗುತ್ತದೆ. ಇದರಲ್ಲಿ ಸುಮಾರು 50 ಎಂಎಲ್‌ಡಿ ನೀರು ನಗರಕ್ಕೆ ಬರುವ ಮುನ್ನವೇ ವಿವಿಧ ಹಂತಗಳಲ್ಲಿ ಸೋರಿಕೆ ಯಾಗುತ್ತಿದೆ. 110 ಎಂಎಲ್‌ಡಿಯಷ್ಟು ಮಾತ್ರ ಬಳಕೆಗೆ ದೊರೆಯುತ್ತದೆ. ಕೆಲವು ಕಡೆಗಳಲ್ಲಿ ಪೈಪ್‌ ಬಿರುಕು ಬಿಟ್ಟು ನೀರು ಪೋಲಾದರೆ, ಗ್ರಾಮೀಣ ಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಅಕ್ರಮ ಸಂಪರ್ಕಗಳಿವೆ. ಇದನ್ನು ಪತ್ತೆ ಹಚ್ಚುವುದು, ತಡೆಯುವುದು ಕೂಡ ಪಾಲಿಕೆ ಅಧಿಕಾರಿಗಳಿಗೆ ಸವಾಲಾಗಿದೆ.

ಪೈಪ್‌ ಒಡೆದ ಸ್ಥಳ ಹುಡುಕುವುದೂ ಸವಾಲು
ಬಹುತೇಕ ಕಡೆಗಳಲ್ಲಿ ಪೈಪ್‌ ಒಡೆದಿರುವ ಸ್ಥಳವನ್ನು ಪತ್ತೆ ಹಚ್ಚುವುದೂ ಅಧಿಕಾರಿಗಳಿಗೆ ಸವಾಲಾಗಿದೆ. ಪಂಪ್‌ಹೌಸ್‌ ಗಳಿಗೆ ಪೂರೈಕೆಯಾಗುವ ಪ್ರಮಾಣ ಕಡಿಮೆಯಾದಾಗ ಪೈಪ್‌ ಒಡೆದಿರುವ ಸಾಧ್ಯತೆ ಬಗ್ಗೆ ತಿಳಿದು ಬರುತ್ತದೆ. ಕೆಲವು ಕಡೆಗಳಲ್ಲಿ ಪೈಪ್‌ ಒಡೆದು ನೀರು ಮೇಲಕ್ಕೆ ಬಂದರೆ, ಹುಲ್ಲು ಪೊದೆಗಳು ಇರುವಲ್ಲಿ ಎಲ್ಲಿ ಒಡೆದಿದೆ ಎಂದು ಪತ್ತೆ ಹೆಚ್ಚುವಾಗ ದಿನಗಳು ಕಳೆದಿರುತ್ತದೆ. ಬಳಿಕ ನೆಲವನ್ನು ಅಗೆದು ಪೈಪ್‌ ದುರಸ್ತಿ ಮಾಡುವಾಗ ಕನಿಷ್ಠ 3-4 ದಿನ ಳು ಬೇಕಾಗುತ್ತವೆ. ಆದ್ದರಿಂದ ಎಲ್ಲಿ ಬಿರುಕು ಉಂಟಾಗಿದೆ ಎಂದು ನಿಖರವಾಗಿ ಪತ್ತೆ ಹಚ್ಚುವ ಆಧು ನಿಕ ಸಾಧನವನ್ನು ಅಳವಡಿಸುವ ಆವಶ್ಯಕತೆಯಿದೆ ಎನ್ನುವ ಸಾರ್ವಜನಿಕರ ಅಭಿಪ್ರಾಯ.

ಕಣ್ಣೂರು ಭಾಗದಲ್ಲಿ ಹೆಚ್ಚು
ತುಂಬೆಯಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಾಗುವ ಮುಖ್ಯ ಕೊಳವೆ ಅಡ್ಯಾರ್‌-ಕಣ್ಣೂರು ಭಾಗದಲ್ಲಿ ಒಡೆಯುವುದು ಸಾಮಾನ್ಯವಾಗಿದೆ. ಪ್ರತಿ ವರ್ಷ ಕನಿಷ್ಠ ಒಂದೆರಡು ಬಾರಿಯಾದರೂ ಒಡೆಯುತ್ತಲೇ ಇರುತ್ತದೆ. ಒಂದೊಂದು ವರ್ಷ ಒಂದೊಂದು ಕಡೆಯಲ್ಲಿ ಇಲ್ಲಿ ಪೈಪ್‌ ಬಿರುಕು ಕಂಡು ಬರುತ್ತದೆ. ಕೆಲವಾರು ವರ್ಷಗಳ ಹಿಂದೆ ಇಲ್ಲಿ ಪೈಪ್‌ ಮೇಲ್ಮಟ್ಟದಲ್ಲಿ ಕಾಣುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಅಭಿವೃದ್ಧಿಯ ನೆಪದಲ್ಲಿ ಗದ್ದೆಗಳಿಗೆ ಮಣ್ಣು ತುಂಬಿಸಿದ ಪರಿಣಾಮ ಪೈಪ್‌ ಮಣ್ಣಿನಡಿಯಲ್ಲಿ ಹುದುಗಿ ಹೋಗಿದೆ. ಇದರಿಂದ ಒತ್ತಡ ಬಿದ್ದು ಪೈಪ್‌ಗಳು ಒಡೆಯುತ್ತಿದೆ.

ನೀರಿನ ಒತಡದಿಂದಾಗಿ ¤ ಪೈಪ್‌ ಬಿರುಕು ನಗರದ ಅಲ್ಲಲ್ಲಿ ನೀರಿನ ಪೈಪ್‌ ಒಡೆಯುತ್ತಿರುವುದು ಗಮನಕ್ಕೆ ಬಂದಿದೆ. ಒಡೆದಂತಹ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಬಹುತೇಕ ಮುಖ್ಯ ಕೊಳವೆಗಳು ಹಳೆಯದಾಗಿದ್ದು, ನೀರಿನ ಒತ್ತಡದ ಕಾರಣದಿಂದ \ ಪೈಪ್‌ ಬಿರುಕು ಬಿಡುತ್ತಿದೆ. ಪರ್ಯಾಯ ವ್ಯವಸ್ಥೆಗೆ ಸಂಬಂಧಿಸಿದಂತೆ ಇರುವ ಅವಕಾಶಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.
-ಜಯಾನಂದ ಅಂಚನ್‌, ಮೇಯರ್‌

ಇತ್ತೀಚೆಗೆ ಪೈಪ್‌ ಒಡೆದ ಸ್ಥಳಗಳು
ಜ. 21-ಕಣ್ಣೂರು ಶೆಲ್‌ ಪೆಟ್ರೋಲ್‌ ಪಂಪ್‌ ಬಳಿ
ಡಿ. 12- ಕೂಳೂರು ಸೇತುವೆ ಬಳಿ

ಡಿ. 6- ಗರೋಡಿ ರೋಹನ್‌ ಸಿಟಿ ಬಳಿ
ಅ. 12- ಕುಂಟಿಕಾನ ಮತ್ತು ಕೂಳೂರು ಸೇತುವೆ ಬಳಿ

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.