Mangaluru University ಪಿಜಿ ಪ್ರವೇಶಕ್ಕೆ “ನೀಟ್‌’ ಮಾದರಿ “ಸಿಯುಇಟಿ’!

"ಯುಜಿಸಿ ಸಾಮಾನ್ಯ ಪ್ರವೇಶ' ಪರೀಕ್ಷೆಗೆ ವಿ.ವಿ. ಒಲವು

Team Udayavani, Oct 9, 2023, 7:15 AM IST

Mangaluru University ಪಿಜಿ ಪ್ರವೇಶಕ್ಕೆ “ನೀಟ್‌’ ಮಾದರಿ “ಸಿಯುಇಟಿ’!

ಮಂಗಳೂರು: ವೈದ್ಯಕೀಯ ಶಿಕ್ಷಣಕ್ಕೆ “ನೀಟ್‌’ ಪ್ರವೇಶ ಪರೀಕ್ಷೆ ಇದ್ದ ಸ್ವರೂಪದಲ್ಲಿಯೇ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತ ಕೋತ್ತರದ ವಿವಿಧ ವಿಭಾಗಗಳ ಪ್ರವೇಶಕ್ಕೂ ಯುಜಿಸಿ (ವಿ.ವಿ. ಧನಸಹಾಯ ಆಯೋಗ) ರಾಷ್ಟ್ರೀಯ ಮಟ್ಟದ “ವಿಶ್ವವಿದ್ಯಾನಿಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಪಿಜಿ) ಜಾರಿಗೊಳಿಸುವ ಸಂಬಂಧ ಮಹತ್ವದ ಚರ್ಚೆ ಆರಂಭವಾಗಿದೆ.

ಸಿಯುಇಟಿ ಅನ್ವಯವಾದರೆ ದೇಶದ ಯಾವುದೇ ಭಾಗದ ವಿದ್ಯಾರ್ಥಿ ಸ್ನಾತಕೋತ್ತರ ಪ್ರವೇಶ ಅಪೇಕ್ಷಿಸಿದರೆ ಪರೀಕ್ಷೆ ಬರೆದು ಮಂಗಳೂರು ವಿ.ವಿ.ಯಲ್ಲಿ ಆಯ್ದ ಸೀಟು ಪಡೆಯಬಹುದು.

ಮಂಗಳೂರು ವಿ.ವಿ.ಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯಗಳಡಿಯ ಯೋಗ ವಿಜ್ಞಾನ, ಗಣಿತಶಾಸ್ತ್ರ ಹಾಗೂ ಎಲೆಕ್ಟ್ರಾನಿಕ್ಸ್‌ ಅಧ್ಯಯನ ಮಂಡಳಿಯು ಸಿಯುಇಟಿ ಮೂಲಕ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ವಿ.ವಿ.ಗೆ ಪ್ರಸ್ತಾವನೆ ಸಲ್ಲಿಸಿದೆ.

ದೇಶದ ಯಾವುದೇ ಭಾಗದ ವಿದ್ಯಾರ್ಥಿ ಪರೀಕ್ಷೆ ಬರೆದು ಮಂಗಳೂರು ವಿ.ವಿ.ಯ ಈ ಕೋರ್ಸ್‌ಗಳನ್ನು ಕಲಿಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಲಾಗಿದೆ.ಇದರ ಮುಂದುವರಿದ ಭಾಗವಾಗಿ ವಿವಿಯ ಕಲಾ, ವಾಣಿಜ್ಯ, ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ನಿಕಾಯದ ಡೀನ್‌ ಹಾಗೂ ಇತರ ಪರಿಣತರನ್ನು ಒಳಗೊಂಡ ಸಮಿತಿ ರಚಿಸಿ ವಿವಿಯ ಪ್ರಾದೇಶಿಕ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವರದಿ ಸಿದ್ಧಪಡಿಸಿ ಅದರ ಆಧಾರದಂತೆ ಮುಂದಡಿ ಇಡಲು ವಿ.ವಿ. ತೀರ್ಮಾನಿಸಿದೆ.

ಪ್ರವೇಶ ಸ್ವರೂಪ ಹೇಗೆ?
ಮಂಗಳೂರು ವಿ.ವಿ.ಯ ಒಟ್ಟು ಸೀಟುಗಳ ಪೈಕಿ ಶೇ. 70 (ಪರಿಸ್ಥಿತಿಗೆ ಅನುಗುಣವಾಗಿ ಇದರಲ್ಲಿ ಏರಿಕೆ-ಇಳಿಕೆ ಇರಲಿದೆ)ನ್ನು ವಿ.ವಿ. ವ್ಯಾಪ್ತಿಯ ವಿದ್ಯಾರ್ಥಿಗಳನ್ನು ನೀಡಲಾಗುತ್ತದೆ. ಖಾಲಿ ಇರುವ ಸೀಟು ಮಾತ್ರ ದೇಶದ ವಿವಿಧ ಭಾಗದ ವಿದ್ಯಾರ್ಥಿಗಳಿಗೆ ಮೀಸಲು.

ಲಾಭವೇನು?
ಮಂಗಳೂರು ವಿ.ವಿ.ಯ ಸ್ನಾತಕೋತ್ತರದ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳ ಕೊರತೆ ಇದೆ. ಕೆಲವು ಕೋರ್ಸ್‌ಗಳಲ್ಲಿ ಬೆರಳೆಣಿಕೆ ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಸಿಯುಇಟಿ ಪರೀಕ್ಷೆ ಮೂಲಕ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಕೂಲ ಕಲ್ಪಿಸಿದರೆ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಲಿದೆ.

ಬೇಡಿಕೆ ಸೀಟ್‌ ಮಾತ್ರ ಭರ್ತಿ!
ಈ ಮಧ್ಯೆ ಸಾರ್ವತ್ರಿಕವಾಗಿ ವಿದ್ಯಾರ್ಥಿಗಳ ಪ್ರವೇಶದ ಬದಲು “ಪೇಮೆಂಟ್‌ ಸೀಟ್‌’ನಲ್ಲಿ ಮಾತ್ರ ಅವಕಾಶ ನೀಡಿದರೆ ಉತ್ತಮ ಎಂಬ ಅಭಿಪ್ರಾಯವೂ ಕೆಲವರಿಂದ ಕೇಳಿಬಂದಿದೆ. ಮಂಗಳೂರು ವಿ.ವಿ.ಯ ಕೆಲವು ವಿಭಾಗದಲ್ಲಿ ಮೆರಿಟ್‌ ಸೀಟ್‌ ಭರ್ತಿಯಾದ ಬಳಿಕ ಬೇಡಿಕೆಯ ಆಧಾರದಲ್ಲಿ “ಪೇಮೆಂಟ್‌ ಸೀಟ್‌’ ಭರ್ತಿ ಮಾಡಲಾಗುತ್ತದೆ. ಈ ಪೇಮೆಂಟ್‌ ಬ್ಯಾಚ್‌ ಅನ್ನು ಮಾತ್ರ ಯುಜಿಸಿ ಮುಖಾಂತರ ಮಾಡುವುದು ಉತ್ತಮ ಎಂಬ ಬಗ್ಗೆಯೂ ಕೆಲವರು ಸಲಹೆ ನೀಡಿದ್ದಾರೆ.

ಏನಿದು “ಕೇಂದ್ರೀಕೃತ ಪ್ರವೇಶ’?
ಪ್ರತೀ ವಿ.ವಿ.ಗಳು ಮೊದಲು ತಮ್ಮ ಪದವಿ-ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶವನ್ನು ತಮ್ಮ ವ್ಯಾಪ್ತಿಯಲ್ಲಿಯೇ ತೆಗೆದುಕೊಳ್ಳಬೇಕಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವಿಧಾನವನ್ನು ಏಕೀಕರಿಸಲು ಶಿಕ್ಷಣ ಸಚಿವಾಲಯವು ಯುಜಿಸಿಯೊಂದಿಗೆ ಸೇರಿ “ಸಾಮಾನ್ಯ ವಿಶ್ವವಿದ್ಯಾನಿಲಯಗಳ ಪ್ರವೇಶ ಪರೀಕ್ಷೆ’ (ಸಿಯುಇಟಿ)ಯನ್ನು ಈಗಾಗಲೇ ದೇಶವ್ಯಾಪಿ ಪರಿಚಯಿಸಿದೆ. ಈ ಮೂಲಕ ದೇಶದ ಕೇಂದ್ರೀಯ ಹಾಗೂ ಕೆಲವು ವಿ.ವಿ.ಗಳ ಕೋರ್ಸ್‌ಗಳಿಗೆ ಈ ಪರೀಕ್ಷೆ ಬರೆದು ಪ್ರವೇಶ ಪಡೆಯಬೇಕು. ದೇಶದ ವಿವಿಧ ವಿ.ವಿ.ಗಳು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು ಇನ್ನೂ ಹಲವು ವಿ.ವಿ.ಗಳು ಸಹಭಾಗಿತ್ವದ ಆಶಯದಲ್ಲಿವೆ. ಮಂಗಳೂರು ವಿ.ವಿ.ಯೂ ಸಹಭಾಗಿತ್ವ ಪಡೆಯುವ ಆಶಯ ತೋರಿದ್ದು ನಿರ್ಧಾರ ಇನ್ನಷ್ಟೇ ಆಗಬೇಕಿದೆ.

ಯುಜಿಸಿಯು ಪ್ರತೀ ವರ್ಷ ವಿ.ವಿ.ಗಳಿಗೆ ಸಿಯುಇಟಿ ನಡೆಸುತ್ತದೆ. ಅರ್ಹ ವಿ.ವಿ.ಗಳು ಯುಜಿಸಿಯ ಈ ಪ್ರಕ್ರಿಯೆಗೆ ಸೇರಬಹುದು. ಮಂಗಳೂರು ವಿ.ವಿ.ಯೂ ಸೇರಿದರೆ ದೇಶದ ಯಾವುದೇ ಭಾಗದ ವಿದ್ಯಾರ್ಥಿ ಕೂಡ ಇಲ್ಲಿ ಕಲಿಯಲು ಅವಕಾಶ ಇರುತ್ತದೆ. ಅಂತಿಮ ತೀರ್ಮಾನ ಇನ್ನಷ್ಟೇ ಆಗಬೇಕಿದೆ.
– ಪ್ರೊ| ಜಯರಾಜ್‌ ಅಮೀನ್‌,
ಕುಲಪತಿ, ಮಂಗಳೂರು ವಿಶ್ವವಿದ್ಯಾನಿಲಯ

-ದಿನೇಶ್‌ ಇರಾ

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.