ಮಂಗಳೂರು ವಿ.ವಿ. ಕಾಲೇಜುಗಳಲ್ಲಿ ಗಡಿಬಿಡಿ!
Team Udayavani, Apr 15, 2022, 6:55 AM IST
ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯಡಿ ಪದವಿ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆ ಎ. 18ರಂದು ಆರಂಭವಾಗಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಕೊನೆಯ ಹಂತದಲ್ಲಿ ಗಡಿಬಿಡಿ ಆರಂಭವಾಗಿದೆ.
ಎನ್ಇಪಿ ಸೆಮಿಸ್ಟರ್ ಪರೀಕ್ಷೆ ಇದೇ ಮೊದಲ ಬಾರಿಗೆ ನಡೆಯುವುದರಿಂದ ಯುಯುಸಿಎಂಎಸ್ ಸಾಫ್ಟ್ವೇರ್ನ ಸರ್ವರ್ ಸಮಸ್ಯೆ, ವಿದ್ಯಾರ್ಥಿಗಳ ದಾಖಲೆಗಳು ಅಪ್ಲೋಡ್ ಆಗದಿರುವುದು, ಪರೀಕ್ಷಾ ಶುಲ್ಕ ಪಾವತಿಯಲ್ಲಿ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಒತ್ತಡ ಸೃಷ್ಟಿಯಾಗಿದೆ. ಪರೀಕ್ಷೆ ಎದುರಿಸಲು ಕೊನೆಯ ಹಂತದಲ್ಲಿ ತಯಾರಿ ಮಾಡಿರುವುದೇ ಈ ಸಮಸ್ಯೆಗೆ ಕಾರಣ ಎನ್ನಲಾಗಿದೆ.
ಕೈಕೊಟ್ಟ ಸರ್ವರ್! :
ಈ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದಾಗಲೇ ಕಾಲೇಜಿನಿಂದ “ಪ್ರವೇಶ ಪತ್ರ’ ಸಿಗುತ್ತಿತ್ತು. ಎನ್ಇಪಿ ಜಾರಿಯ ಬಳಿಕ ವಿದ್ಯಾರ್ಥಿಗಳು ಆನ್ಲೈನ್ ಮೂಲಕವೇ ಪಾವತಿಸಬೇಕು. ಬಳಿಕ ಕಾಲೇಜಿನವರು ಆತನ ಹಾಜರಾತಿ ದೃಢೀಕರಣ ಹಾಗೂ ಆಂತರಿಕ ಅಂಕಗಳನ್ನು ಯುಯುಸಿಎಂಎಸ್ ಸಾಫ್ಟ್ವೇರ್ಗೆ ಅಪ್ಲೋಡ್ ಮಾಡಬೇಕಿದ್ದು ಬಳಿಕ “ಪ್ರವೇಶ ಪತ್ರ’ ಲಭಿಸುತ್ತದೆ. ಪರೀಕ್ಷಾ ದಿನಾಂಕ ಹತ್ತಿರವಾಗುತ್ತಿರುವ ಕಾರಣ ಎಲ್ಲ ವಿ.ವಿ./ಕಾಲೇಜುಗಳಲ್ಲಿಯೂ ಈ ಪ್ರಕ್ರಿಯೆ ನಡೆಯುತ್ತಿರುವುದರಿಂದ ಸರ್ವರ್ ಸಮಸ್ಯೆ ತಲೆದೋರುತ್ತಿದೆ. ಕೆಲವು ವಿದ್ಯಾರ್ಥಿಗಳ ದಾಖಲೆ ಅಪ್ಲೋಡ್ ಇನ್ನೂ ಆಗಿಲ್ಲ. ಅದಾಗದೆ ಪ್ರವೇಶ ಪತ್ರ ಸಿಗುವುದು ಕಷ್ಟ.
ಸಾಮಾನ್ಯವಾಗಿ ಮೊದಲ ಸೆಮಿಸ್ಟರ್ ಪರೀಕ್ಷೆ ನವೆಂಬರ್ನಲ್ಲಿ ನಡೆಯುತ್ತದೆ. ಆದರೆ ಕೊರೊನಾ ಸಂದರ್ಭ ಪರೀಕ್ಷೆ ವೇಳಾಪಟ್ಟಿಯಲ್ಲಿ ಆದ ಬದಲಾವಣೆಯ ಪರಿಣಾಮ ಈ ಪರೀಕ್ಷೆಯ ಮೇಲೂ ಆಗಿದೆ. ಕೆಲವೇ ದಿನಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಫಲಿತಾಂಶ ಬಂದು ಅವರು ಪದವಿ ಸೇರ್ಪಡೆಗೆ ಬರುವುದರಿಂದ ಶೀಘ್ರದಲ್ಲಿ ಮತ್ತೂಂದು ಒತ್ತಡ ಸೃಷ್ಟಿಯಾಗಲಿದೆ.
ಆನ್ಲೈನ್ ಮೂಲಕ ಪಾವತಿಗೆ ವಿನಾಯಿತಿ? :
ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಒಟ್ಟು 31,358 ವಿದ್ಯಾರ್ಥಿಗಳು ಎನ್ಇಪಿ ಮೊದಲ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಆರಂಭಕ್ಕೆ ಕೆಲವು ಹಿಂದೆಯಷ್ಟೇ ವಿದ್ಯಾರ್ಥಿಗಳ ದಾಖಲಾತಿ ಸಲ್ಲಿಕೆ, ಪದವಿ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಸರಣಿ ರಜೆ ಇತ್ಯಾದಿಗಳಿಂದಾಗಿ ಕೊನೆಯ ಹಂತದಲ್ಲಿ ಕಾಲೇಜುಗಳಲ್ಲಿ ಗಡಿಬಿಡಿ ಆರಂಭವಾಗಿದೆ. ಪರೀಕ್ಷಾ ಶುಲ್ಕವನ್ನು ಆನ್ಲೈನ್ ಮೂಲಕವೇ ನೀಡಬೇಕೆಂಬ ನಿಯಮದಿಂದಾಗಿ ಸಮಸ್ಯೆಯಾಗುತ್ತಿರುವುದನ್ನು ಮನಗಂಡ ಮಂಗಳೂರು ವಿ.ವಿ. ಈ ಬಾರಿ ಹಿಂದಿನಂತೆಯೇ ಪರೀಕ್ಷಾ ಶುಲ್ಕವನ್ನು ಪಡೆದು ಬಳಿಕ ಆನ್ಲೈನ್ ಅಪ್ಡೇಟ್ ಮಾಡಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ. ಈ ಮೂಲಕ ಯಾವುದೇ ವಿದ್ಯಾರ್ಥಿಗೂ ಪರೀಕ್ಷೆ ಬರೆಯಲು ಸಮಸ್ಯೆಯಾಗದಂತೆ ವಿ.ವಿ. ಕ್ರಮ ಕ್ರಗೊಳ್ಳಲಿದೆ.
ಈಗಾಗಲೇ ಪದವಿ ಕಾಲೇಜಿನ ಪರೀಕ್ಷೆ ನಡೆಯುತ್ತಿದೆ. ಈ ಮಧ್ಯೆ ಎನ್ಇಪಿಯ ಮೊದಲ ಸೆಮಿಸ್ಟರ್ ಪರೀಕ್ಷೆಗೆ ಸರ್ವ ಸಿದ್ಧತೆ ನಡೆಸಲಾಗಿದೆ. ಸರ್ವರ್ ಸಮಸ್ಯೆಯಿಂದ ಕೊನೆಯ ಹಂತದಲ್ಲಿ ಒತ್ತಡ ಎದುರಾಗಿದ್ದರೂ ಎಲ್ಲ ಕಾಲೇಜಿನಲ್ಲಿಯೂ ಸೂಕ್ತವಾಗಿ ಸ್ಪಂದಿಸಿ ಸಾಂಗವಾಗಿ ನಡೆಸಲು ವ್ಯವಸ್ಥೆ ಮಾಡಲಾಗಿದೆ.– ಪ್ರೊ| ಪಿ.ಎಲ್. ಧರ್ಮ, ಕುಲಸಚಿವರು (ಪರೀಕ್ಷಾಂಗ), ಮಂಗಳೂರು ವಿ.ವಿ.
-ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ