ಉಪ್ಪಿನಂಗಡಿ ಪ್ರಕರಣ: ಪಿಎಫ್‌ಐ , ಎಸ್‌ಡಿಪಿಐ ಪ್ರತಿಭಟನೆ


Team Udayavani, Dec 18, 2021, 5:07 AM IST

Uppinangady-inಉಪ್ಪಿನಂಗಡಿ ಪ್ರಕರಣ: ಪಿಎಫ್‌ಐ , ಎಸ್‌ಡಿಪಿಐ ಪ್ರತಿಭಟನೆcident

ಮಂಗಳೂರು: ಉಪ್ಪಿನಂಗಡಿಯ ಪೊಲೀಸ್‌ ಲಾಠಿ ಚಾರ್ಜ್‌ ಘಟನೆಯನ್ನು ಖಂಡಿಸಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಮತ್ತು ಎಸ್‌ಡಿಪಿಐ ಸಂಘಟನೆಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಎಸ್‌ಪಿ ಕಚೇರಿ ಚಲೋ ನಡೆಸಲು ಸಂಘಟನೆಗಳು ಉದ್ದೇಶಿಸಿದ್ದರೂ ಅದಕ್ಕೆ ಅವಕಾಶ ನೀಡಲಿಲ್ಲ. ಬದಲಾಗಿ ತಾಲೂಕು ಕಚೇರಿ ಎದುರು ಪ್ರತಿಭಟನೆಗೆ ಮಾತ್ರ ನಗರ ಪೊಲೀಸ್‌ ಆಯುಕ್ತರು ಅನುಮತಿ ನೀಡಿದರು. ಆದರೆ ಸಂಘಟನೆಗಳ ಕಾರ್ಯಕರ್ತರು ಹಂಪನಕಟ್ಟೆ ಸಿಗ್ನಲ್‌ ಜಂಕ್ಷನ್‌ ಬಳಿಯಿಂದ ಮೆರವಣಿಗೆ ಯಲ್ಲಿ ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಾ ಕ್ಲಾಕ್‌ಟವರ್‌ ಜಂಕ್ಷನ್‌ ದಾಟಿ ಮುಂದೆ ಸಾಗಿದಾಗ ಪೊಲೀಸರು ಬ್ಯಾರಿಕೇಡ್‌ ಹಾಕಿ ತಡೆದರು.

ಪ್ರತಿಭಟನ ನಿರತ ಮುಖಂಡರ ಜತೆ ದಕ್ಷಿಣ ಉಪ ವಿಭಾಗದ ಎಸಿಪಿ ಪಿ.ಎ. ಹೆಗಡೆ ಮಾತುಕತೆ ನಡೆಸಿ ಎಸ್‌ಪಿ ಕಚೇರಿ ಚಲೋಗೆ ಅವಕಾಶ ಇಲ್ಲ ಎಂದು ತಿಳಿಸಿದರು. ಸಂಘಟನೆಯ ಮುಖಂಡ ಎ.ಕೆ. ಅಶ್ರಫ್‌ ಮತ್ತಿತರರು ಅವಕಾಶಕ್ಕೆ ಆಗ್ರಹಿಸಿ ಅಂಡರ್‌ಪಾಸ್‌ ಬಳಿಯ ಇನ್ನೊಂದು ಬ್ಯಾರಿಕೇಡ್‌ವರೆಗೆ ಸಾಗಿದರು. ಮುಂದೆ ಸಾಗಲು ಅನುಮತಿ ನಿರಾಕರಿಸಿದ್ದರಿಂದ ಅಲ್ಲೇ ಪ್ರತಿಭಟನ ಸಭೆ ನಡೆಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಮತ್ತು ಪಿಎಫ್‌ಐ ರಾಜ್ಯ ಉಪಾಧ್ಯಕ್ಷ ಆಯೂಬ್‌ ಅಗ್ನಾಡಿ ಮಾತನಾಡಿದರು.

ಪೊಲೀಸರು ಪ್ರಕರಣಗಳನ್ನು ನಿಭಾಯಿಸುವಾಗ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಶಾಫಿ ಬೆಳ್ಳಾರೆ ಆರೋಪಿಸಿದರು.

ಆಯೂಬ್‌ ಅಗ್ನಾಡಿ ಮಾತನಾಡಿ, ಲಾಠಿ ಚಾರ್ಜ್‌ ನಡೆಸಿದ ಅಧಿಕಾರಿ ಮತ್ತು ಸಿಬಂದಿಯನ್ನು ಅಮಾನತು ಮಾಡಬೇಕು, ಪ್ರತಿಭಟನಕಾರರ ವಿರುದ್ಧ ದಾಖಲಿಸಿದ ಕೇಸು ಹಿಂಪಡೆ ಯಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಎಸ್ಪಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅಹವಾಲು ಸ್ವೀಕರಿಸಿದರು. ಪತ್ರಕರ್ತರ ಜತೆ ಮಾತನಾಡಿ, 3 ಎಫ್ಐಆರ್‌ ದಾಖಲಿಸಲಾಗಿದ್ದು, 10 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಗುರುತಿಸಲಾಗಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಿ ಸಾಕ್ಷ್ಯಾಧಾರಗಳೊಂದಿಗೆ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿ ತಿಳಿಸಿದರು.

ಇದನ್ನೂ ಓದಿ:ನೆರೆ ಪರಿಹಾರಕ್ಕೆ ಕೇಂದ್ರದಿಂದ ಹೆಚ್ಚು ಹಣ ಬಿಡುಗಡೆ ಮಾಡಿಸಿ : ಎಸ್ ಆರ್ ಪಾಟೀಲ್ ಆಗ್ರಹ

ಉಪ್ಪಿನಂಗಡಿ ಠಾಣೆಯ ಎದುರು ಪ್ರತಿಭಟನೆ ನಡೆಸು ತ್ತಿದ್ದವರನ್ನು ಅಲ್ಲಿಂದ ಚದುರುವಂತೆ ಹಲವು ಬಾರಿ ಮನವಿ ಮಾಡಲಾಗಿತ್ತು. ಸ್ಪಂದಿಸದಿದ್ದಾಗ ಲಾಠಿ ಚಾರ್ಜ್‌ ಮಾಡುವುದು ಅನಿವಾರ್ಯವಾಯಿತು ಎಂದರು.

ಉಪ್ಪಿನಂಗಡಿಯಲ್ಲಿ ಸೆ. 144 ಅನ್ವಯ ನಿರ್ಬಂಧಕಾಜ್ಞೆ ಮುಕ್ತಾಯವಾಗಿದ್ದು, ಮುಂದೆ ಪರಿಸ್ಥಿತಿ ಆಧರಿಸಿ ತೀರ್ಮಾನಿಸಲಾಗುವುದು ಎಂದರು.

ಆಯುಕ್ತ ಎನ್‌. ಶಶಿಕುಮಾರ್‌, ಡಿಸಿಪಿಗಳಾದ ಹರಿರಾಂ ಶಂಕರ್‌, ದಿನೇಶ್‌ ಕುಮಾರ್‌, ಎಸಿಪಿ ರಂಜಿತ್‌ ಬಂಡಾರು ಬಂದೋಬಸ್ತ್ ಕೈಗೊಂಡಿದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.