ಮಂಗಳೂರು : ನಿಲ್ಲಿಸಿದ್ದ ಬಸ್ನಲ್ಲಿ ಹಣ ಕಳವು : ಸಿಸಿ ಕೆಮರಾದಲ್ಲಿ ದೃಶ್ಯ ದಾಖಲು
Team Udayavani, Jun 13, 2022, 9:38 PM IST
ಮಂಗಳೂರು : ನಿಲ್ಲಿಸಿದ್ದ ಬಸ್ನಿಂದ ಹಣ ಕಳವು ಮಾಡಲಾಗಿದೆ ಎನ್ನಲಾದ ಸಿಸಿ ಕೆಮರಾ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಪ್ಪಿನಂಗಡಿ-ಸ್ಟೇಟ್ಬ್ಯಾಂಕ್ ನಡುವೆ ಸಂಚರಿಸುವ ಖಾಸಗಿ ಬಸ್ನ್ನು ಸ್ಟೇಟ್ಬ್ಯಾಂಕ್ನಲ್ಲಿ ನಿಲ್ಲಿಸಿದ ಬಳಿಕ ಚಾಲಕ ಮತ್ತು ನಿರ್ವಾಹಕ ಊಟಕ್ಕೆಂದು ತೆರಳಿದ್ದು ಈ ಸಂದರ್ಭ ಬಸ್ನೊಳಗೆ ಪ್ರವೇಶಿಸಿದ ಓರ್ವ ಬಸ್ನಲ್ಲಿದ್ದ ಹಣ ಕಳವು ಮಾಡಿದ್ದಾನೆನ್ನಲಾಗಿದೆ.
ಈ ವೇಳೆ ಬಸ್ನಲ್ಲಿ ಬೇರೆ ಯಾರೂ ಇರಲಿಲ್ಲ. ಕಳವು ಮಾಡಲಾಗಿದೆ ಎನ್ನಲಾದ ದೃಶ್ಯ ಬಸ್ನಲ್ಲಿದ್ದ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಬಸ್ ನಿರ್ವಾಹಕ ಬ್ಯಾಗ್ನಲ್ಲಿ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳ ದೋಚಿದ್ದಾನೆನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಕೇರಳ ಸಿಎಂ ಭಾಗವಹಿಸುವ ಸಭೆ-ಸಮಾರಂಭಗಳಲ್ಲಿ ಕಪ್ಪು ಬಟ್ಟೆ, ಕಪ್ಪು ಮಾಸ್ಕ್ ನಿಷೇಧ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ