ಮಾಣಿ-ಮೈಸೂರು ರಸ್ತೆ: ಪ್ರಯಾಣಿಕರಿಗೆ ಹಲಸಿನ ಕಾಣಿಕೆ!

ಯುವಕ ಮಂಡಲದಿಂದ ಮಾದರಿ ಕಾರ್ಯ; ಪ್ರಶಂಸೆ ವ್ಯಕ್ತಪಡಿಸಿದ ತಹಶೀಲ್ದಾರ್‌

Team Udayavani, Jul 29, 2019, 5:09 AM IST

2807SHIVAPRASAD1

 ವಿಶೇಷ ವರದಿ- ಕನಕಮಜಲು: ಇತ್ತೀಚಿನ ದಿನಗಳಲ್ಲಿ ಯುವಜನತೆ, ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಊರುಗಳಲ್ಲಿ ಒಂದೇ ಅಭಿರುಚಿಯಿರುವ ಸಮಾನ ಮನಸ್ಕ ಗುಂಪುಗಳನ್ನು ಕಟ್ಟಿಕೊಂಡು ಕಲೆ ಹಾಗೂ ಕ್ರೀಡೆ ಕ್ಲಬ್‌, ಯುವಕ ಮಂಡಲ, ಸಂಘ ಇತ್ಯಾದಿಗಳನ್ನು ರಚಿಸುತ್ತಿದ್ದಾರೆ. ಕನಕಮಜಲು ಯುವಕ ಮಂಡಲ ಸಮಾಜಮುಖೀ ಕಾರ್ಯ ಗಳಲ್ಲಿ ವಿಭಿನ್ನ ಚಿಂತನೆಯ ಮೂಲಕ ಹೆಚ್ಚು ಪ್ರಚಲಿತವಾಗಿದೆ. ಅವರು ಮಾಣಿ- ಮೈಸೂರು ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಉಚಿತ ಹಲಸಿನ ಹಣ್ಣು ನೀಡಿ ಗಮನ ಸೆಳೆದಿದ್ದಾರೆ.

ಮಳೆಗಾಲದಲ್ಲಿ ಕೃಷಿಕರ ತೋಟಗಳಲ್ಲಿ ಹಲಸಿನ ಹಣ್ಣು ಹೆಚ್ಚಾಗಿ ಬೆಳೆಯುತ್ತದೆ. ಕೆಲವೆಡೆ ಜನರು ಬಳಸದೆ ಉಪಯೋಗ ಶೂನ್ಯವಾಗುತ್ತದೆ. ಹೆಚ್ಚಿನ ತೋಟಗಳಲ್ಲಿ ಹಲಸಿನ ಹಣ್ಣು ಮಂಗ ಹಾಗೂ ಇತರ ಪ್ರಾಣಿ ಪಕ್ಷಿಗಳಿಗೆ ಆಹಾರವಾಗುತ್ತಿತ್ತು. ಅಧಿಕ ಪ್ರಮಾಣದಲ್ಲಿ ಹಣ್ಣುಗಳು ಕೊಳೆತು ಹೋಗುತ್ತಿದ್ದವು. ಇದನ್ನು ಗಮನಿಸಿದ ಯುವಕ ಮಂಡಲದ ಸದಸ್ಯರು ಹಲಸಿನ ಹಣ್ಣುಗಳು ಜನರಿಗೆ ಉಪಯೋಗಕ್ಕೆ ಸಿಗಲಿ ಎನ್ನುವ ದೃಷ್ಟಿಯಲ್ಲಿ ವಿತರಣೆ ಮಾಡಿದ್ದಾರೆ. ಜು. 21 ಹಾಗೂ ಜು. 25 ರಂದು ಹಲಸಿನ ಹಣ್ಣುಗಳನ್ನು ಸಂಗ್ರಹಿಸಿ ಪ್ರಯಾಣಿಕರಿಗೆ ಉಚಿತವಾಗಿ ನೀಡಿದ್ದಾರೆ.

ಕ್ಷಣಮಾತ್ರದಲ್ಲಿ ಹಣ್ಣುಗಳು ಬಿಕರಿ
ಹಲಸಿನ ಹಣ್ಣುಗಳನ್ನು ಗ್ರಾಮದ ತೋಟಗಳಿಂದ ಸಂಗ್ರಹಿಸಿ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಇಡುತ್ತಿದ್ದಂತೆಯೇ ಪ್ರಯಾಣಿಕರ ಗಮನ ಸೆಳೆಯಿತು. ವ್ಯಾಪಕ ಸಂಖ್ಯೆಯಲ್ಲಿ ಪ್ರಾಯಣಿಕರು ತಮ್ಮ ವಾಹನಗಳನ್ನು ನಿಲ್ಲಿಸಿ ಹಲಸಿನ ಹಣ್ಣುಗಳನ್ನು ತಮ್ಮ ಗಾಡಿಗಳಿಗೆ ಹಾಕಿ ನಗುಮುಖದೊಂದಿಗೆ ಮುಂದೆ ಸಾಗುತ್ತಿದ್ದರು. ಕೆಲವೇ ಗಂಟೆಗಳಲ್ಲಿ ಸಂಗ್ರಹಿಸಿಟ್ಟ ಹಣ್ಣುಗಳೆಲ್ಲವೂ ಬಿಕರಿಯಾದವು. ಎರಡನೇ ಸಲವೂ ಮುಗಿದು ಮೂರನೇ ಬಾರಿ ತರಲಾಯಿತು. ಜನರ ಮುಖದಲ್ಲಿ ತೃಪ್ತಿಯ ಭಾವವಿತ್ತು ಎಂದು ಕನಕಮಜಲು ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್‌ ಕಾರಿಂಜ ಹೇಳಿದ್ದಾರೆ.

ಹಲಸಿನ ಹಣ್ಣು ಪ್ರಿಯರೆ
ಕನಕಮಜಲಿನ ರಸ್ತೆ ಬದಿಯಲ್ಲಿ ಹಲಸಿನ ಹಣ್ಣು ಸಂಗ್ರಹಿಸಿದ ಕಾರು ನಿಲ್ಲಿಸಿ, ಅದಕ್ಕೆ ಬ್ಯಾನರ್‌ ಹಾಕಲಾಗಿತ್ತು. ಹಲಸಿನ ಹಣ್ಣು ಪ್ರಿಯರೆ ಉಚಿತವಾಗಿ ಹಲಸಿನ ಹಣ್ಣು ಕೊಂಡು ಹೋಗಿ ಎಂದು ಆ ಬ್ಯಾನರಲ್ಲಿ ಬರೆಯಲಾಗಿತ್ತು. ಇದನ್ನು ಗಮನಿಸಿದ ಪ್ರಯಾಣಿಕರು ಹಣ್ಣು ಕೊಂಡೊಯ್ದರು.

ಜಾಲತಾಣದಲ್ಲಿ ಅನುಭವ ಹಂಚಿಕೆ
ಕನಕಮಜಲು ಗ್ರಾಮದಾದ್ಯಂತ ಹಲಸಿನ ಹಣ್ಣು ಸಂಗ್ರಹಿಸಿ ಉಚಿತವಾಗಿ ನೀಡುವುದರೊಂದಿಗೆ ಪ್ರಯಾಣಿಕರು ಹಲಸಿನ ಹಣ್ಣು ತಿಂದ ಅನುಭÊ ಹಂಚಿಕೊಳ್ಳಲು ವಾಟ್ಸ್‌ ಆ್ಯಪ್‌ ಸಂಖ್ಯೆ ಕೊಡಲಾಗಿತ್ತು. ಹೆಚ್ಚಿನವರು ಫೋಟೋ ಗಳನ್ನು ಕಳಿಸುವ ಮೂಲಕ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ ಎಂದು ಯುವಕ ಮಂಡಲದವರು ಹೇಳಿದ್ದಾರೆ.

ತಹಶೀಲ್ದಾರ್‌ ಭೇಟಿ
ಎರಡು ಬಾರಿ ಹಲಸಿನ ಹಣ್ಣು ರಸ್ತೆ ಬದಿಯಲ್ಲಿ ಸಂಗ್ರಹಿಸಿಟ್ಟು ಪ್ರಯಾಣಿಕರಿಗೆ ಉಚಿತವಾಗಿ ನೀಡಿದ ಯುವಕ ಮಂಡಲದ ಈ ಕಾರ್ಯ ಶ್ಲಾಘನೆಗೆ ಪಾತ್ರವಾಗಿದೆ. ಸುದ್ದಿ ತಿಳಿದ ಸುಳ್ಯ ತಹಶೀಲ್ದಾರ್‌ ಕುಂಞಿ ಅಹಮ್ಮದ್‌ ಅವರು ಜು. 25ರಂದು ಸ್ಥಳಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

 ಸಂತೃಪ್ತ ಭಾವ ನಮಗಿದೆ
ಗ್ರಾಮೀಣ ಪ್ರದೇಶಗಳಲ್ಲಿ ಹಲಸಿನ ಹಣ್ಣುಗಳು ಅಧಿಕವಾಗಿ ಕೊಳೆತು ಹಾಳಾಗುತ್ತಿದ್ದವು. ಗ್ರಾಮಾದ್ಯಂತ ಇದ್ದ ಹಲಸಿನ ಹಣ್ಣುಗಳನ್ನು ಸಂಗ್ರಹಿಸಿ ಮಾಣಿ-ಮೈಸೂರು ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಉಚಿತವಾಗಿ ನೀಡಲಾಯಿತು. ಅವರು ಅದನ್ನು ತಿಂದ ಸವಿ ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಲು ವಾಟ್ಸ್‌ ಆ್ಯಪ್‌ ಸಂಖ್ಯೆ ಕೊಟ್ಟಿದ್ದೇವೆ. ಸಂತೃಪ್ತ ಭಾವ ನಮಗಿದೆ.
– ಜಯಪ್ರಸಾದ್‌ ಕಾರಿಂಜ
ಅಧ್ಯಕ್ಷರು, ಕನಕಮಜಲು
ಯುವಕ ಮಂಡಲ

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.