3 ವರ್ಷವಾದರೂ ರಸ್ತೆಗೆ ಚರಂಡಿ ನಿರ್ಮಾಣವಾಗಿಲ್ಲ


Team Udayavani, Jun 23, 2017, 5:30 PM IST

2206rjh2.jpg

ಪುತ್ತೂರು: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಮೂರು ವರ್ಷಗಳಾಗುತ್ತಾ ಬಂದರೂ, ಚರಂಡಿ ಕಾಮಗಾರಿ ಮಾತ್ರ ಇನ್ನೂ ಆರಂಭವಾಗುವ ಲಕ್ಷಣವಿಲ್ಲ. 

ಪುತ್ತೂರು-ಸುಳ್ಯ ಭಾಗದ ರಸ್ತೆಯ ಕಾಮಗಾರಿ ತೆಗೆದುಕೊಂಡಿರುವವರ ನಿರ್ವ ಹಣೆಯ ಹೊಣೆ 2018 ರ ಮಾರ್ಚ್‌ ನಲ್ಲಿ ಮುಗಿಯುತ್ತಿದೆ. ಆದರಿನ್ನೂ ಚರಂಡಿ ನಿರ್ಮಿಸುವ ಆಲೋಚನೆಯೇ ಕಂಡುಬರುತ್ತಿಲ್ಲ. ವಿಚಿತ್ರವೆಂದರೆ, ಇದೇ ಹೆದ್ದಾರಿಯ ಮೈಸೂರು-ಸಂಪಾಜೆ ಮಾರ್ಗದಲ್ಲಿ ಚರಂಡಿ ಸಹಿತ ರಸ್ತೆಯನ್ನು ನಿರ್ಮಿಸಲಾಗಿದೆ. ಅದೇ ನಿಯಮ ಪುತ್ತೂರು-ಸುಳ್ಯ ಭಾಗಕ್ಕೆ ಮತ್ತು ಗುತ್ತಿಗೆದಾರರಿಗೆ ಏಕೆ ಅನ್ವಯವಾಗುತ್ತಿಲ್ಲ ಎಂಬುದು ಸಾರ್ವಜನಿಕರ ಪ್ರಶ್ನೆ. 

ಹೆದ್ದಾರಿಯ ಪುತ್ತೂರಿನಿಂದ -ಸುಳ್ಯ ಮಧ್ಯೆ ಸುಮಾರು 2012 ನೇ ಇಸವಿಯಲ್ಲಿ ಕಾಮಗಾರಿ ಆರಂಭಿಸಲಾಗಿದ್ದು, ಕಾವು ತನಕ 2014 – 2015ರಲ್ಲಿ ಪೂರ್ತಿಗೊಂಡಿದೆ. ಸುಳ್ಯ ತಾಲೂಕು ಭಾಗದಲ್ಲಿ 2016 ನೇ ಸಾಲಿನಲ್ಲಿ ಕಾಮಗಾರಿ ನಡೆಯಿತು. ಆದರೆ ಈ ಭಾಗಗಳಲ್ಲಿ ಎಲ್ಲಿಯೂ ಚರಂಡಿ ಕಾಮಗಾರಿ ನಡೆಸಿಲ್ಲ. 

ಚರಂಡಿ ಆಗದಿರುವ ಸಮಸ್ಯೆ ಹೆಚ್ಚಾಗಿ ಮಳೆಗಾಲ ದಲ್ಲಿ ಕಂಡು ಬರುತ್ತಿದೆ. ರಸ್ತೆಯಲ್ಲೇ ಹರಿಯುವ ನೀರು, ಅಲ್ಲಲ್ಲಿ ದೊಡ್ಡ ಗಾತ್ರದ ಹೊಂಡಗಳು, ಕೊಚ್ಚಿ ಹೋಗುತ್ತಿರುವ ರಸ್ತೆಯ ಡಾಮರು, ಅದರ ಸುತ್ತಲೂ ಅಪಾಯ ಸೂಚಿಸುವ ಕಲ್ಲುಗಳು ಕಾಣಸಿಗುತ್ತವೆ. ಸಾವಿರಾರು ವಾಹನಗಳು ಸಂಚರಿಸುವ ರಸ್ತೆಯಲ್ಲಿ ಇದೇ ಕಾರಣದಿಂದ ಟ್ರಾಫಿಕ್‌ ಜಾಮ್‌ ನಂಥ ಸಮಸ್ಯೆಯೂ ತಲೆದೋರುತ್ತಿದೆ.

ರಸ್ತೆ ಕಾಮಗಾರಿ ಪೂರ್ಣಗೊಂಡ ಅವಧಿಯಲ್ಲಿ ರಸ್ತೆಯ ಗುಣಮಟ್ಟ ರಕ್ಷಣೆಗಾಗಿ ಚರಂಡಿ ವ್ಯವಸ್ಥೆಯನ್ನೂ ಕಲ್ಪಿಸಬೇಕೆಂಬ ಸಾರ್ವಜನಿಕ ಆಗ್ರಹವೂ ಈಡೇರಿಲ್ಲ. ಸಂಬಂಧಪಟ್ಟ ಗುತ್ತಿಗೆದಾರರನ್ನು ಎಚ್ಚರಿಸಿ, ಚರಂಡಿ ನಿರ್ಮಿಸುವಂತೆ ತಾಕೀತು ಮಾಡಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳೂ ನಿರ್ಲಕ್ಷ್ಯ ತಾಳಿದ್ದಾರೆ ಎಂಬುದು ಸಾರ್ವಜನಿಕರ ಆರೋಪ.

ಜಿಲ್ಲಾಡಳಿತ ವಿಫಲ
ಮಳೆಗಾಲಕ್ಕೆ ಮುನ್ನ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕಿತ್ತು. ಜಿಲ್ಲಾಡಳಿತ ತನ್ನಅಧಿಕಾರಿಗಳಿಗೆ ರಸ್ತೆಗಳಿಗೆ ಸಂಬಂಧಪಟ್ಟಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸು ವಲ್ಲಿಯೂ ವಿಫ‌ಲವಾಗಿದೆ ಎಂಬುದು  ಸಾರ್ವಜನಿಕರ ಟೀಕೆ.

ಹೊಂಡಗಳ ಕಥೆ
ಹೆದ್ದಾರಿಯ ದರ್ಬೆ ವೃತ್ತದ ಬಳಿ, ಮುಕ್ರಂಪಾಡಿಯಲ್ಲಿ ಸೇರಿದಂತೆ ಹಲವೆಡೆ ರಸ್ತೆ ಕಾಮಗಾರಿ ಪೂರ್ಣ ಗೊಂಡ ಅನಂತರದ ಮಳೆಗಾಲದಲ್ಲೇ ಹೊಂಡಗಳು ಕಾಣಿಸಿಕೊಂಡಿವೆ. ಈ ಹೊಂಡಗಳಿಗೆ ವಾಹನಗಳು ಬಿದ್ದು ಅಪಘಾತವೂ ಸಂಭವಿಸುತ್ತಿದೆ. ಮಳೆಗಾಲದ ಆರಂಭದಲ್ಲಿ ಇವುಗಳಿಗೆ ತೇಪೆ ಹಾಕಲಾಗುತ್ತಿದೆ. ಅವೆಲ್ಲವೂ ಒಂದೇ ಮಳೆಗೆ ಕೊಚ್ಚಿ ಹೋಗಿ ಹೊಂಡಗಳು ಮತ್ತೆ ಸೃಷ್ಟಿಯಾಗುತ್ತಿದೆ.

ಸಂಚಾರ ಸುರಕ್ಷಿತವಲ್ಲ
ರಾಜ್ಯ ಹೆದ್ದಾರಿಯ ಕೌಡಿಚ್ಚಾರು ಸಮೀಪ ರಸ್ತೆ ಬದಿ ತೆರೆದ ಬಾವಿಗೆ ತಡೆಬೇಲಿಯೇ ಇಲ್ಲದೆ ಅಪಾಯಕಾರಿಯಾಗಿದೆ. ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ಬಂದರೆ ಎಲ್ಲಾ ಕಡೆ ಕೃತಕ ನೆರೆ ನಿರ್ಮಾಣವಾಗುತ್ತದೆ. ಅಲ್ಲಲ್ಲಿ ಹೊಂಡಗಳೂ ಬಿದ್ದಿವೆ. ಒಟ್ಟಿನಲ್ಲಿ ಹೆದ್ದಾರಿಯಲ್ಲಿ ಮಳೆಗಾಲದ ಸಂಚಾರ ಸುರಕ್ಷಿತವಾಗಿಲ್ಲ.

– ಕಿಶನ್‌ ಕಾವು
ದೈನಂದಿನ ಸವಾರ

ಕಾಮಗಾರಿ ನಡೆಸುತ್ತಾರೆ
2018 ರ ಮಾರ್ಚ್‌ ತಿಂಗಳ ತನಕ ಸಂಬಂಧಪಟ್ಟ ಗುತ್ತಿಗೆದಾರರಿಗೆ ರಸ್ತೆ ನಿರ್ವಹಣೆಯ ಹೊಣೆ ಇದೆ. ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅವರಿಗೆ ಸೂಚಿಸಲಾಗಿದ್ದು, ಕಾಮಗಾರಿ ನಡೆಸಲಿದ್ದಾರೆ. ಹೆಚ್ಚು ತೊಂದರೆಯಾಗುತ್ತಿರುವಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಸರಿಪಡಿಸಿಕೊಡಲಾಗುತ್ತದೆ.

– ಸುಬಾನ್‌
ಎಡಬ್ಲೂಇ, ಕೆಆರ್‌ಡಿಸಿಎಲ್‌ ಪುತ್ತೂರು

–   ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.