ಆಳ್ವಾಸ್‌ನಲ್ಲಿ “ಶಾಜ್ಬೂ  ಚರೋಬಾ’ ಮಣಿಪುರಿ ಯುಗಾದಿ ಆಚರಣೆ


Team Udayavani, Apr 2, 2018, 8:21 AM IST

sa5.jpg

ಮೂಡಬಿದಿರೆ: ಜೀವನದಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ  ಪರಿಹಾರ ಸೂಚಿಸುತ್ತದೆ. ಉತ್ತಮ ಶಿಕ್ಷಣ ಉತ್ತಮ ಭವಿಷ್ಯದ ನಿರ್ಮಾಣಕ್ಕೆ ಬುನಾದಿ ಎಂದು ಮಣಿಪುರದ ಶಿಕ್ಷಣ ಸಚಿವ ರಾಧೆಶ್ಯಾಮ್‌ ಅಭಿಪ್ರಾಯಪಟ್ಟರು.

ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜಿನ ಎಂ.ಬಿ.ಎ. ಸಭಾಂಗಣದಲ್ಲಿ ರವಿವಾರ ಜರಗಿದ “ಶಾಜೂº ಚರೋಬಾ’ ಮಣಿಪುರಿ ಯುಗಾದಿ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣಕ್ಕೂ ಸಾಕ್ಷರತೆಗೂ ವ್ಯತ್ಯಾಸವಿದೆ. ಸಾಕ್ಷರತೆ ಶಿಕ್ಷಣದ ಒಂದು ಸಣ್ಣ ಭಾಗವಷ್ಟೆ. ಅಂಕ ಗಳಿಕೆಯನ್ನು ಬೌದ್ಧಿಕ ಮಾಪಕವಾಗಿ ಪರಿಗಣಿಸಲಾಗುವುದಿಲ್ಲ. ಅಂಕ ಗಳಿಕೆಯಲ್ಲಿ ಮುಂದಿರುವವರು ಜೀವನದಲ್ಲಿ ವಿಫಲರಾದ ಉದಾಹರಣೆಗಳಿವೆ. ಸಂಕಲ್ಪ ರಹಿತ ಶಿಕ್ಷಣದಲ್ಲಿ ಯಾವ ಅರ್ಥವೂ ಇಲ್ಲ. ಹಾಗಾಗಿ ವಿದ್ಯಾಭ್ಯಾಸವು ನಿಶ್ಚಿತ ಗುರಿಯನ್ನು ಹೊಂದಿರುವುದು ಅಗತ್ಯ ಎಂದು ಅವರು ತಿಳಿಸಿದರು.

ನಾನೂ ಒಬ್ಬ ವಿದ್ಯಾರ್ಥಿ
ಮಣಿಪುರ ಮೂಲಭೂತ ಸಮಸ್ಯೆಗಳಿಂದ ಮುಕ್ತವಾಗಿದ್ದರೂ ಹಲವು ಕ್ಷೇತ್ರಗಳಲ್ಲಿ ನಾವಿನ್ನೂ ಸಾಧಿಸುವುದು ಸಾಕಷ್ಟಿದೆ. ಹಾಗಾಗಿ ನಾನು ಭೇಟಿ ನೀಡಿದ ಜಾಗಗಳಲ್ಲಿನ ಉತ್ತಮ ಅಂಶಗಳನ್ನು ನನ್ನ ರಾಜ್ಯದಲ್ಲಿ ಜಾರಿಗೊಳಿಸಲು ಪ್ರಯತ್ನಿಸುತ್ತೇನೆ. ಪ್ರತಿಯೊಬ್ಬ ವ್ಯಕ್ತಿಯಿಂದಲೂ ಒಳ್ಳೆಯ ಆಲೋಚನೆಗಳನ್ನು ಕಲಿಯಲಿಚ್ಛಿಸುತ್ತೇನೆ ಎಂದು ರಾಧೆಶ್ಯಾಮ್‌ ಹೇಳಿದರು.

ಆಳ್ವಾಸ್‌ ಕಾಲೇಜಿನ ಮ್ಯಾನೇಜಿಂಗ್‌ ಟ್ರಸ್ಟಿ ವಿವೇಕ್‌ ಆಳ್ವ ಮಾತನಾಡಿ, ಪೂರ್ವಾಂಚಲ ರಾಜ್ಯಗಳ ಕಲೆ-ಸಂಸ್ಕೃತಿಯ ಮಹತ್ವವನ್ನು ಅರಿತು ನಮ್ಮ ಸಂಸ್ಥೆ ಎರಡು ದಶಕಗಳಿಂದ ಅದರ ಬೆಳವಣಿಗೆಯಲ್ಲಿ ಕೈ ಜೋಡಿಸಿದೆ. ಈ ಕಾರ್ಯಕ್ರಮವೂ ಅದರ ಒಂದು ಸಾಕ್ಷಿರೂಪವಷ್ಟೇ. ಸಣ್ಣಸಣ್ಣ ಹೆಜ್ಜೆಗಳಿಂದ ಆರಂಭವಾದ ನಮ್ಮ ಪ್ರಯತ್ನ ಇಂದು ಮಹತ್ತರ ಬದಲಾವಣೆಗೆ ನಾಂದಿಯಾಗಿದೆ. ಇದು ನಮ್ಮಲ್ಲಿನ ಸಾಮರಸ್ಯವನ್ನು ಹೆಚ್ಚಿಸಲಿದೆ ಎಂದು ಹೇಳಿದರು.

ಪೂರ್ವಾಂಚಲ ವಿಕಾಸ ಸಂಘದ ಸಂಯೋಜಕ ಪುಷ್ಪರಾಜ್‌, ಗೋರಕ್‌ಚಂದ್ರ ಶರ್ಮ, ಉದ್ಯಮಿಗಳಾದ ಅಶ್ವಥ್‌ ಹೆಗ್ಡೆ ಮತ್ತು ಡಾ| ಎಡ್ಮಂಡ್‌, ಆಳ್ವಾಸ್‌ ನ್ಯಾಚುರೋಪತಿ ಆ್ಯಂಡ್‌ ಯೋಗಿಕ್‌ ಸೈನ್ಸ್‌ ಕಾಲೇಜಿನ ಪ್ರಾಂಶುಪಾಲೆ ವನಿತಾ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಣಿಪುರಿ ನೃತ್ಯ, ಡೊಳ್ಳು ಕುಣಿತ, ಸ್ಟಿಕ್‌ ಡಾನ್ಸ್‌, ಪೆನಾ ಮತ್ತು ಲಾಂದೆ ವಾದ್ಯ ಪ್ರದರ್ಶನ, ಸಮೂಹ ಗಾಯನ ಗಮನ ಸೆಳೆದವು. ಯೆನ್‌, ಪನ್ನೀರ್‌, ಎರೊಂಬಾ, ಕಾಂಗೌ, ಚಾಂಫ‌ುಟ್‌, ಹೈ ತೊಂಬಾ, ಸಿಂಜೂ, ಮಂಗಲ ಊಟಿ ಸೇರಿದಂತೆ ಮಣಿಪುರಿ ಖಾದ್ಯಗಳ ಭೋಜನ ಕೂಟವನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.