ಕಡಬ ತಾಲೂಕು ಉದ್ಘಾಟನೆಗೆ ಎದುರಾಗುತ್ತಿದೆ ಹಲವು ವಿಘ್ನ!


Team Udayavani, Aug 25, 2018, 10:09 AM IST

25-agust-2.jpg

ಕಡಬ: ನೂತನ ಕಡಬ ತಾಲೂಕನ್ನು ಅಧಿಕೃತವಾಗಿ ಉದ್ಘಾಟಿಸಲು ದಿನ ನಿಗದಿಪಡಿಸಿದರೂ ಪದೇ ಪದೇ ವಿಘ್ನಗಳು ಎದುರಾಗಿ ಉದ್ಘಾಟನೆ ಸಮಾರಂಭ ರದ್ದಾಗುತ್ತಿರುವುದರಿಂದಾಗಿ ತಾಲೂಕು ಅನುಷ್ಠಾನದ ಕುರಿತು ಕಡಬ ಪ್ರದೇಶದ ಜನರ ಮನಸ್ಸಿನಲ್ಲಿ ಆತಂಕ ಮೂಡುವಂತಾಗಿದೆ.

ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಘೋಷಣೆಯಾಗಿದ್ದ ಕಡಬ ನೂತನ ತಾಲೂಕು ಬಳಿಕ ಅನುಷ್ಠಾನವಾಗದೇ ಇದ್ದುದರಿಂದ ಭ್ರಮನಿರಸನಗೊಂಡಿದ್ದ ಕಡಬದ ಜನತೆ ಬಳಿಕ ಸಿದ್ಧರಾಮಯ್ಯ ನೇತೃತ್ವದ ಸರಕಾರವೂ ಈ ಕುರಿತು ಗಮನಹರಿಸದೇ ಇದ್ದಾಗ ತೀವ್ರ ಅಸಮಾಧಾನಗೊಂಡಿದ್ದರು. ಆನಂತರ ಸಿದ್ಧರಾಮಯ್ಯ ಅವರು ಇತರ ನೂತನ ತಾಲೂಕುಗಳೊಂದಿಗೆ ಕಡಬ ತಾಲೂಕನ್ನು ಮತ್ತೆ ಘೋಷಣೆ ಮಾಡಿದಾಗಲೂ ಜನರಲ್ಲಿ ಹಿಂದಿನ ಉತ್ಸಾಹ ಕಂಡುಬಂದಿರಲಿಲ್ಲ.

ಮೂರು ಬಾರಿ ಮುಂದೂಡಿಕೆ
ಬೈಂದೂರು, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳ ಉದ್ಘಾಟನೆ ನಡೆದು ಕಡಬ ತಾಲೂಕು ಉದ್ಘಾಟನೆಯಾಗದೇ ಇದ್ದಾಗ ಕಡಬದ ಜನರಲ್ಲಿ ಆತಂಕ ಆರಂಭವಾಗಿತ್ತು. ಅದರೊಂದಿಗೆ ಬಳಿಕ 3 ಬಾರಿ ಕಡಬ ತಾಲೂಕು ಉದ್ಘಾಟನೆಗೆ ದಿನ ನಿಗದಿಯಾಗಿ ಮುಂದೂಡಲ್ಪಟ್ಟಿರುವುದು ಜನರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶೀಘ್ರ ಕಡಬ ತಾಲೂಕನ್ನು ಅಧಿಕೃತವಾಗಿ ಉದ್ಘಾಟಿಸುವ ಮೂಲಕ ಜನರ ಮನಸ್ಸಿನಲ್ಲಿರುವ ಭೀತಿಯನ್ನು ಹೋಗಲಾಡಿಸುವ ಅಗತ್ಯವಿದೆ.

ತಾಲೂಕು ರದ್ದಾಗಲು ಸಾಧ್ಯವೇ ಇಲ್ಲ
ಹೊಸ ತಾಲೂಕುಗಳ ಕುರಿತು ಸರಕಾರ ಅಧಿಸೂಚನೆ ಹೊರಡಿಸಿರುವುದರಿಂದಾಗಿ ಆತಂಕ ಪಡಬೇಕಾಗಿಲ್ಲ. ಅನ್ಯ ಕಾರಣಗಳಿಂದಾಗಿ ಉದ್ಘಾಟನೆ ಮುಂದೂಡಲ್ಪಟ್ಟಿದೆ. ಯಾವುದೇ ಕಾರಣಕ್ಕೂ ಕಡಬ ತಾಲೂಕು ರದ್ದಾಗಲು ಸಾಧ್ಯವಿಲ್ಲ. ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ತೆರೆಯುವುದರೊಂದಿಗೆ ಶೀಘ್ರ ಕಡಬ ತಾಲೂಕು ಉದ್ಘಾಟನೆಯಾಗಲಿದೆ.
– ಜಾನ್‌ಪ್ರಕಾಶ್‌ ರೋಡ್ರಿಗಸ್‌
ಕಡಬ ತಹಶೀಲ್ದಾರ್‌

 ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.