ಸುರತ್ಕಲ್‌-ಕಬಕ ಹೆದ್ದಾರಿ ಕಾಮಗಾರಿಗೆ ನೂರೆಂಟು ವಿಘ್ನ


Team Udayavani, May 2, 2018, 11:38 AM IST

2-May-7.jpg

ಕಬಕ : ಸುರತ್ಕಲ್‌-ಕಬಕ ರಾಜ್ಯ ಹೆದ್ದಾರಿ ವಿಸ್ತರಣ ಕಾಮಗಾರಿಗೆ ವಿಘ್ನಗಳೇ ಮುಗಿಯುತ್ತಿಲ್ಲ. ಜಲ್ಲಿ ಕೊರತೆಯಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಈಗ ಆಮೆ ನಡಿಗೆಯಲ್ಲಿ ಸಾಗಿದೆ. ಮಳೆಗಾಲಕ್ಕೂ ಮೊದಲು ಟಾರು ಹಾಕುವ ಕೆಲಸ ಮುಗಿಯುವುದು ಅನುಮಾನ.

ಜನಪ್ರತಿನಿಧಿಗಳಿಗೆ ಚುನಾವಣೆ ನೀತಿ ಸಂಹಿತೆ, ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯ. ಗುತ್ತಿಗೆದಾರನ ಫೋನ್‌ ಸ್ವಿಚ್‌ ಆಫ್. ಮಳೆ ಆರಂಭವಾದರೆ ಅಂತಾರಾಜ್ಯ ಸಂಪರ್ಕ ರಸ್ತೆಯಾಗಿರುವ ವಿಟ್ಲ – ಪುತ್ತೂರು ರಸ್ತೆಯ ಸ್ಥಿತಿಯನ್ನು ನೆನೆದು ಸಾರ್ವಜನಿ ಕರು, ವಾಹನ ಸವಾರರು ಹಾಗೂ ಚಾಲಕರು ಆತಂಕಗೊಂಡಿದ್ದಾರೆ.

42 ಕಿ.ಮೀ.
ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ಆರಂಭಗೊಂಡ ಸುರತ್ಕಲ್‌ – ಕಬಕ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸುರತ್ಕಲ್‌ನಿಂದ ಬಿ.ಸಿ. ರೋಡ್‌ ತನಕ ಕೆಲಸ ಬಹುತೇಕ ಮುಗಿದಿದೆ. ಒಟ್ಟು 18 ಕೋಟಿ ರೂ. ಅನುದಾನದಲ್ಲಿ 42 ಕಿ.ಮೀ. ರಸ್ತೆ ವಿಸ್ತರಣೆ ಹಾಗೂ ಡಾಮರು ಕಾಮಗಾರಿ ಆಗಬೇಕಿದೆ. ರಸ್ತೆ  ಬದಿಯಲ್ಲಿ ಗುಂಡಿಗಳನ್ನು ತೋಡಿ ಯಂತ್ರ ಹಾಗೂ ಕಾರ್ಮಿಕರೊಂದಿಗೆ ಗುತ್ತಿಗೆದಾರರು ಮಾಯವಾಗಿದ್ದರು. ಇದರಿಂದ ಜನರಿಗಾಗುತ್ತಿರುವ ತೊಂದರೆಗಳನ್ನು ವಿವರಿಸಿ ‘ಸುದಿನ’ದಲ್ಲಿ ವರದಿಗಳು ಪ್ರಕಟವಾದ ಮೇಲೆ ಮತ್ತೆ ಕೆಲಸ ಆರಂಭವಾಗಿತ್ತು. ರಸ್ತೆ ಬದಿ ಗುಂಡಿಗಳನ್ನು ಮುಚ್ಚಿದರೂ ಡಾಮರು ಕಾಮಗಾರಿ ಆಗಿಲ್ಲ. ರಸ್ತೆ ಬದಿಯಲ್ಲಿ ಯಂತ್ರಗಳನ್ನಿಟ್ಟು, ಕೆಲಸ ನಿಲ್ಲಿಸಲಾಗಿದೆ.

ವಿಟ್ಲದಿಂದ ಕಬಕ ವರೆಗಿನ ರಸ್ತೆ ತೀರಾ ಇಕ್ಕಟ್ಟಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ತಡೆಗೋಡೆಗಳಿಲ್ಲದ ಹೊಂಡಗಳು, ತೋಟಗಳು, ದೊಡ್ಡ ಪ್ರಮಾಣದಲ್ಲಿ ನೀರು ಹರಿಯುವ ತೋಡುಗಳಿವೆ. ಅರೆಬರೆ ಕಾಮಗಾರಿ ನಡೆಸಿದ್ದರಿಂದ ರಸ್ತೆಯಲ್ಲಿ ನೀರು ಶೇಖರಗೊಂಡು, ಅಪಾಯ ಎದುರಾಗಲಿದೆ.

ಕಬಕ ಸಮೀಪದ ಬಗ್ಗು ಮೂಲೆ ಪ್ರದೇಶ ದಲ್ಲಿ ರಸ್ತೆಯ ಅರ್ಧ ಭಾಗಕ್ಕೆ ಡಾಮರು ಹಾಕಿ, ಇನ್ನರ್ಧ ಭಾಗ ಹಾಗೇ ಬಿಡಲಾಗಿದೆ. ತಿರುವು ಹಾಗೂ ಏರು ರಸ್ತೆ ಇರುವ ಈ ಭಾಗದಲ್ಲಿ ವಾಹನಗಳು ಒಂದೇ ಭಾಗದಲ್ಲಿ ಚಲಿಸಲು ಪ್ರಯತ್ನಿಸುತ್ತಿರುವ ಕಾರಣ ಅಪ ಘಾತಗಳು ಸಂಭವಿಸುತ್ತಿವೆ. ಮಳೆಗಾಲದ ಒಳಗೆ ಪೂರ್ಣ ಪ್ರಮಾಣದ ಕಾಮಗಾರಿ ನಡೆಯದಿದ್ದರೆ ಸವಾರರಿಗೆ ಕಂಟಕ ಎದುರಾಗುವುದು ನಿಶ್ಚಿತ. ಪುತ್ತೂರು ಭಾಗದ ಕಾಮಗಾರಿಯೇ ನನೆಗುದಿಗೆ ಬಿದ್ದಿದೆ. ಈ ರಸ್ತೆಯಲ್ಲಿ ಸಂಚಾರ ದಟ್ಟನೆ ಜಾಸ್ತಿ ಇದ್ದು, ಕಾಮಗಾರಿ ಸ್ಥಗಿತಗೊಂಡರೆ ಮಳೆಗಾಲ ದಲ್ಲಿ ಹೆಚ್ಚು ತೊಂದರೆ ಅನುಭವಿಸಬೇಕಾದೀತು ಎನ್ನುವ ಆತಂಕ ಮೂಡಿದೆ.

ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ವೇಗವಾಗಿ ನಡೆಯುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಕಾಮಗಾರಿ ಬಿಲ್‌ ಪಾವತಿಯಾಗದೆ ಗುತ್ತಿಗೆದಾ ರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಕೆಲವರು ಅಭಿಪ್ರಾಯಿಸಿದ್ದಾರೆ. ಖಚಿತ ಕಾರಣ ತಿಳಿಯಲು ಪ್ರಯತ್ನಿಸಿದರೂ ಗುತ್ತಿಗೆದಾರರ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ.

ಗುತ್ತಿಗೆದಾರರು ಸಿಗುತ್ತಿಲ್ಲ
ಸಹಾಯಕ ಎಂಜಿನಿಯರ್‌ ಪ್ರೀತಂ ಅವರಲ್ಲಿ ಕೇಳಿದರೆ, ಗುತ್ತಿಗೆದಾರರು ಸ್ಪಂದಿಸುತ್ತಿಲ್ಲ, ಸಂಪರ್ಕಕ್ಕೂ ಸಿಗುತ್ತಿಲ್ಲ. ಚುನಾವಣೆ ಬಳಿಕ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಎಂಜಿನಿಯರ್‌ ಉಮೇಶ್‌ ಭಟ್‌ ಮಾತನಾಡಿ, ಈ ಗುತ್ತಿಗೆದಾರರು ಎಲ್ಲಿಯೂ ಸಮರ್ಪಕವಾಗಿ ಕಾಮಗಾರಿ ನಡೆಸಿಲ್ಲ. ಈ ಬಗ್ಗೆ ಸಾರ್ವಜನಿಕ ದೂರುಗಳು ಹಾಗೂ ಪತ್ರಿಕಾವರದಿಗಳನ್ನು ಆಧರಿಸಿ, ರಾಜ್ಯ ಹೆದ್ದಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಅಸಡ್ಡೆಯ ಕಾಮಗಾರಿಯಿಂದ ಉಂಟಾಗುವ ಎಲ್ಲ ನಷ್ಟಗಳನ್ನು ಗುತ್ತಿಗೆದಾರರೇ ಭರಿಸಬೇಕಾಗುತ್ತದೆ. ಚುನಾವಣೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಉಮ್ಮರ್‌ ಜಿ. ಕಬಕ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.