“ಮಾರ್ಚ್‌ 22′ ಬಿಡುಗಡೆ 


Team Udayavani, Aug 27, 2017, 11:05 AM IST

2608mlr101-March22.jpg

ಮಂಗಳೂರು: ಇಂಟರ್‌ನ್ಯಾಶನಲ್‌ ಸಂಸ್ಥೆಯ ಬ್ಯಾನರಿನಡಿ ಸಿದ್ಧಗೊಂಡ, ಮಂಗಳೂರು ಮೂಲದ ದುಬಾೖಯ ಉದ್ಯಮಿ ಹರೀಶ್‌ ಶೇರಿಗಾರ್‌ -ಶರ್ಮಿಳಾ ದಂಪತಿ ನಿರ್ಮಾಣದ, ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ ಕನ್ನಡ ಚಿತ್ರ “ಮಾರ್ಚ್‌ 22′ ಗಣೇಶ ಚತುರ್ಥಿಯ ದಿನವಾದ ಶುಕ್ರವಾರ ರಾಜ್ಯಾದ್ಯಂತ ತೆರೆಕಂಡಿತು.

ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಉಡುಪಿ, ಉತ್ತರ ಕನ್ನಡ ಹಾಗೂ ದ.ಕ. ಜಿಲ್ಲೆ ಸೇರಿ ರಾಜ್ಯದೆಲ್ಲೆಡೆ ಚಿತ್ರ ತೆರೆಕಂಡಿದೆ. ಜ್ಯೋತಿ ಚಿತ್ರ ಮಂದಿರದಲ್ಲಿ ಶ್ರೀದೇವಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಸಮಾರಂಭ ಉದ್ಘಾಟಿಸಿ ಚಿತ್ರಕ್ಕೆ ಶುಭ ಹಾರೈಸಿದರು.

ಸಚಿವ ಯು.ಟಿ. ಖಾದರ್‌, ಶಾಸಕ ಜೆ.ಆರ್‌. ಲೋಬೋ, ವಿಧಾನ ಪರಿಷತ್‌ ಮುಖ್ಯಸಚೇತಕ ಐವನ್‌ ಡಿ’ಸೋಜಾ, ಡಾ| ದೇವರಾಜ್‌ ಕೆ, ಡಾ| ಕೆ.ವಿ. ದೇವಾಡಿಗ, ಡಾ| ಬಿ.ಎಸ್‌. ಶೇರಿಗಾರ್‌, ಕೆ.ಜೆ. ದೇವಾಡಿಗ, ಕೆ.ಆರ್‌. ಶ್ರೀಯಾನ್‌, ಬಾಲಚಂದ್ರ ಕೆ.ಸಿ., ಕರುಣಾಕರ್‌ ಎಂ.ಎಚ್‌, ಆನಂದ್‌ ದುಬಾೖ, ನಂದಕಿಶೋರ್‌, ಸೌಜನ್ಯಾ ಹೆಗ್ಡೆ, ಅಶೋಕ್‌ ಡಿ.ಕೆ., ರಾಜೇಶ್‌ ಕಲ್ಲಡ್ಕ, ಜಗನ್ನಾಥ್‌ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿದ್ದರು.

ನಿರ್ಮಾಪಕ ಹರೀಶ್‌ ಶೇರಿಗಾರ್‌ ಅವರ ಸಹೋದರರಾದ ಪ್ರಕಾಶ್‌ ಶೇರಿಗಾರ್‌, ಶ್ರೀನಿವಾಸ್‌ ಶೇರಿಗಾರ್‌, ಸುಮಿತ್ರಾ ರಮೇಶ್‌ ಬಿಜೂರ್‌, ಸುಮನಾ ಸುಕುಮಾರ್‌ ಅತಿಥಿಗಳನ್ನು ಸತ್ಕರಿಸಿದರು. ಶೇಖರ್‌ ಮೊಲಿ ಚಿತ್ರದ ಕುರಿತು ಮಾಹಿತಿ ನೀಡಿದರು. ಶಾಹಿಲ್‌ ರೈ ಕಾರ್ಯಕ್ರಮ ನಿರೂಪಿಸಿದರು.ಜಲ ಜಾಗೃತಿ ಸಾರುವ ಚಿತ್ರ “ಮಾರ್ಚ್‌ 22′ ಚಿತ್ರ ಸಮಾಜಕ್ಕೆ ಹೊಸ ಮತ್ತು ಅರ್ಥಪೂರ್ಣ ಸಂದೇಶ ನೀಡಲಿದೆ. ಸಾಮಾಜಿಕ ಕಳಕಳಿಯ ಜತೆಗೆ ಸಮಾಜದಲ್ಲಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಬಲ್ಲ ಸದಭಿರುಚಿಯ ಹೊಂದಿದೆ. ಜೀವಜಲದ ಮಹತ್ವ ಮತ್ತು ಜಾಗೃತಿಯ ಸಂದೇಶ ಸಾರಲಿದೆ.

ದುಬಾೖಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಉದ್ಯಮಿ, ಕನ್ನಡಿಗ ಡಾ| ಬಿ.ಆರ್‌. ಶೆಟ್ಟಿ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದು, ಅದು ಬಹಳ ಪ್ರಸಿದ್ಧಿ ಪಡೆದಿದೆ. ನಿರ್ಮಾಪಕ ಹರೀಶ್‌ ಶೇರಿಗಾರ್‌ ಹಾಗೂ ಅಕ್ಷತಾ ರಾವ್‌ ಹಾಡಿರುವ “ಪ್ರೀತಿಗೊಂದು ಸಲಾಂ ಅಂತ ಮನ್ಸು ಅಂತೈತೆ’ ಹಾಡು ಬಹಳಷ್ಟು ಸದ್ದು ಮಾಡಿದೆ.

ತಾರಾಗಣದಲ್ಲಿ ಅನಂತ್‌ನಾಗ್‌, ವಿನಯಾ ಪ್ರಸಾದ್‌, ಗೀತಾ, ಶರತ್‌ ಲೋಹಿತಾಶ್ವ, ಅಶೀಷ್‌ ವಿದ್ಯಾರ್ಥಿ, ಸಾಧು ಕೋಕಿಲಾ, ಜೈ ಜಗದೀಶ್‌, ರವಿ ಕಾಲೆ, ಪದ್ಮಜಾ ರಾವ್‌, ರಮೇಶ್‌ ಭಟ್‌, ಶ್ರೀನಿವಾಸ ಮೂರ್ತಿ, ರವೀಂದ್ರನಾಥ್‌ ಇದ್ದಾರೆ. ಆರ್ಯವರ್ಧನ್‌ ಮತ್ತು ಕಿರಣ್‌ರಾಜ್‌ ನಾಯಕರಾಗಿ, ಮೇಘಶ್ರೀ ಮತ್ತು ದೀಪ್ತಿ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.ಸಂಗೀತ ನಿರ್ದೇನ ಮಣಿಕಾಂತ್‌ ಕದ್ರಿ – ಎನ್‌.ಜೆ. ರವಿಶೇಖರ್‌ ರಾಜಮಗ, ಹಿನ್ನೆಲೆ ಗಾಯಕರಾಗಿ ಎಸ್‌.ಪಿ. ಬಾಲಸುಬ್ರಹ್ಮಣ್ಯಂ, ಕೈಲಾಶ್‌ ಖೇರ್‌, ಕಾರ್ತಿಕ್‌, ಅನುರಾಧಾ ಭಟ್‌, ಹರೀಶ್‌ ಶೇರಿಗಾರ್‌, ರವಿಶೇಕರ್‌ ರಾಜಮಗ, ಅಕ್ಷತಾ ರಾವ್‌, ಮೋಹನ್‌ ಛಾಯಾಚಿತ್ರಗ್ರಹಣ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.